ಅನಂತಮೂರ್ತಿಗೆ ಅಂತಿಮ ನಮನ ಸಲ್ಲಿಸಿದ ಗಣ್ಯರು
ಬೆಂಗಳೂರು, ಆ. 23 : ಅಗಲಿದ ಸಾಹಿತಿ ಯು.ಆರ್.ಅನಂತಮೂರ್ತಿಗೆ ಸಾಹಿತಿಗಳು, ರಾಜಕಾರಣಿಗಳು, ಚಿಂತಕರು, ರಂಗಕರ್ಮಿಗಳು ಅಂತಿಮ ನಮನ ಸಲ್ಲಿಸಿದರು.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಹಿಂಭಾಗದ ಸಂಸ ಬಯಲು ರಂಗ ಮಂದಿರದಲ್ಲಿ ಅನಂತಮೂರ್ತಿಯವರ ಪಾರ್ಥಿವ ಶರೀರವನ್ನು ಶನಿವಾರ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು.

ಸಿಎಂ ಸಿದ್ದರಾಮಯ್ಯ, ಸಚಿವರಾದ ದಿನೇಶ್ ಗೂಂಡುರಾವ್, ಉಮಾಶ್ರೀ, ಆರ್.ವಿ.ದೇಶಪಾಂಡೆ, ಟಿ.ಬಿ.ಜಯಚಂದ್ರ, ಎಸ್.ಆರ್.ಪಾಟೀಲ್ ಸ್ಥಳದಲ್ಲೇ ಒಂದು ಗಂಟೆ ಕಾಲ ಉಪಸ್ಥಿತರಿದ್ದು ಅನಂತಮೂರ್ತಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಕೇಂದ್ರ ಸಚಿವ ಅನಂತಕುಮಾರ್, ಆರ್.ಆಶೋಕ್, ವಿ.ಸೋಮಣ್ಣ "ಸಂಸ್ಕಾರ'ವಂತನಿಗೆ ನಮನ ಸಲ್ಲಿಸಿದರು. ದುಖಃಪತ್ತರಾಗಿದ್ದ ಅನಂತಮೂರ್ತಿ ಪತ್ನಿ ಎಸ್ತರ್, ಪುತ್ರ ಶರತ್, ಪುತ್ರಿ ಅನುರಾಧಾ ಅವರಿಗೆ ಕ್ರಿಶ್ಚಿಯನ್ ಧರ್ಮಗುರುಗಳು ಧೈರ್ಯ ತುಂಬಿದರು.
ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ, ಹಿರಿಯ ನಟ ಶಿವರಾಂ, ದ್ವಾರಕೀಶ್ ಸ್ವಾಭಿಮಾನದ ಸಾಹಿತಿಯ ದರ್ಶನ ಪಡೆದರು. ರಂಗಕರ್ಮಿ ಬಿ.ಜಯಶ್ರೀ ಸಣ್ಣ ಕಥೆಗಳ ಹರಿಕಾರನ ದರ್ಶನ ಪಡೆದರು.
ರವೀಂದ್ರ ಕಲಾಕ್ಷೇತ್ರದಲ್ಲಿಟ್ಟಿದ್ದ ಪಾರ್ಥಿವ ಶರೀರದ ದರ್ಶನ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಸಾಹಿತ್ಯಾಭಿಮಾನಿಗಳು ಆಗಮಿಸಿದ್ದರು.
ಗೊಂದಲ ಉಂಟುಮಾಡಿದ ಕರೆಂಟ್ ಶಾಕ್: ಪಾರ್ಥಿವ ಶರೀರ ಇಟ್ಟಿದ್ದ ಪೆಟ್ಟಿಗೆ ಶಾಕ್ ಹೊಡೆಯುತ್ತಿದೆ ಎಂದು ಒಂದು ಕ್ಷಣ ಗೊಂದಲ ಉಂಟಾಯಿತು, ಮೇಲ್ವಿಚಾರಣೆ ಹೊತ್ತುಕೊಂಡಿದ್ದ ನಾಗರಾಜ ಮೂರ್ತಿ ಮತ್ತು ಸಿಬ್ಬಂದಿ ತಕ್ಷಣ ಪರೀಕ್ಷಿಸಿ ಯಾವ ಸಮಸ್ಯೆಯಾಗಿದೆ ಎಂದು ದೃಢಪಡಿಸಿಕೊಂಡರು. ಕೂಡಲೇ ಶವಪೆಟ್ಟಿಗೆಗೆ ಸಂಪರ್ಕಿಸಿದ್ದ ವೈರ್ ಪರಿಶೀಲಿಸಲಾಯಿತು.
ಅಗಲಿದ ಸ್ನೇಹಿತನಿಗೆ ಸುಬ್ಬಣ್ಣ ಗಾಯನ ನಮನ: ಸ್ನೇಹಿತನಿಗೆ ಶಿವಮೊಗ್ಗ ಸುಬ್ಬಣ್ಣ ಗಾಯನದ ಮೂಲಕ ನಮಿಸಿದರು. ಕುವೆಂಪು ವಿರಚಿತ ' ಓ ನನ್ನ ಚೇತನ, ಆಗು ನೀ ಅನೀಕೇತನ' ಗೀತೆ ನೆರೆದಿದ್ದವರ ಮನ ಕಲಕುವಂತೆ ಮಾಡಿತು.
ಧಾರ್ಮಿಕ ವಿಧಿ ವಿಧಾನಗಳ ಮೂಲಕ ಸಂಜೆ ನಾಲ್ಕು ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಜ್ಞಾನಭಾರತಿ ಆವರಣದ ಕಲಾಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications