ಅತೃಪ್ತ ಶಾಸಕರಿಗೆ ಖಡಕ್ ವಾರ್ನಿಂಗ್ ಕೊಟ್ಟ ಕೆಪಿಸಿಸಿ ಅಧ್ಯಕ್ಷರು
ಬೆಂಗಳೂರು, ಜುಲೈ 25 : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ನಾಯಕರಿಗೆ ಪಕ್ಷದಲ್ಲಿ ಜಾಗವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಶಾಸಕರ ಅನರ್ಹತೆ, ರಾಜೀನಾಮೆ ವಿಚಾರ ಇನ್ನೂ ಸ್ಪೀಕರ್ ರಮೇಶ್ ಕುಮಾರ್ ಮುಂದಿದೆ.
ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ವಿಶ್ವಾಸಮತದಲ್ಲಿ ಸೋಲು ಕಂಡಿದೆ. ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ, ರಾಜೀನಾಮೆ ಕೊಟ್ಟು ಪಕ್ಷಕ್ಕೆ ದ್ರೋಹ ಮಾಡಿರುವ ನಾಯಕರಿಗೆ ತಕ್ಕಪಾಠ ಕಲಿಸಲು ಪಕ್ಷ ಮುಂದಾಗಿದೆ.
ರಾಜೀನಾಮೆ ಕೊಟ್ಟ ರೆಬಲ್ ಶಾಸಕರಿಗೆ ಪಕ್ಷದಿಂದಲೂ ಶಾಕ್?
8 ಶಾಸಕರ ಅನರ್ಹತೆ : ಕೆಪಿಸಿಸಿ ಅಧ್ಯಕ್ಷರು ಹೇಳುವುದೇನು?
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾಡಿರುವ ಟ್ವೀಟ್ ಅತೃಪ್ತ ಶಾಸಕರಿಗೆ ತಕ್ಕ ಪಾಠ ಕಲಿಸಲಾಗುತ್ತದೆ ಎಂಬ ಸೂಚನೆ ಕೊಟ್ಟಿದೆ. "ಬೆನ್ನಿಗೆ ಚೂರಿ ಹಾಕಿರುವ ಕಾಂಗ್ರೆಸ್ ಶಾಸಕರು" ಎಂದು ಅವರು ಟ್ವೀಟ್ ಆರಂಭಿಸಿದ್ದಾರೆ.
ಕೆಪಿಸಿಸಿ ಪುನಾರಚನೆ : ಪದಾಧಿಕಾರಿಗಳ ನೇಮಕ 75ಕ್ಕೆ ಸೀಮಿತ
ಟ್ವೀಟ್ ಏನು? : "ನಮ್ಮ ಬೆನ್ನಿಗೆ ಚೂರಿ ಹಾಕಿದ ಕಾಂಗ್ರೆಸ್ ಶಾಸಕರಿಗೆ ಈಗಿನ ಬೆಳವಣಿಗೆಗಳನ್ನು ನೋಡಿ ನಿರಾಸೆಯಾಗಿರಬಹುದು. ಏನಾದರೂ ಆಗಲಿ, ಒಂದು ಅಂಶ ಸ್ಪಷ್ಟ, ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಜಾಗವವಿಲ್ಲ ಎಂದಿಗೂ" ಎಂದು ಟ್ವೀಟ್ ಮಾಡಿದ್ದಾರೆ.