Diesel Price: ರಾಜ್ಯ ಸರ್ಕಾರದಿಂದ ಜನತೆಗೆ ಹೊಸ ಶಾಕ್! ಡೀಸೆಲ್ ಬೆಲೆ 2 ರೂಪಾಯಿ ಹೆಚ್ಚಳ
ಹಲವು ಭಾಗ್ಯಗಳನ್ನು ನೀಡುತ್ತೇವೆ ಎಂದು ಅಧಿಕಾರಕ್ಕೆ ಬಂದಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದೀಗ ಒಂದೊಂದಾಗೆ ಬೆಲೆ ಏರಿಕೆ ಭಾಗ್ಯಗಳನ್ನು ಕರುಣಿಸುತ್ತಿದೆ. ಹಾಲಿನ ದರ ಏರಿಕೆ, ಕಸ ಸಂಗ್ರಹಣೆಗೂ ಶುಲ್ಕ ವಿಧಿಸುವ ನಿರ್ಧಾರದ ಬಳಿಕ ಇದೀಗ ಏಕಾಏಕಿ ಡೀಸೆಲ್ ಮೇಇನ ಮಾರಾಟ ತೆರಿಗೆಯನ್ನು ಹೆಚ್ಚಿಸಲಾಗಿದೆ. ಡೀಸೆಲ್ ಮೇಲಿನ ತೆರಿಗೆಯನ್ನು ಶೇ 2.73 ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ನೀಡಿದ್ದು ರಾಜ್ಯದಲ್ಲಿ ಡೀಸೆಲ್ ಮತ್ತಷ್ಟು ದುಬಾರಿಯಾಗಲಿದೆ.
ಶೇ. 2.73 ತೆರಿಗೆ ಹೆಚ್ಚಳವಾದ ಬಳಿಕ ಪ್ರತಿ ಲೀಟರ್ ಡೀಸೆಲ್ ಬೆಲೆ ಇದೀಗ 2 ರೂಪಾಯಿ ಹೆಚ್ಚಾಗಲಿದೆ. ಈ ಮೊದಲು ಶೇ. 18.44 ರಷ್ಟು ಇದ್ದ ತೆರಿಗೆಯನ್ನು ಈಗ 21.17ಕ್ಕೆ ಏರಿಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಡೀಸೆಲ್ ಬೆಲೆ 88.99 ರೂಪಾಯಿಗೆ ಮಾರಾಟವಾಗುತ್ತಿದೆ. ಈಗ ಮತ್ತಷ್ಟು ದುಬಾರಿಯಾಗಲಿದೆ.

ರಾಜ್ಯದ ಜನರ ಮೇಲಿನ ಹೊರೆ ಕಡಿಮೆ ಮಾಡುವುದಾಗಿ ಭಾಷಣ ಮಾಡಿ, ಜನಪರ ಆಡಳಿತ ನೀಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಇದೀಗ ಜನರಿಗೆ ಒಂದರ ಮೇಲೋಂದು ಬೆಲೆ ಏರಿಕೆ ಶಾಕ್ ಕೊಡುತ್ತಲೇ ಇದೆ. ಬಿಜೆಪಿ ಭ್ರಷ್ಟಾಚಾರದಿಂದ ಬೇಸತ್ತು ಕಾಂಗ್ರೆಸ್ಗೆ ಮತ ಹಾಕಿದ್ದವರಿಗೆ ಇದೀಗ ತಲೆ ಚಚ್ಚಿಕೊಳ್ಳುವಂತಾಗಿದೆ.
ಒಂದೊಂದೇ ಹೊರೆ ಹೆಚ್ಚಿಸುತ್ತಿರುವ ಸರ್ಕಾರ
ಈಗಾಗಲೇ ಹಾಲಿನ ದರ, ವಿದ್ಯುತ್ ದರ ಹೆಚ್ಚಳ ಮಾಡಿದೆ. ಇದೀಗ ಡೀಸೆಲ್ ದರ ಏರಿಕೆಯಿಂದ ಹಲವು ದಿನಬಳಕೆ ವಸ್ತುಗಳ ಸಾಗಾಣೆ ವೆಚ್ಚ ಕೂಡ ಹೆಚ್ಚಾಗಲಿದ್ದು ಅವುಗಳ ಬೆಲೆ ಕೂಡ ಗಗನಕ್ಕೇರುವ ಸಾಧ್ಯತೆ ಇದೆ. ಕಳೆದ ವರ್ಷ ಕೂಡ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಕೆ ಮಾಡಿತ್ತು. ತೆರಿಗೆ ಹೆಚ್ಚಿಸಿದ್ದ ಕಾರಣ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ದುಬಾರಿಯಾಗಿತ್ತು.
ಕಸ ಸಂಗ್ರಹಣೆಗೂ ಶುಲ್ಕ
ಬೆಂಗಳೂರಿನಲ್ಲಿ ಕಸ ಸಂಗ್ರಹಣೆಗೂ ಶುಲ್ಕ ವಿಧಿಸಲು ಮುಂದಾಗಿದೆ. ಅಂಗಡಿಗಳ ಕಸಕ್ಕೂ ತೆರಿಗೆ ಕಟ್ಟಬೇಕು ಎಂದು ಬೆಂಗಳೂರು ಮಹಾನಗರ ಪಾಲಿಕೆ ಸೂಚನೆ ಕೊಟ್ಟಿದೆ. ಬಿಬಿಎಂಪಿ ಬಜೆಟ್ನಲ್ಲೂ ಈ ಬಗ್ಗೆ ಘೋಷಣೆ ಮಾಡಿದ್ದು ಕಸ ಸಂಗ್ರಹಣೆ ಶುಲ್ಕದ ಮೂಲಕ 600 ಕೋಟಿ ರೂಪಾಯಿ ಆದಾಯ ಸಂಗ್ರಹಿಸುವ ಗುರಿ ಹೊಂದಲಾಗಿದೆ.
ವ್ಯಾಪಕ ಆಕ್ರೋಶ
ಉಚಿತ ಘೋಷಣೆಗಳನ್ನು ಕೊಡಲು ಜನರ ಜೇಬಿಗೆ ಕತ್ತರಿ ಹಾಕುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಜನಸಾಮಾನ್ಯರಿಗೆ ದಿನೇ ದಿನೇ ಹೊರೆ ಹೆಚ್ಚಾಗುತ್ತಿದ್ದು, ನಿಮ್ಮ ಕೂಲಿ ಕೊಡಲು ಆಗದಿದ್ದರೆ ಉಚಿತ ಭಾಗ್ಯಗಳನ್ನು ನಿಲ್ಲಿಸಿ ಎಂದು ಅಸಮಾಧಾನಗೊಂಡಿದ್ದಾರೆ. ವಿಪಕ್ಷಗಳು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದು, ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications