ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ದಿನೇಶ್ ಗುಂಡೂರಾವ್
ಬೆಂಗಳೂರು, ಜೂನ್ 20: ಸಿದ್ದರಾಮಯ್ಯ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಖಾತೆ ಸಚಿವರಾಗಿದ್ದ ದಿನೇಶ್ ಗುಂಡೂರಾವ್ ಅವರನ್ನು ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ಸೋಮವಾರ ಪ್ರಕಟಿಸಿದೆ
ದಿನೇಶ್ ಗುಂಡೂರಾವ್ ಅವರನ್ನು ಸಂಪುಟದಿಂದ ಕೈಬಿಟ್ಟ ಬಳಿಕ ಸಾಮಾಜಿಕ ಜಾಲ ತಾಣಗಳಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಉದ್ಯಮಿಗಳು, ಸಾರ್ವಜನಿಕರು ದಿನೇಶ್ ಗುಂಡೂರಾವ್ ಪರ ಬ್ಯಾಟಿಂಗ್ ಆರಂಭಿಸಿದ್ದರು.[ಶಾಸಕ ಸ್ಥಾನಕ್ಕೆ ಅಂಬರೀಶ್ ರಾಜೀನಾಮೆ]
Karnataka: Dinesh Gundu Rao appointed as the working state Congress President.
— ANI (@ANI_news) June 20, 2016
ಇದಕ್ಕೆ ಪೂರಕವಾಗಿ ಸೋಮವಾರ ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿ ಕೃಷ್ಣಾ ಮುಂದೆ ದಿನೇಶ್ ಗುಂಡೂರಾವ್ ಅವರ ಅಭಿಮಾನಿಗಳು ಭಾರಿ ಪ್ರತಿಭಟನೆ ನಡೆಸಿದ್ದರು.[ಸಚಿವರಲ್ಲಿ ಯಾರಿಗೆ ಯಾವ ಖಾತೆ ಮೇಲೆ ಕಣ್ಣು?]
ಸಚಿವ ಸ್ಥಾನ ಕಳೆದುಕೊಂಡ ಬಳಿಕ ಪ್ರತಿಕ್ರಿಯಿಸಿದ್ದ ಗುಂಡೂರಾವ್ ಅವರು ರಾಜಕಾರಣದಲ್ಲಿ ಇದೆಲ್ಲ ಸಹಜ, ಪಕ್ಷ ವಹಿಸಿದ ಜವಾಬ್ದಾರಿ ನಿಭಾಯಿಸುತ್ತೇನೆ, ಮೂರು ವರ್ಷಗಳ ಕಾಲ ಸಚಿವನಾಗಿ ಉತ್ತಮ ಕೆಲಸ ಮಾಡಿದ ತೃಪ್ತಿ ಇದೆ ಎಂದಿದ್ದರು.[ಸಚಿವ ಸಂಪುಟಕ್ಕೆ 13 ಹೊಸಮುಖಗಳ ಸೇರ್ಪಡೆ]
ಬಿಪ್ಯಾಕ್ ನ ಮೋಹನ್ ದಾಸ್ ಪೈ ಸೇರಿದಂತೆ ಹಲವಾರು ಮಂದಿ ದಿನೇಶ್ ಪರ ಟ್ವೀಟ್ ಮಾಡಿದ್ದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಜಿ ಪರಮೇಶ್ವರ ಅವರು ಸದ್ಯ ಜರ್ಮನಿ ಪ್ರವಾಸದಲ್ಲಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಸ್ಥಾನದ ನಂತರ ಸ್ಥಾನವನ್ನು ದಿನೇಶ್ ಅವರು ಈಗ ಅಲಂಕರಿಸಲಿದ್ದಾರೆ.

ಕಾರ್ಯಾಧ್ಯಕ್ಷರಾಗಿ ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್ ಅವರನ್ನು ಸಂಪುಟದಿಂದ ಕೈಬಿಟ್ಟ ಬಳಿಕ ಸಾಮಾಜಿಕ ಜಾಲ ತಾಣಗಳಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಉದ್ಯಮಿಗಳು, ಸಾರ್ವಜನಿಕರು ದಿನೇಶ್ ಗುಂಡೂರಾವ್ ಪರ ಬ್ಯಾಟಿಂಗ್ ಆರಂಭಿಸಿದ್ದರು.

ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಿ ಆದೇಶ
ದಿನೇಶ್ ಗುಂಡೂರಾವ್ ಅವರು ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಿ ಎಐಸಿಸಿ ಹೊರಡಿಸಿದ ಆದೇಶಕ್ಕೆ ಜನಾರ್ದನ ದ್ವಿವೇದಿ ಸಹಿ ಇದೆ.
|
ಸ್ಥಾನ ಕಳೆದುಕೊಂಡ ಬಳಿಕ ಗುಂಡೂರಾವ್ ಟ್ವೀಟ್
ಸ್ಥಾನ ಕಳೆದುಕೊಂಡ ಬಳಿಕ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ, ಕಾಂಗ್ರೆಸ್ ಪಕ್ಷದ ನಾಯಕರಿಗೆ/ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ್ದರು.
|
ಮೋಹನ್ ದಾಸ್ ಪೈ ಅವರಿಂದ ಪ್ರತಿಕ್ರಿಯೆ
ದಿನೇಶ್ ಗುಂಡೂರಾವ್ ಅವರ ಟ್ವೀಟ್ ಗೆ ಇನ್ಫೋಸಿಸ್ ನ ಮಾಜಿ ಉದ್ಯೋಗಿ, ಬಿಪ್ಯಾಕ್ ಮುಖ್ಯಸ್ಥರಲ್ಲಿ ಒಬ್ಬರಾದ ಮೋಹನ್ ದಾಸ್ ಪೈ ಅವರಿಂದ ಪ್ರತಿಕ್ರಿಯೆ
|
ಯುವ ಕಾಂಗ್ರೆಸ್ ಸೇರಿ ಎಲ್ಲರಿಂದ ಮನವಿ
ಯುವ ಕಾಂಗ್ರೆಸ್ ಸೇರಿ ಎಲ್ಲರಿಂದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಗೆ ಮನವಿ
|
ಅಭಿಮಾನಿಗಳಿಂದ ಪ್ರತಿಭಟನೆ
ಯುವ ಕಾಂಗ್ರೆಸ್ ಸದಸ್ಯರು ಸೇರಿ ಅಭಿಮಾನಿಗಳಿಂದ ಪ್ರತಿಭಟನೆ
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications