ಕರ್ನಾಟಕದ ಹಲವು ನ್ಯಾಯಾಲಯ, ಪಾಸ್ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ
ಕರ್ನಾಟಕದಲ್ಲಿ ಪದೇ ಪದೇ ಸಾರ್ವಜನಿಕ ಸ್ಥಳಗಳಿಗೆ ಬೆದರಿಕೆ ಕರೆ ಹಾಗೂ ಇ-ಮೇಲ್ ಕಳಿಸುವ ಕಿಡಿಗೇಡಿಗಳ ಹಾವಳಿ ಜಾಸ್ತಿ ಆಗಿದೆ. ಇಷ್ಟು ದಿನಗಳ ಕಾಲ ಶಾಲೆ & ಕಾಲೇಜುಗಳು ಸೇರಿದಂತೆ, ಶಿಕ್ಷಣ ಸಂಸ್ಥೆಗಳನ್ನು ಟಾರ್ಗೆಟ್ ಮಾಡುತ್ತಿದ್ದ ಕಿಡಿಗೇಡಿಗಳು ಇದೀಗ ನೇರವಾಗಿ ಕನ್ನಡ ನಾಡಿನ ನ್ಯಾಯಾಲಯಗಳನ್ನೇ ಗುರಿಯಾಗಿಸಿ ಬಾಂಬ್ ಬೆದರಿಕೆ ಇ-ಮೇಲ್ ಕಳಿಸಿದ್ದಾರೆ. ಈ ರೀತಿಯಾಗಿ, ಬಾಂಬ್ ಬೆದರಿಕೆ ಮೇಲ್ ಬಂದ ಹಿನ್ನೆಲೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣ ಆಗಿತ್ತು.
ಬಾಂಬ್ ಬೆದರಿಕೆ ಸಂದೇಶ ಧಾರವಾಡ ಹೈಕೋರ್ಟ್ ಪೀಠವೂ ಸೇರಿ ಗದಗ ಮತ್ತು ಬಾಗಲಕೋಟೆಯ ಜಿಲ್ಲಾ ನ್ಯಾಯಾಲಯಗಳಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ಸಂಕೀರ್ಣ ಸ್ತಬ್ಧವಾಗಿ ಕೆಲ ಸಮಯದ ತನಕ ಆತಂಕ ಎದುರಾಗಿತ್ತು. ಸಂದೇಶ ಓದಿದ ತಕ್ಷಣ ಧಾರವಾಡ ಹೈಕೋರ್ಟ್ ಪೀಠದ ಕಲಾಪ ಸ್ಥಗಿತಗೊಳಿಸಿ ತಪಾಸಣೆ ನಡೆಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಕೋರ್ಟ್ ಕಟ್ಟಡವನ್ನು ತಕ್ಷಣ ಖಾಲಿ ಮಾಡಿಸಿ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದ ನೇತೃತ್ವದಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಹಾಗಾದರೆ ಈ ಮೇಲ್ ಬಂದಿದ್ದು ಎಲ್ಲಿಂದ? ಎಂಬ ಬಗ್ಗೆ ತಕ್ಷಣವೇ ಶೋಧ ಆರಂಭಿಸಲಾಗಿದೆ.

ಹೈಕೋರ್ಟ್ ಕಟ್ಟಡದಲ್ಲಿ ತಕ್ಷಣ ಪರಿಶೀಲನೆ
ಶಿಕ್ಷಣ ಕಾಶಿ ಎಂಬ ಬಿರುದು ಪಡೆದಿರುವ, ಧಾರವಾಡದ ಪಿಬಿ ರಸ್ತೆ ಹೈಕೋರ್ಟ್ ಪೀಠದ ರಿಜಿಸ್ಟ್ರಾರ್ ಅವರಿಗೆ ಅನಾಮಧೇಯ ಇ-ಮೇಲ್ ಬಂದಿತ್ತು. ಇ-ಮೇಲ್ ಸಂದೇಶ ಪರಿಶೀಲನೆ ನಡೆಸಿದ ವೇಳೆ ಕೋರ್ಟ್ ಆವರಣದಲ್ಲಿ ಸ್ಫೋಟಕ ಇರಿಸಿದ ಬಗ್ಗೆ ಬೆದರಿಕೆ ಹಾಕಲಾಗಿತ್ತು. ಈ ವಿಚಾರ ತಕ್ಷಣವೇ ಪೊಲೀಸರಿಗೆ ತಿಳಿಸಲಾಗಿದೆ. ಕೂಡಲೇ ಅಲರ್ಟ್ ಆದ ಪೊಲೀಸರು, ನ್ಯಾಯಾಧೀಶರು & ವಕೀಲರು, ಸಿಬ್ಬಂದಿ ಹಾಗೂ ಕಕ್ಷಿದಾರರನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಿದ್ದಾರೆ. ಹಾಗೂ ಕೂಡಲೇ ಇಡೀ ಕೋರ್ಟ್ ಆವರಣ ಸೇರಿದಂತೆ ಒಳಗೆಲ್ಲಾ ಪರಿಶೀಲನೆ ನಡೆಸಲಾಗಿದೆ.
ಪಾಸ್ಪೋರ್ಟ್ ಕಚೇರಿಗೂ ಬೆದರಿಕೆ ಇ-ಮೇಲ್
ಕೂಡಲೇ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹುಬ್ಬಳ್ಳಿ ಮತ್ತು ಧಾರವಾಡ ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ಕಟ್ಟಡವನ್ನು ತಮ್ಮ ಸುಪರ್ದಿಗೆ ಪಡೆದು ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ & ಬಾಂಬ್ ಪತ್ತೆ ದಳ ಕೂಡಲೇ ಕೋರ್ಟ್ನ ಮೂಲೆ ಮೂಲೆ ಜಾಲಾಡಿದ್ದಾರೆ. ಇದೇ ರೀತಿ ಗದಗ & ಬಾಗಲಕೋಟೆ ಜಿಲ್ಲಾ ನ್ಯಾಯಾಲಯಗಳಿಗೂ ಬೆದರಿಕೆ ಸಂದೇಶ ಬಂದಿದೆ. ಹಾಗೂ ಬೆಂಗಳೂರಿನ ಕೋರಮಂಗಲದ ಪಾಸ್ಪೋರ್ಟ್ ಕಚೇರಿಗೆ ಕೂಡ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ ಅನಾಮದೇಯರು. ಈ ಕಾರಣಕ್ಕೆ ಎಲ್ಲಾ ಘಟನೆಗಳ ಬಗ್ಗೆ ತನಿಖೆ ಮುಂದುವರಿದಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications