ಐಎಸ್ಐಎಸ್ ಸೇರಲು ಹೊರಟಿದ್ದ ಭಟ್ಕಳದ ಯುವಕ ಸೆರೆ
ಬೆಂಗಳೂರು, ಏಪ್ರಿಲ್ 06 : ಐಎಸ್ಐಎಸ್ ಉಗ್ರ ಸಂಘಟನೆ ಜೊತೆ ನಂಟು ಹೊಂದಿದ ಆರೋಪದ ಮೇಲೆ ಭಟ್ಕಳ ಮೂಲದ ರಾವೂಫ್ ಅಹ್ಮದ್ ಎಂಬ ಯುವಕನನ್ನು ವಶಕ್ಕೆ ಪಡೆಯಲಾಗಿದೆ. ಹವಾಲಾ ಹಣ ಸಾಗಣೆಯಲ್ಲಿಯೂ ಅಹ್ಮದ್ ಭಾಗಿಯಾಗಿದ್ದಾನೆ ಎಂದು ಶಂಕಿಸಲಾಗಿದೆ.
ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಪುಣೆ ವಿಮಾನ ನಿಲ್ದಾಣದಲ್ಲಿ ರಾವೂಫ್ ಅಹ್ಮದ್ನನ್ನು ವಶಕ್ಕೆ ಪಡೆದಿದ್ದು, ರಾಷ್ಟ್ರೀಯ ತನಿಖಾ ದಳಕ್ಕೆ ಆತನನ್ನು ಹಸ್ತಾಂತರ ಮಾಡುವ ಸಾಧ್ಯತೆ ಇದೆ. ದುಬೈಗೆ ಹಾರುವ ತಯಾರಿಯಲ್ಲಿದ್ದಾಗ ಅಹ್ಮದ್ನನ್ನು ವಶಕ್ಕೆ ಪಡೆಯಲಾಗಿದೆ. [ಕಲಬುರಗಿಯ ಸಿರಾಜುದ್ದೀನ್ ತನಿಖೆ NIA]

ಅಹ್ಮದ್ ದುಬೈ ಮೂಲಕ ಸಿರಿಯಾಕ್ಕೆ ಹೋಗಲು ಪ್ರಯತ್ನ ನಡೆಸಿದ್ದಾನೆಯೇ? ಎಂಬ ಬಗ್ಗೆ ಇನ್ನೂ ಖಚಿತವಾದ ಮಾಹಿತಿ ಸಿಕ್ಕಿಲ್ಲ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಒನ್ ಇಂಡಿಯಾಕ್ಕೆ ಮಾಹಿತಿ ನೀಡಿದ್ದಾರೆ. ಅಹ್ಮದ್ ಮೇಲೆ ಕಣ್ಣಿಟ್ಟಿದ್ದ ಅಧಿಕಾರಿಗಳು ಆತನ ಮೊಬೈಲ್ ಸಂದೇಶಗಳ ಮಾಹಿತಿ ಆಧರಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.[ಯಾಸಿನ್ ಭಟ್ಕಳ್ ಪರಾರಿಗೆ ಸಂಚು ರೂಪಿಸಿದ್ದ ವಿದ್ಯಾರ್ಥಿ]
ಹವಾಲಾ ಹಣ ಸಾಗಣೆ ಶಂಕೆ? : ಅಹ್ಮದ್ ಐಎಸ್ಐಎಸ್ ಉಗ್ರ ಸಂಘಟನೆಗೆ ಹವಾಲಾ ಹಣವನ್ನು ಸಾಗಣೆ ಮಾಡುತ್ತಿದ್ದ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಸಂಘಟನೆ ಜೊತೆ ನಂಟು ಹೊಂದಿದ ಆರೋಪದ ಮೇಲೆ ದೇಶದ ವಿವಿಧ ಸ್ಥಳಗಳಲ್ಲಿ 14 ಜನರನ್ನು ಕೆಲವು ದಿನಗಳ ಹಿಂದೆ ಬಂಧಿಸಲಾಗಿತ್ತು. ಈತನೂ ಅವರ ಜೊತೆ ಸಂಪರ್ಕದಲ್ಲಿದ್ದನೇ? ಎಂದು ತನಿಖೆ ನಡೆಸಲಾಗುತ್ತಿದೆ. [ಭಟ್ಕಳ ಮೂಲದ ಶಫಿ ಭಾರತದಲ್ಲಿ ISIS ಮುಖ್ಯಸ್ಥ]
ಅಹ್ಮದ ಭಟ್ಕಳದ ಆಯೇಷಾ ಮಸೀದಿ ಕಾಪೌಂಡ್ ನಿವಾಸಿಯಾಗಿದ್ದಾನೆ. ಹಲವು ತಿಂಗಳುಗಳಿಂದ ಕೇಂದ್ರ ಗುಪ್ತಚರ ಇಲಾಖೆ ಈತನ ಚಟುವಟಿಕೆ ಮೇಲೆ ಕಣ್ಣಿಟ್ಟಿತ್ತು. ಕೆಲವು ತಿಂಗಳ ಹಿಂದೆ ಎನ್ಐಎ ಮೊಹಮದ್ ಶಫಿ ಅರ್ಮರ್ ಎಂಬುವವನನ್ನು ಬಂಧಿಸಿತ್ತು. ಭಾರತ ಮತ್ತು ಉಗ್ರರ ನಡುವಿನ ಕೊಂಡಿಯಾಗಿ ಆತ ಕೆಲಸ ಮಾಡುತ್ತಿದ್ದ. ಆತನೂ ಭಟ್ಕಳ ಮೂಲದವಾಗಿದ್ದಾನೆ.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications