ಅಮುಲ್, ಕೆಎಂಎಫ್ ನಡುವಿನ ವ್ಯತ್ಯಾಸ, ಸಾಮ್ಯತೆ: ಅಂಕಿ-ಅಂಶಗಳನ್ನು ತಿಳಿಯಬೇಕೆ? ಇಲ್ಲಿ ನೋಡಿ
ಬೆಂಗಳೂರು, ಡಿಸೆಂಬರ್ 02: ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಮತ್ತು ಗುಜರಾತ್ನ ಆನಂದ್ ಮಿಲ್ಕ್ ಯೂನಿಯನ್ ಲಿಮಿಟೆಡ್ (ಅಮುಲ್) ನಡುವಿನ 'ಸಹಕಾರ'ದ ಕುರಿತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಭಾರೀ ವಿವಾದವನ್ನು ಹುಟ್ಟುಹಾಕಿದೆ.
ಮಂಡ್ಯ ಜಿಲ್ಲೆಯಲ್ಲಿ ನೀಡಿದ ಹೇಳಿಕೆಗೆ ಪ್ರತಿಪಕ್ಷಗಳ ನಾಯಕರು ಹಾಗೂ ಕನ್ನಡ ಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದೇನು?
ಮಂಡ್ಯ ಜಿಲ್ಲೆಯ ಗೆಜ್ಜಲಗೆರೆಯಲ್ಲಿ 260 ಕೋಟಿ ವೆಚ್ಚದಲ್ಲಿ ಮಂಡ್ಯ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಸ್ಥಾಪಿಸಿರುವ ಮೆಗಾ ಡೈರಿಯನ್ನು ಶಾ ಶನಿವಾರ ಉದ್ಘಾಟಿಸಿದ್ದರು. ಆ ವೇಳೆ ಮಾತನಾಡಿದ್ದ ಅವರು, 'ರಾಜ್ಯದ ಪ್ರತಿ ಹಳ್ಳಿಯಲ್ಲಿ ಪ್ರಾಥಮಿಕ ಡೈರಿ ಇರುವುದನ್ನು ಖಚಿತಪಡಿಸಿಕೊಳ್ಳಲು ಅಮುಲ್ ಮತ್ತು ಕೆಎಂಎಫ್ ಒಟ್ಟಾಗಿ ಕೆಲಸ ಮಾಡುತ್ತವೆ. 47 ವರ್ಷಗಳಲ್ಲಿ ಕರ್ನಾಟಕವು ಹೈನುಗಾರಿಕೆ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿದೆ. ಇದೇ ಅವಧಿಯಲ್ಲಿ 4 ಕೋಟಿ ರೂಪಾಯಿಗಳಿಂದ 25,000 ಕೋಟಿ ರೂಪಾಯಿಗಳಷ್ಟು ವಹಿವಾಟನ್ನು ಕೆಎಂಎಫ್ ಮಾಡಿದೆ. ಈ ವಹಿವಾಟನ್ನು ಇನ್ನಷ್ಟು ಹೆಚ್ಚಿಸಲು ಅಮುಲ್ ಮತ್ತು ಕೆಎಂಎಫ್ ಒಟ್ಟಾಗಿ ಕೆಲಸ ಮಾಡಬೇಕು' ಎಂದು ಹೇಳಿದ್ದರು.
ಈ ಹಿನ್ನೆಲೆಯಲ್ಲಿ ಕೆಎಂಎಫ್ ಹಾಗೂ ಅಮುಲ್ ಸಂಸ್ಥೆಗಳಿಗೆ ಸಂಬಂಧಿಸಿದ ಅಂಕಿ- ಅಂಶಗಳ ಕುರಿತ ಮಾಹಿತಿಯನ್ನು ನಾವಿಲ್ಲಿ ಗಮನಿಸಬಹುದು.

ಕರ್ನಾಟಕ ಹಾಲು ಒಕ್ಕೂಟ (KMF)
ಕೆಎಂಫ್ ಸಂಸ್ಥೆಯು ಹಾಲು, ಮೊಸರು, ತುಪ್ಪ, ಬೆಣ್ಣೆ, ಐಸ್ ಕ್ರೀಮ್, ಚಾಲೊಕೇಟ್ ಹಾಗೂ ಮತ್ತು ಸಿಹಿತಿಂಡಿ (ಕಾಜು ಕಟ್ಲಿ, ಬೇಸನ್ ಲಡ್ಡೂ, ಮೈಸೂರು ಪಾಕ್, ಪೇಡಾ, ಇತ್ಯಾದಿ) ಮಾರಾಟ ಮಾಡುತ್ತದೆ. ಇದು ನಂದಿನಿ ಬ್ರ್ಯಾಂಡ್ ಹೆಸರಲ್ಲಿ ಖ್ಯಾತಿ ಪಡೆದಿದೆ.
1974ರಲ್ಲಿ ಸ್ಥಾಪನೆಯಾದ ದಕ್ಷಿಣ ಭಾರತದ ಸಹಕಾರಿ ಹಾಲು ಮಹಾಮಂಡಳಿಗಳಲ್ಲಿ ಕೆಎಂಫ್ ಅಗ್ರಸ್ಥಾನದಲ್ಲಿದೆ. ರಾಜ್ಯದ 16 ಜಿಲ್ಲಾ ಸಹಕಾರಿ ಹಾಲು ಒಕ್ಕೂಟಗಳಿವೆ. ಗ್ರಾಮೀಣ ಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ 15043ಕ್ಕೂ ಹೆಚ್ಚಿನ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕೆಎಂಎಫ್ 26.38 ಲಕ್ಷ ಹಾಲು ಉತ್ಪಾದಕರನ್ನು ಹೊಂದಿದೆ.
ಕೆಎಂಎಫ್ ಅಡಿ 17014 ನೋಂದಾಯಿತ ಸಂಘಗಳಿವೆ. 15043 ಸಂಘಗಳು ಸಕ್ರಿಯವಾಗಿವೆ. 4143 ಮಹಿಳಾ ಸಂಘಗಳು ಕಾರ್ಯಾಚರಣೆಯಲ್ಲಿವೆ. 25.90 ಲಕ್ಷ ಸದಸ್ಯರು ಕೆಎಂಎಫ್ಗೆ ಕೆಲಸ ಮಾಡುತ್ತಾರೆ. ದೈನಂದಿನವಾಗಿ ಸುಮಾರು 81.66 ಲಕ್ಷದಷ್ಟು (ಲೀಟರ್) ಸರಾಸರಿ ಹಾಲು ಶೇಖರಣೆಯಾಗುತ್ತದೆ. ದೈನಂದಿನವಾಗಿ 37.17(ಲೀಟರ್) ಹಾಲು ಮಾರಾಟವಾಗುತ್ತದೆ. 5.92 (ಲೀಟರ್) ಮೊಸರು ಮಾರಾಟವಾಗುತ್ತದೆ. ಹಾಲು ಉತ್ಪಾದಕರಿಗೆ ಪಾವತಿಯಾಗುವ ದೈನಂದಿನ ಹಣ 22.52 ಕೋಟಿ ರೂಪಾಯಿ. ಕೆಎಂಎಫ್ನ ವಾರ್ಷಿಕ ವಹಿವಾಟು 19784 ಕೋಟಿ ರೂಪಾಯಿ.

ಆನಂದ್ ಮಿಲ್ಕ್ ಯೂನಿಯನ್ ಲಿಮಿಟೆಡ್ (Amul)
ಅಮುಲ್ ಸಂಸ್ಥೆಯು ಹಾಲಿನ ಪುಡಿ, ಹಾಲು, ಬೆಣ್ಣೆ, ತುಪ್ಪ, ಗಿಣ್ಣು, ಮಸ್ತಿ ದಾಹಿ, ಮೊಸರು, ಮಜ್ಜಿಗೆ ಚಾಕೊಲೇಟ್, ಐಸ್ ಕ್ರೀಂ,ಶ್ರೀಖಂಡ್, ಪನೀರ್(ತಾಜಾ ಗಿಣ್ಣು), ಗುಲಾಬ್ ಜಾಮೂನುಗಳು ಮುಂತಾದವುಗಳನ್ನು ಮಾರಾಟ ಮಾಡುತ್ತದೆ.
1946 ಸ್ಥಾಪನೆಯಾದ ಅಮುಲ್ ಭಾರತದ ಅತೀ ದೊಡ್ಡ ಹಾಲು ಉತ್ಪನ್ನಗಳ ಮಾರಾಟ ಸಂಸ್ಥೆಯಾಗಿದೆ. ಅಮುಲ್ ಸಂಸ್ಥೆಯು 2.8 ದಶಲಕ್ಷ ಹಾಲು ಉತ್ಪಾದಕ ಸದಸ್ಯರನ್ನು ಹೊಂದಿದ್ದು, ಪ್ರತಿ ದಿನ ಸರಾಸರಿ 10.16 ದಶಲಕ್ಷ ಲೀಟರ್ ಹಾಲನ್ನು ಸಂಗ್ರಹಿಸುತ್ತದೆ.
ಇದು 13, 141 ಗ್ರಾಮೀಣ ಡೈರಿ ಸಹಕಾರ ಸಂಘಗಳನ್ನು ಹೊಂದಿದೆ. ಈ ಸಹಕಾರ ಸಂಸ್ಥೆಗಳು ಸರಾಸರಿ ಪ್ರತಿ ದಿನ 7.5 ದಶಲಕ್ಷ ಲೀಟರ್ ಹಾಲನ್ನು ಸಂಗ್ರಹಿಸುತ್ತಿವೆ. ಹಾಲು ಉತ್ಪಾದಕರಲ್ಲಿ ಶೇ 70 ರಷ್ಟು ಜನರು ಚಿಕ್ಕ, ಅತೀ ಚಿಕ್ಕ ಮತ್ತು ಭೂರಹಿತ ಕಾರ್ಮಿಕರಾಗಿದ್ದಾರೆ.
ದೈನಂದಿನವಾಗಿ ಸುಮಾರು 8.5 ದಶಲಕ್ಷ (ಲೀಟರ್) ಸರಾಸರಿ ಹಾಲು ಶೇಖರಣೆಯಾಗುತ್ತದೆ. ಅಮುಲ್ನ ಪ್ರತಿದಿನದ ವಹಿವಾಟು 150 ದಶಲಕ್ಷ ರೂಪಾಯಿ. 53 ಶತಕೋಟಿ ರೂಪಾಯಿ ವಾರ್ಷಿಕ ವಹಿವಾಟನ್ನು ಅಮುಲ್ ಹೊಂದಿದೆ. 48 ಮಾರಾಟ ಕಚೇರಿಗಳು, 3000 ಸಗಟು ವಿತರಣೆ ಕೇಂದ್ರಗಳು, 5 ಲಕ್ಷ ಚಿಲ್ಲರೆ ಅಂಗಡಿಗಳನ್ನು ಅಮುಲ್ ಹೊಂದಿದೆ.

ಅಮಿತ್ ಶಾ ಹೇಳಿಕೆಗೆ ವಿಪಕ್ಷ ನಾಯಕರ ಆಕ್ರೋಶ
ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಕರ್ನಾಟಕದ ವಿರೋಧ ಪಕ್ಷಗಳ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿದಂತೆ ಹಲವರು ಶಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 'ನಂದಿನಿ ಎಂಬುದು ಕರ್ನಾಟಕದ ಅಸ್ಮಿತೆ. ಇದಕ್ಕೆ ಕೈಹಾಕಬೇಡಿ' ಎಂಬ ಮಾತುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿಬಂದಿವೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications