Get Updates
Get notified of breaking news, exclusive insights, and must-see stories!

ನನಗೂ ಡಯಾಬಿಟಿಸ್‌ ಇತ್ತು; ನಾನು ಸಕ್ಕರೆ ಕಾಯಿಲೆ ಹೀಗೆ ಕಡಿಮೆ ಮಾಡಿಕೊಂಡೆ: ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್‌ 24: ನಾನು 30 ವರ್ಷಗಳಿಂದ ಸಕ್ಕರೆ ಕಾಯಿಲೆಯನ್ನು ನಿರ್ವಹಿಸುತ್ತಿದ್ದೇನೆ: ವ್ಯಾಯಾಮ, ಶಿಸ್ತಿನ ಜೀವನಶೈಲಿಯಿಂದ ಡಯಾಬಿಟಿಕ್ ನಿಯಂತ್ರಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆಯ ಮಾತುಗಳನ್ನಾಡಿದರು.

ಸ್ಟಂಟ್ ಹಾಕಿಸಿಕೊಂಡು 24 ವರ್ಷ ಆಯ್ತು. ಪಕ್ಷದ ಕೆಲಸನೂ ಮಾಡ್ತಿದ್ದೀನಿ, ಸರ್ಕಾರದ ಕೆಲಸನೂ ಮಾಡ್ತಿದ್ದೀನಿ, ವ್ಯಾಯಾಮನೂ ಮಾಡ್ತಿದ್ದೀನಿ. ಅರಾಮಾಗಿ ಎಲ್ಲಾ ಕೆಲಸ, ಕಾರ್ಯಗಳಲ್ಲೂ ಭಾಗವಹಿಸುತ್ತಿದ್ದೇನೆ. ಆದರೆ ವೈದ್ಯರು ಹೇಳಿದಂತೆ ಕೇಳುತ್ತೇನೆ. ಹೀಗಾಗಿ ಎಲ್ಲವನ್ನೂ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದೇನೆ ಎನ್ನುವ ತಮ್ಮದೇ ಅನುಭವಗಳ ಆರೋಗ್ಯ ಸಂದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು.

Diabetes can be controlled with exercise and a disciplined lifestyle Says Cm Siddaramaiah

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ "ಗೃಹ ಆರೋಗ್ಯ: ಆರೋಗ್ಯ ಸೇವೆ ಮನೆ ಬಾಗಿಲಿಗೆ" ನೂತನ‌ ಮಹತ್ವದ ಜನಾರೋಗ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ, ರೋಗಿಗಳೊಂದಿಗೆ zoom call ನಲ್ಲಿ ಮಾತುಕತೆ ನಡೆಸಿದ ಬಳಿಕ ಮಾತನಾಡಿ, ಕಾಯಿಲೆಗಳನ್ನು, ಆರೋಗ್ಯ ಸಮಸ್ಯೆಗಳನ್ನು ಗುಟ್ಟಾಗಿ ಇಟ್ಟು ಅನಾಹುತ ತಂದುಕೊಳ್ಳಬಾರದು. ಆಸ್ಪತ್ರೆಗೆ ಹೋಗಲು ಸಾಧ್ಯವಾಗದ ಬಡವರಿಗೂ ತಪಾಸಣೆ ಮತ್ತು ಚಿಕಿತ್ಸೆ ಒದಗಿಸಲು ಸಾಧ್ಯ ಆಗಲಿ ಎನ್ನುವ ಕಾರಣದಿಂದಲೇ ಮನೆಬಾಗಿಲಿಗೆ ಆರೋಗ್ಯ ಕಾರ್ಯಕ್ರಮ ಆರಂಭಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಬಹಳ ಜನರಿಗೆ ವೈದ್ಯರಿಗೆ ತಪಾಸಣೆ ವೆಚ್ಚ ಕೊಡುವುದಕ್ಕೂ ಸಾಧ್ಯವಾಗುವುದಿಲ್ಲ. ಆದರೆ ಇಂಥವರಿಗೂ ಆರೋಗ್ಯದ ಹಕ್ಕು ಇದೆ. ತಪಾಸಣೆಯಿಂದ ಸಾಂಕ್ರಾಮಿಕ ರೋಗಗಳು, ಸಾಂಕ್ರಾಮಿಕವಲ್ಲದ ರೋಗಗಳೂ ಪತ್ತೆಯಾಗುತ್ತವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದರು.

ಬಹಳ ಜನ ಆರೋಗ್ಯ ತಪಾಸಣೆಯನ್ನೇ ಮಾಡಿಸಿಕೊಂಡಿರುವುದಿಲ್ಲ. ಹೀಗಾಗಿ ಮನೆ ಮನೆಗೆ ತೆರಳಿ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸಿ ಉಚಿತ ಚಿಕಿತ್ಸೆ ನೀಡುವ ಮಹತ್ವದ ಕಾರ್ಯಕ್ರಮ ಆರಂಭಿಸಿದ್ದೇವೆ. ಮನೆ ಬಾಗಿಲಿಗೆ ಆರೋಗ್ಯ ಸವಲತ್ತು ಒದಗಿಸುವ ಗುರಿ ನಮ್ಮದಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದರು.

ಕ್ಯಾನ್ಸರ್ ಕೂಡಿ ಆರಂಭದಲ್ಲೇ ಪತ್ತೆಯಾದರೆ ಗುಣಪಡಿಸಲು ಸಾಧ್ಯವಿದೆ. ಸಕ್ಕರೆ ಕಾಯಿಲೆ, ರಕ್ತದೊತ್ತಡವನ್ನು ಯಶಸ್ವಿಯಾಗಿ ನಿಯಂತ್ರಿಸಬಹುದು. ಶಿಸ್ತಿನ ವ್ಯಾಯಾಮಯುಕ್ತ ಜೀವನಶೈಲಿ ಮುಖ್ಯ ಎಂದರು. ಒತ್ತಡದ ಜೀವನದಿಂದಲೂ ಕಾಯಿಲೆಗಳು ಬರುತ್ತವೆ. ಈಗ ರಸಾಯನಿಕ ಬಳಸಿದ ಆಹಾರದ ಸೇವನೆ ಹೆಚ್ಚಾಗಿರುವುದರಿಂದಲೂ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದರು.

ಇನ್ನೂ ಮೊಟ್ಟೆ, ಮೀನು, ಮಾಂಸ ತಿಂದರೆ ಡಾಯಾಬಿಟಿಕ್ ಬರುತ್ತದೆ, ಹೆಚ್ಚುತ್ತದೆ ಎನ್ನುವ ತಪ್ಪುಕಲ್ಪನೆ ಇದೆ. ಹಾಗೇನೂ ಇಲ್ಲ. ಮೊಟ್ಟೆ ಮಾಂಸ ಬಿಟ್ಟು ಬರೀ ಅನ್ನ ತಿಂದರೆ ಹೇಗೆ ? ಬ್ಯಾಲೆನ್ಸ್ ಆಹಾರ ಸೇವನೆ ಮುಖ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದರು.

ಇನ್ನೂ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕರ್ನಾಟಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ವಿಧಾನ ಪರಿಷತ್ ಸದಸ್ಯರಾದ ಸುಧಾಮ ದಾಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಆರೋಗ್ಯ ಇಲಾಖೆ ಪ್ರಧಾನ‌ ಕಾರ್ಯದರ್ಶಿ ಹರ್ಷಗುಪ್ತ ಸೇರಿದಂತೆ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+