ಪ್ರವಾಹದಿಂದ ಉತ್ತರ ತತ್ತರ: ಉಸ್ತುವಾರಿಗಳು ತರಾಟೆಗೆ!

ಬೆಂಗಳೂರು, ಅ. 19: ಉತ್ತರ ಕರ್ನಾಟಕದಲ್ಲಿ ಪ್ರವಾಹ ಸಂಕಷ್ಟದ ಹೊರತಾಗಿಯೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡುತ್ತಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಉತ್ತರ ಕರ್ನಾಟಕದ ಜನ ಪ್ರವಾಹದಿಂದ ಕಣ್ಣೀರು ಹಾಕುತ್ತಿದ್ದಾರೆ. ಆದರೆ ಅನೇಕ ಜಿಲ್ಲೆಗಳ ಉಸ್ತುವಾರಿ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಯನ್ನು ಕೊಡುತ್ತಿಲ್ಲ.

ಅಧಿಕಾರಿಗಳೊಂದಿಗೆ ಸಭೆ ಮಾಡಿರುವುದಾಗಿ ಹೇಳಿಕೆ ನೀಡುತ್ತಿದ್ದಾರೆ. ಕೇವಲ ಅಧಿಕಾರಿಗಳೊಂದಿಗೆ ಸಭೆ ಮಾಡಿದ ಮಾತ್ರಕ್ಕೆ ಪ್ರವಾಹ ಪೀಡಿತರ ಸಂಕಷ್ಟ ನಿವಾರಣೆಯಾಗುವುದು ಸಾಧ್ಯವಾ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ.

Dinesh Gundurao Has Tweeted That District Incharge Minister Not Visiting Flood-affected Areas

ಸಂತ್ರಸ್ತರ ಗೋಳು ಕೇಳದ ಮೇಲೆ ಉಸ್ತುವಾರಿಯಾದರೂ ಇವರಿಗ್ಯಾಕೆ? ಎಂದು ಜಿಲ್ಲಾ ಉಸ್ತುವಾರಿ ಸಚಿವರುಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಯಚೂರು, ಬೆಳಗಾವಿ, ಕಲಬುರಗಿ ಹಾಗೂ ಬೀದರ್‌ ಜಿಲ್ಲೆಗಳಲ್ಲಿ ಕಳೆದ ಹತ್ತು ದಿನಗಳಿಂದ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಆದರೆ ಯಾವುದೇ ಸಚಿವರು ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

Recommended Video

      Corona ರೋಗದ ಮೊದಲನೇ ಲಕ್ಷಣ ನೆಗಡಿ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+