ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್, ಅಧಿಕೃತ ಪ್ರಕಟಣೆ
ಬೆಂಗಳೂರು, ಜುಲೈ 4: ಹಲವು ದಿನಗಳಿಂದ ಕುತೂಹಲ ಕೆರಳಿಸಿದ್ದ ರಾಜ್ಯ ರಾಜಕಾರಣದ ಪ್ರಶ್ನೆಯೊಂದಕ್ಕೆ ಉತ್ತರ ಸಿಕ್ಕಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕವಾಗಿದ್ದಾರೆ.
ಕಾಂಗ್ರೆಸ್ ಮಡಿಲಲ್ಲಿರುವ ಟೈಮ್ ಬಾಂಬ್ ಸ್ಫೋಟವಾದರೆ...!
ಇಂದು ಮಧ್ಯಾಹ್ನ ಎಐಸಿಸಿ ಸಂಘಟನಾ ವಿಭಾಗದ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಕಾರ್ಯಾಧ್ಯಕ್ಷರಾಗಿ ಮಾಜಿ ಸಚಿವ ಈಶ್ವರ್ ಖಂಡ್ರೆ ನೇಮಕವಾಗಿದ್ದಾರೆ. ಗೆಹ್ಲೋಟ್ ಅವರ ಪತ್ರವನ್ನು ಕೆಳಗಡೆ ಲಗತ್ತಿಸಲಾಗಿದೆ.
ಹಾಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದು ಅವರ ಜಾಗಕ್ಕೆ ಹೊಸಬರ ನೇಮಕಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿತ್ತು. ಹಾಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಹೆಸರು ಆರಂಭದಿಂದಲೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕೇಳಿ ಬಂದಿತ್ತು.
ಆದರೆ ದಿನೇಶ್ ಗುಂಡೂರಾವ್ ಅವರಿಗಿಂತ ಹಿರಿಯರು ಈ ಹುದ್ದೆ ಮೇಲೆ ಕಣ್ಣಿಟ್ಟಿದ್ದರು. ಜೊತೆಗೆ ಪ್ರಬಲ ಸಮುದಾಯದವರು ತಮ್ಮ ಜಾತಿಯವರಿಗೆ ಈ ಹುದ್ದೆ ನೀಡಿ ಎಂಬ ಬೇಡಿಕೆ ಇಟ್ಟಿದ್ದರಿಂದ ಕರ್ನಾಟಕ ಕಾಂಗ್ರೆಸ್ ಗೆ ಯಾರು ಸಾರಥಿಯಾಲಿದ್ದಾರೆ ಎಂಬುದು ಕುತೂಹಲ ಹುಟ್ಟಿಸಿತ್ತು.