ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: 1 ಲಕ್ಷ ಬಾಂಡ್‌ಗೆ ಆಗ್ರಹಿಸಿದ ಪೊಲೀಸರ ವಿರುದ್ಧ ಯತ್ನಾಳ್ ಗರಂ

ಧಾರವಾಡ: ನಗರದಲ್ಲಿ ನಿನ್ನೆ ನಡೆದ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಯಯುತವಾಗಿ ಉದ್ಯೋಗ ಕೇಳಿ ಬೀದಿಗಿಳಿದಿದ್ದ ಪರೀಕ್ಷಾರ್ಥಿಗಳನ್ನು ಬಂಧಿಸಿರುವ ಪೊಲೀಸರು, ಅವರಿಂದ ಒಂದು ಲಕ್ಷ ರೂಪಾಯಿ ಬಾಂಡ್ ಹಾಗೂ ಮುಂದಿನ ಒಂದು ವರ್ಷದವರೆಗೆ ಯಾವುದೇ ಪ್ರತಿಭಟನೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಡುವಂತೆ ಒತ್ತಾಯಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಕಿಡಿ ಕಾರಿದ್ದಾರೆ.

ತಮ್ಮ ಅಧಿಕೃತ 'ಎಕ್ಸ್' ಖಾತೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಬರೆದುಕೊಂಡಿರುವ ಯತ್ನಾಳ್, "ಮಾನ್ಯ ಗೃಹ ಮಂತ್ರಿಗಳಾದ ಡಾ. ಪರಮೇಶ್ವರ್ ಅವರೇ, ಪೊಲೀಸರಿಗೆ ಈ ರೀತಿ ಮಾಡಲು ಯಾರು ನಿರ್ದೇಶನ ನೀಡಿದ್ದು?" ಎಂದು ನೇರವಾಗಿ ಪ್ರಶ್ನಿಸಿದ್ದಾರೆ. "ಸಂವಿಧಾನ ಬದ್ಧವಾದ ಹೋರಾಟವನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ಅಷ್ಟಕ್ಕೂ ಆ ಯುವಕರು ಕೇಳಿದ್ದು ತಮ್ಮ ಹಕ್ಕಿನ ನೌಕರಿಯೇ ಹೊರತು ಬೇರೇನೂ ಅಲ್ಲ. ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಪರೀಕ್ಷಾರ್ಥಿಗಳ ಕಿಚ್ಚು ಸರ್ಕಾರಕ್ಕೆ ತೀವ್ರ ಇರುಸು ಮುರುಸು ಉಂಟುಮಾಡಿದೆ" ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

Dharwad

ನಿರುದ್ಯೋಗದಿಂದ ಕಂಗೆಟ್ಟಿರುವ ಯುವಜನತೆಯ ನ್ಯಾಯಸಮ್ಮತವಾದ ಹೋರಾಟ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಹೀಗಾಗಿಯೇ ಯಾವುದೇ ಆದಾಯವಿಲ್ಲದ ಬಡ ಉದ್ಯೋಗಾಕಾಂಕ್ಷಿಗಳಿಗೆ 1 ಲಕ್ಷ ರೂಪಾಯಿಗಳ ಬಾಂಡ್ ಕೊಡಿ ಹಾಗೂ 1 ವರ್ಷ ಯಾವುದೇ ಹೋರಾಟ ಮಾಡಬಾರದೆಂದು ಪೊಲೀಸರ ಮೂಲಕ ಧಮ್ಕಿ ಹಾಕಿಸಲಾಗುತ್ತಿದೆ ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಸರ್ಕಾರದ ಸರ್ವಾಧಿಕಾರಿ ಧೋರಣೆ ಹಾಗೂ ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಅವರು ಬಣ್ಣಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಅಭಯ ನೀಡಿದ ಶಾಸಕ

ಇದೇ ವೇಳೆ, ಪೊಲೀಸ್ ಕ್ರಮದಿಂದ ಆತಂಕಕ್ಕೊಳಗಾಗಿರುವ ಉದ್ಯೋಗಾಕಾಂಕ್ಷಿಗಳಿಗೆ ಧೈರ್ಯ ತುಂಬಿರುವ ಯತ್ನಾಳ್, "ಉದ್ಯೋಗಾಕಾಂಕ್ಷಿಗಳು ಸರ್ಕಾರದ ಯಾವುದೇ ಗೊಡ್ಡು ಬೆದರಿಕೆಗೆ ಹೆದರುವ ಅವಶ್ಯಕತೆಯಿಲ್ಲ. ಯಾರೊಬ್ಬರೂ ಇಂತಹ ಕಾನೂನುಬಾಹಿರ ಮುಚ್ಚಳಿಕೆಗಳನ್ನು ಬರೆದುಕೊಡಬೇಡಿ. ಸರ್ಕಾರದ ಈ ಸಂವಿಧಾನ ವಿರೋಧಿ ನಡೆಯನ್ನು ನಾವು ಕಾನೂನಾತ್ಮಕವಾಗಿಯೇ ಎದುರಿಸೋಣ. ನಿಮ್ಮ ನ್ಯಾಯಯುತ ಹೋರಾಟದಲ್ಲಿ ಹಾಗೂ ಉದ್ಯೋಗಾಕಾಂಕ್ಷಿಗಳ ಬೆಂಬಲಕ್ಕೆ ನಾನು ಸದಾ ನಿಲ್ಲುತ್ತೇನೆ" ಎಂದು ಅಭಯ ನೀಡಿದ್ದಾರೆ.

Abdul Jabbar: ಕಾಂಗ್ರೆಸ್‌ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ
Abdul Jabbar: ಕಾಂಗ್ರೆಸ್‌ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ

ಒಟ್ಟಿನಲ್ಲಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯ ಇದೀಗ ರಾಜ್ಯಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರದ ಈ ನಡೆಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲೂ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಮುಂದಿನ ದಿನಗಳಲ್ಲಿ ಉದ್ಯೋಗಾಕಾಂಕ್ಷಿಗಳ ಈ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+