ಐಎಸ್ಐಎಸ್ ಸೇರಲು ಹೊರಟಿದ್ದ ಭಟ್ಕಳದ ಯುವಕ ಸೆರೆ
ಬೆಂಗಳೂರು, ಏಪ್ರಿಲ್ 06 : ಐಎಸ್ಐಎಸ್ ಉಗ್ರ ಸಂಘಟನೆ ಜೊತೆ ನಂಟು ಹೊಂದಿದ ಆರೋಪದ ಮೇಲೆ ಭಟ್ಕಳ ಮೂಲದ ರಾವೂಫ್ ಅಹ್ಮದ್ ಎಂಬ ಯುವಕನನ್ನು ವಶಕ್ಕೆ ಪಡೆಯಲಾಗಿದೆ. ಹವಾಲಾ ಹಣ ಸಾಗಣೆಯಲ್ಲಿಯೂ ಅಹ್ಮದ್ ಭಾಗಿಯಾಗಿದ್ದಾನೆ ಎಂದು ಶಂಕಿಸಲಾಗಿದೆ.
ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಪುಣೆ ವಿಮಾನ ನಿಲ್ದಾಣದಲ್ಲಿ ರಾವೂಫ್ ಅಹ್ಮದ್ನನ್ನು ವಶಕ್ಕೆ ಪಡೆದಿದ್ದು, ರಾಷ್ಟ್ರೀಯ ತನಿಖಾ ದಳಕ್ಕೆ ಆತನನ್ನು ಹಸ್ತಾಂತರ ಮಾಡುವ ಸಾಧ್ಯತೆ ಇದೆ. ದುಬೈಗೆ ಹಾರುವ ತಯಾರಿಯಲ್ಲಿದ್ದಾಗ ಅಹ್ಮದ್ನನ್ನು ವಶಕ್ಕೆ ಪಡೆಯಲಾಗಿದೆ. [ಕಲಬುರಗಿಯ ಸಿರಾಜುದ್ದೀನ್ ತನಿಖೆ NIA]

ಅಹ್ಮದ್ ದುಬೈ ಮೂಲಕ ಸಿರಿಯಾಕ್ಕೆ ಹೋಗಲು ಪ್ರಯತ್ನ ನಡೆಸಿದ್ದಾನೆಯೇ? ಎಂಬ ಬಗ್ಗೆ ಇನ್ನೂ ಖಚಿತವಾದ ಮಾಹಿತಿ ಸಿಕ್ಕಿಲ್ಲ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಒನ್ ಇಂಡಿಯಾಕ್ಕೆ ಮಾಹಿತಿ ನೀಡಿದ್ದಾರೆ. ಅಹ್ಮದ್ ಮೇಲೆ ಕಣ್ಣಿಟ್ಟಿದ್ದ ಅಧಿಕಾರಿಗಳು ಆತನ ಮೊಬೈಲ್ ಸಂದೇಶಗಳ ಮಾಹಿತಿ ಆಧರಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.[ಯಾಸಿನ್ ಭಟ್ಕಳ್ ಪರಾರಿಗೆ ಸಂಚು ರೂಪಿಸಿದ್ದ ವಿದ್ಯಾರ್ಥಿ]
ಹವಾಲಾ ಹಣ ಸಾಗಣೆ ಶಂಕೆ? : ಅಹ್ಮದ್ ಐಎಸ್ಐಎಸ್ ಉಗ್ರ ಸಂಘಟನೆಗೆ ಹವಾಲಾ ಹಣವನ್ನು ಸಾಗಣೆ ಮಾಡುತ್ತಿದ್ದ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಸಂಘಟನೆ ಜೊತೆ ನಂಟು ಹೊಂದಿದ ಆರೋಪದ ಮೇಲೆ ದೇಶದ ವಿವಿಧ ಸ್ಥಳಗಳಲ್ಲಿ 14 ಜನರನ್ನು ಕೆಲವು ದಿನಗಳ ಹಿಂದೆ ಬಂಧಿಸಲಾಗಿತ್ತು. ಈತನೂ ಅವರ ಜೊತೆ ಸಂಪರ್ಕದಲ್ಲಿದ್ದನೇ? ಎಂದು ತನಿಖೆ ನಡೆಸಲಾಗುತ್ತಿದೆ. [ಭಟ್ಕಳ ಮೂಲದ ಶಫಿ ಭಾರತದಲ್ಲಿ ISIS ಮುಖ್ಯಸ್ಥ]
ಅಹ್ಮದ ಭಟ್ಕಳದ ಆಯೇಷಾ ಮಸೀದಿ ಕಾಪೌಂಡ್ ನಿವಾಸಿಯಾಗಿದ್ದಾನೆ. ಹಲವು ತಿಂಗಳುಗಳಿಂದ ಕೇಂದ್ರ ಗುಪ್ತಚರ ಇಲಾಖೆ ಈತನ ಚಟುವಟಿಕೆ ಮೇಲೆ ಕಣ್ಣಿಟ್ಟಿತ್ತು. ಕೆಲವು ತಿಂಗಳ ಹಿಂದೆ ಎನ್ಐಎ ಮೊಹಮದ್ ಶಫಿ ಅರ್ಮರ್ ಎಂಬುವವನನ್ನು ಬಂಧಿಸಿತ್ತು. ಭಾರತ ಮತ್ತು ಉಗ್ರರ ನಡುವಿನ ಕೊಂಡಿಯಾಗಿ ಆತ ಕೆಲಸ ಮಾಡುತ್ತಿದ್ದ. ಆತನೂ ಭಟ್ಕಳ ಮೂಲದವಾಗಿದ್ದಾನೆ.
-
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್












Click it and Unblock the Notifications