ಅತೃಪ್ತ ಶಾಸಕರಿಗೆ ಖಡಕ್ ವಾರ್ನಿಂಗ್ ಕೊಟ್ಟ ಕೆಪಿಸಿಸಿ ಅಧ್ಯಕ್ಷರು
ಬೆಂಗಳೂರು, ಜುಲೈ 25 : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ನಾಯಕರಿಗೆ ಪಕ್ಷದಲ್ಲಿ ಜಾಗವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಶಾಸಕರ ಅನರ್ಹತೆ, ರಾಜೀನಾಮೆ ವಿಚಾರ ಇನ್ನೂ ಸ್ಪೀಕರ್ ರಮೇಶ್ ಕುಮಾರ್ ಮುಂದಿದೆ.
ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ವಿಶ್ವಾಸಮತದಲ್ಲಿ ಸೋಲು ಕಂಡಿದೆ. ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ, ರಾಜೀನಾಮೆ ಕೊಟ್ಟು ಪಕ್ಷಕ್ಕೆ ದ್ರೋಹ ಮಾಡಿರುವ ನಾಯಕರಿಗೆ ತಕ್ಕಪಾಠ ಕಲಿಸಲು ಪಕ್ಷ ಮುಂದಾಗಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾಡಿರುವ ಟ್ವೀಟ್ ಅತೃಪ್ತ ಶಾಸಕರಿಗೆ ತಕ್ಕ ಪಾಠ ಕಲಿಸಲಾಗುತ್ತದೆ ಎಂಬ ಸೂಚನೆ ಕೊಟ್ಟಿದೆ. "ಬೆನ್ನಿಗೆ ಚೂರಿ ಹಾಕಿರುವ ಕಾಂಗ್ರೆಸ್ ಶಾಸಕರು" ಎಂದು ಅವರು ಟ್ವೀಟ್ ಆರಂಭಿಸಿದ್ದಾರೆ.
ಟ್ವೀಟ್ ಏನು? : "ನಮ್ಮ ಬೆನ್ನಿಗೆ ಚೂರಿ ಹಾಕಿದ ಕಾಂಗ್ರೆಸ್ ಶಾಸಕರಿಗೆ ಈಗಿನ ಬೆಳವಣಿಗೆಗಳನ್ನು ನೋಡಿ ನಿರಾಸೆಯಾಗಿರಬಹುದು. ಏನಾದರೂ ಆಗಲಿ, ಒಂದು ಅಂಶ ಸ್ಪಷ್ಟ, ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಜಾಗವವಿಲ್ಲ ಎಂದಿಗೂ" ಎಂದು ಟ್ವೀಟ್ ಮಾಡಿದ್ದಾರೆ.












Click it and Unblock the Notifications