ಎಷ್ಟು ದಿನ ಬದುಕಿರುತ್ತೀನೋ ಗೊತ್ತಿಲ್ಲ: ಮುತ್ತಪ್ಪ ರೈ
Recommended Video
ಬೆಂಗಳೂರು, ಜನವರಿ 20: 'ಕ್ಯಾನ್ಸರ್ ಕಾಯಿಲೆ ಬಾಧಿಸುತ್ತಿರುವುದು ನಿಜ, ಇನ್ನೆಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ' ಎಂದು ಜಯಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಮುತ್ತಪ್ಪ ರೈ ಹೇಳಿದ್ದಾರೆ.
ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಲೆಂದೇ ಸೋಮವಾರ ಸುದ್ದಿಗೋಷ್ಠಿ ಕರೆದು ಅವರು ಮಾತನಾಡಿದ್ದಾರೆ.
'ಕ್ಯಾನ್ಸರ್ ನನ್ನನ್ನು ಸಾವಿನ ಅಂಚಿಗೆ ತಳ್ಳಿರುವುದು ನಿಜ ಆದರೆ ಪವಾಡಸದೃಶ ರೀತಿಯಲ್ಲಿ ಹೇಗೋ ಬದುಕುತ್ತಿದ್ದೀನಿ' ಎಂದು ಕೃಶ ದನಿಯಲ್ಲಿ ಮುತ್ತಪ್ಪ ರೈ ಹೇಳಿದ್ದಾರೆ.
ಹಲವು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮುತ್ತಪ್ಪ ರೈ, ದೆಹಲಿ, ಚೆನ್ನೈ, ಬೆಂಗಳೂರಿನ ಪ್ರಮುಖ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಹೆಚ್ಚಿನ ಚೇತರಿಕೆ ಅವರ ಆರೋಗ್ಯದಲ್ಲಿ ಕಂಡು ಬಂದಿಲ್ಲ.

ಮೊದಲು ಬೆನ್ನು ನೋವು ಕಾಣಿಸಿಕೊಂಡಿತು: ರೈ
ತಮ್ಮ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ನೀಡಿದ ಮುತ್ತಪ್ಪ ರೈ, 'ಕೆಲವು ತಿಂಗಳುಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗುವಾಗ ಬೆನ್ನು ನೋವು ಕಾಣಿಸಿಕೊಂಡಿತು, ನಂತರ ಪರೀಕ್ಷೆ ಮಾಡಿಸಿದಾಗ ಯಕೃತ್ (ಲಿವರ್) ಕ್ಯಾನ್ಸರ್ ಇರುವುದು ಪತ್ತೆಯಾಯಿತು' ಎಂದರು.

ಮೆದುಳಿಗೆ ಕ್ಯಾನ್ಸರ್ ತಗುಲಿತ್ತು: ಮುತ್ತಪ್ಪ ರೈ
'ಲಿವರ್ ಕ್ಯಾನ್ಸರ್ ಗುಣವಾಯಿತು ಆದರೆ ಮೆದುಳಿನಲ್ಲಿ ಕ್ಯಾನ್ಸರ್ ಗಡ್ಡೆ ಪತ್ತೆ ಆಯಿತು. ಕೆಲವು ತಿಂಗಳಷ್ಟೆ ಬದುಕುವುದಾಗಿ ವೈದ್ಯರು ಹೇಳಿಬಿಟ್ಟಿದ್ದಾರೆ ಹಾಗಾಗಿ ಕೊನೆಯ ದಿನಗಳನ್ನು ಕಳೆಯಲು ಬಿಡದಿಗೆ ಬಂದಿದ್ದೇನೆ' ಎಂದು ಕೊನೆಯ ದಿನಗಳನ್ನು ಎಣಿಸುತ್ತಿರುವುದಾಗಿ ಒಂದು ಕಾಲದ ಭೂಗತ ದೊರೆ ಮುತ್ತಪ್ಪ ರೈ ಹೇಳಿದರು.

ಐದು ಗುಂಡು ಬಿದ್ದರೂ ಬದುಕಿದ್ದೇನೆ: ಮುತ್ತಪ್ಪ ರೈ
'ನನಗೀಗ 68 ವರ್ಷ, ಐದು ಗುಂಡು ಬಿದ್ದಿದ್ದರೂ ಬದುಕಿ ಬಂದಿದ್ದೇನೆ, ಸಾವಿಗೆ ಎಂದೂ ಹೆದರಿದವನು ನಾನಲ್ಲ. ಅದೇ ಇಚ್ಛಾಶಕ್ತಿಯಿಂದ ಕ್ಯಾನ್ಸರ್ ಅನ್ನು ಎದುರಿಸಿ ಬದುಕುತ್ತಿದ್ದೇನೆ, ಜೀವ ಇರುವವರೆಗೂ ಸಮಾಜ ಸೇವೆ ಮುಂದುವರೆಸುತ್ತೀನಿ' ಎಂದು ಹೇಳಿದ್ದಾರೆ.

ಆಸ್ತಿ ಹಂಚಿಕೆ ಮಾಡಿದ್ದೇನೆ: ಮುತ್ತಪ್ಪ ರೈ
ತಮ್ಮ ಆಸ್ತಿ ಬಗ್ಗೆಯೂ ಮಾತನಾಡಿದ ಮುತ್ತಪ್ಪ ರೈ, 'ವರ್ಷಕ್ಕೆ 25-30 ಕೋಟಿ ತೆರಿಗೆ ಕಟ್ಟುತ್ತಿದ್ದೇನೆ, ಆಸ್ತಿ ಕುರಿತಾಗಿ ಈಗಾಗಲೇ ವಿಲ್ ಮಾಡಿಸಿಟ್ಟಿದ್ದೀನಿ, ಮಕ್ಕಳಿಗೂ ವಿಷಯ ಹೇಳಿದ್ದೀನಿ' ಎಂದರು.

ಜೊತೆ ಗಿದ್ದವರಿಗೆ ನಿವೇಶನ ಹಂಚುತ್ತೇನೆ: ಮುತ್ತಪ್ಪ ರೈ
'ನನ್ನ ಜೊತೆಗೆ ಇಷ್ಟು ದಿನ ಇದ್ದ ಎಲ್ಲರಿಗೂ ಒಂದೊಂದು ನಿವೇಶನ ಕೊಡುತ್ತಿದ್ದೀನಿ. ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ, ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಿಸಿದ್ದೇನೆ' ಎಂದು ಹೇಳಿದರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ












Click it and Unblock the Notifications