ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ದಿನೇಶ್ ಗುಂಡೂರಾವ್

By Gururaj
|
Google Oneindia Kannada News

ಚಿಕ್ಕಮಗಳೂರು, ಜುಲೈ 04 : ಮಾಜಿ ಸಚಿವ ದಿನೇಶ್ ಗುಂಡೂರಾವ್ ಇಂದು ಕುಟುಂಬ ಸಮೇತ ಶೃಂಗೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಎಐಸಿಸಿ ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಜುಲೈ 4ರ ಬುಧವಾರ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಅವರ ಹುಟ್ಟು ಹಬ್ಬ. ಆದ್ದರಿಂದ ದಿನೇಶ್ ಗುಂಡೂರಾವ್ ಅವರು ಕುಟುಂಬ ಸಮೇತ ಶೃಂಗೇರಿಗೆ ಭೇಟಿ ನೀಡಿದರು. ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು.

ಶೃಂಗೇರಿಯಲ್ಲಿ ದೇವೇಗೌಡರಿಂದ ಅತಿರುದ್ರ ಯಾಗ, ಯಾವ ಕಾರಣಕ್ಕೆ?ಶೃಂಗೇರಿಯಲ್ಲಿ ದೇವೇಗೌಡರಿಂದ ಅತಿರುದ್ರ ಯಾಗ, ಯಾವ ಕಾರಣಕ್ಕೆ?

Dinesh Gundu Rao

ದಿನೇಶ್ ಗುಂಡೂರಾವ್, ಟಬು ರಾವ್, ಮಕ್ಕಳಾದ ಅನನ್ಯ, ಅಮೀರಾ ಅವರು ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಕೃಷ್ಣಮಠಕ್ಕೆ ರಾಹುಲ್, ಸುತ್ತೂರು ಮಠಕ್ಕೆ ಅಮಿತ್ ಶಾ? ಇದು ಮಠ ಪಾಲಿಟಿಕ್ಸ್ಕೃಷ್ಣಮಠಕ್ಕೆ ರಾಹುಲ್, ಸುತ್ತೂರು ಮಠಕ್ಕೆ ಅಮಿತ್ ಶಾ? ಇದು ಮಠ ಪಾಲಿಟಿಕ್ಸ್

ಮಧ್ಯಾಹ್ನ ಎಐಸಿಸಿ ದಿನೇಶ್ ಗುಂಡೂರಾವ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಿದೆ. ಶೃಂಗೇರಿಯಲ್ಲಿದ್ದ ಅವರು ತಕ್ಷಣ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ರಾತ್ರಿ ಅವರು ದೆಹಲಿಗೆ ಪ್ರಯಾಣ ಮಾಡಲಿದ್ದು, ಗುರುವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.

English summary
Former minister Dinesh Gundu Rao visited Sharadamba temple and Sringeri mutt along with family members on July 4, 2018. Dinesh Gundu Rao appointed as president of Karnataka Pradesh Congress Committee (KPCC) today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X