ಶಾಸಕರ ಬಿಡುಗಡೆಗಾಗಿ ಹೈಕೋರ್ಟ್ಗೆ ದಿಗ್ವಿಜಯ್ ಸಿಂಗ್!
ಬೆಂಗಳೂರು, ಮಾರ್ಚ್ 18 : ಮಧ್ಯಪ್ರದೇಶದ 21 ಕಾಂಗ್ರೆಸ್ ಶಾಸಕರು ಬೆಂಗಳೂರಿನಲ್ಲಿದ್ದಾರೆ. ಶಾಸಕರನ್ನು ಬಿಡುಗಡೆಗೊಳಿಸಲು ಕೋರಿ ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಲಿದ್ದಾರೆ.
ಯಲಹಂಕ ಬಳಿಯ ರಮಡಾ ಹೋಟೆಲ್ನಲ್ಲಿ ಮಧ್ಯಪ್ರದೇಶದ 21 ಕಾಂಗ್ರೆಸ್ ಶಾಸಕರು ವಾಸ್ತವ್ಯ ಹೂಡಿದ್ದಾರೆ. ಈ ಹೋಟೆಲ್ಗೆ ಕರ್ನಾಟಕದ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಶಾಸಕರನ್ನು ಭೇಟಿಯಾಗಲು ಕಾಂಗ್ರೆಸ್ ನಾಯಕರಿಗೆ ಅವಕಾಶ ನೀಡುತ್ತಿಲ್ಲ.
ಬುಧವಾರ ಶಾಸಕರನ್ನು ಭೇಟಿ ಮಾಡಲು ಮಧ್ಯಪ್ರದೇಶದಿಂದ ದಿಗ್ವಿಜಯ್ ಸಿಂಗ್ ಆಗಮಿಸಿದ್ದರು. ಆದರೆ, ಪೊಲೀಸರು ಅವಕಾಶ ನೀಡಲಿಲ್ಲ. ಸಿಂಗ್ ಸ್ಥಳದಲ್ಲಿ ಧರಣಿ ಕುಳಿತರು. ಪೊಲೀಸರು ಬಲವಂತದಿಂದ ಅವರನ್ನು ವಶಕ್ಕೆ ಪಡೆದರು.

ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿದ್ದ ದಿಗ್ವಿಜಯ್ ಸಿಂಗ್ರನ್ನು ಕೆಪಿಸಿಸಿಯ ನಿಯೋಜಿತ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದರು. ಬಳಿಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಭೇಟಿಯಾಗಿ ಶಾಸಕರ ಭೇಟಿಗೆ ಅವಕಾಶ ನೀಡಬೇಕು ಎಂದು ಮನವಿ ಸಲ್ಲಿಸಿದರು.
ಶಾಸಕರನ್ನು ಭೇಟಿ ಮಾಡಲೇಬೇಕು ಎಂದು ದಿಗ್ವಿಜಯ್ ಸಿಂಗ್ ಪಟ್ಟು ಹಿಡಿದಿದ್ದಾರೆ. ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿ ಶಾಸಕರ ಬಿಡುಗಡೆಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲು ಮುಂದಾಗಿದ್ದಾರೆ.
ಮಧ್ಯಪ್ರದೇಶ ಕಾಂಗ್ರೆಸ್ ಘಟಕ ಸುಪ್ರೀಂಕೋರ್ಟ್ಗೆ ಅರ್ಜಿಯೊಂದನ್ನು ಸಲ್ಲಿಸಿದ್ದು, ನಮ್ಮ ಶಾಸಕರನ್ನು ಬಿಜೆಪಿ ಅಪಹರಣ ಮಾಡಿದೆ ಎಂದು ದೂರಿದೆ. ಮುಖ್ಯಮಂತ್ರಿ ಕಮಲನಾಥ್ ಬಹುಮತ ಸಾಬೀತು ಮಾಡಲು ಸೂಚಿಸಬೇಕು ಎಂದು ಬಿಜೆಪಿ ಸುಪ್ರೀಂ ಮೊರೆ ಹೋಗಿದೆ.
16 ಶಾಸಕರು ನಮ್ಮ ರಾಜೀನಾಮೆ ಅಂಗೀಕರಿಸಬೇಕು ಎಂದು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ಗುರುವಾರ ಬೆಳಗ್ಗೆ 10.30ಕ್ಕೆ ಕೈಗೆತ್ತಿಕೊಳ್ಳಲಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications