Karnataka Rain: ರಾಜ್ಯದಲ್ಲಿ ಭಾರೀ ಮಳೆ: ʼಮಳೆಗಾಲದಲ್ಲಿ ವಿಪತ್ತು ನಿರ್ವಹಣೆಗೆ ಸನ್ನದ್ಧವಾಗಿರಲು ಸೂಚನೆʼ
ಮಂಗಳೂರು, ಜೂನ್ 10: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಡಿಲು ಗುಡುಗಿನಿಂದ ಸಾವು ಪ್ರಕರಣ ಹೆಚ್ಚಾಗಿ ಸಂಭವಿಸುವ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಿಂಚು ಪ್ರತಿಬಂಧಕ ವ್ಯವಸ್ಥೆಯನ್ನು ಅಳವಡಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಂದರ್ಭ ಸಂಭವನೀಯ ಪ್ರಾಕೃತಿಕ ವಿಕೋಪದ ಸಿದ್ಧತೆ ಸೇರಿದಂತೆ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಆರಂಭಿಕ ಹಂತದಲ್ಲಿ ಸುಳ್ಯ, ಬೆಳ್ತಂಗಡಿ, ಸುಬ್ರಹ್ಮಣ್ಯದ ಕೆಲವೆಡೆ ನಾಲ್ಕೈದು ಕಡೆಗಳಲ್ಲಿ ಈ ಪ್ರತಿಬಂಧಕಗಳನ್ನು ಅಳವಡಿಸುವ ಬಗ್ಗೆ ಚರ್ಚೆ ನಡೆಸಿದರು.

ಇನ್ನೂ ಈ ವೇಳೆ ಮಾಧ್ಯಮಗಳ ಜೊತೆಗೆ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಕಳೆದ ಸುಮಾರು 10 ವರ್ಷಗಳಲ್ಲಿ ಈ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಿಂಚಿನಿಂದ ಸಾವು ಹಾಗೂ ಆಸ್ತಿಪಾಸ್ತಿ ನಷ್ಟವಾಗಿರುವ ಪ್ರಕರಣಗಳು ನಡೆಯುತ್ತಿದೆ. ಎತ್ತರದ ಪ್ರದೇಶವಾಗಿರುವ ಕಾರಣ ಮಿಂಚಿನಿಂದ ಹೆಚ್ಚಿನ ಅಪಾಯ ಈ ಭಾಗದಲ್ಲಿ ಸಂಭವಿಸುತ್ತಿರುವುದಾಗಿ ಅಂದಾಜಿಸಲಾಗಿದ್ದು, ಹಾಗಾಗಿ ಪ್ರಾಯೋಗಿಕವಾಗಿ ಈ ಪ್ರದೇಶಗಳಲ್ಲಿ ಈ ಮಿಂಚು ಪ್ರತಿಬಂಧಕ ಅಳವಡಿಸಲು ಕ್ರಮ ವಹಿಸಿದೆ ಎಂದರು.
ಮಳೆಗಾಲದ ಸಂಭವಿಸಬಹುದಾದ ವಿಪತ್ತುಗಳನ್ನು ಎದುರಿಸಲು ಜಿಲ್ಲೆಯ ಎಲ್ಲಾ ಇಲಾಖೆಗಳು ಈಗಿನಿಂದಲೇ ಸನ್ನದ್ಧರಾಗಿರುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಾಕೃತಿಕ ವಿಕೋಪದ ಸಂದರ್ಭ ಉಪಯೋಗಿಸುವ ಯಂತ್ರೋಪಕರಣಗಳ ಕಾರ್ಯ ನಿರ್ವಹಣೆಯನ್ನು ಪರಿಶೀಲಿಸಿ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಕೆಂಪು ಮಣ್ಣಿನ ಕಾನೂನುಬಾಹಿರ ಗಣಿಗಾರಿಕೆ ಹಾಗೂ ಸಾಗಾಟದ ಬಗ್ಗೆ ಆರೋಪಗಳು ಕೇಳಿ ಬಂದಿದ್ದು, ಅದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ವಹಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಲು ಸಚಿವರು ಸೂಚನೆ ನೀಡಿದರು.
ಬೋಳಿಯಾರುವಿನಲ್ಲಿ ನಡೆದ ಘಟನೆಗೆ ಸಂಬಂಧಿಸಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಈಗಾಗಲೇ ಬಂಧಿಸಲಾಗಿದೆ. ಯಾರೇ ಕಾನೂನಿಗೆ ವಿರುದ್ಧ ಹೋದರೆ ಕಠಿಣ ಕ್ರಮ ವಹಿಸಲಾಗುತ್ತದೆ. ಅದರ ಬಗ್ಗೆ ಬಿಜೆಪಿಯವರು ಹೇಳುವ ಅಗತ್ಯವಿಲ್ಲ. ಯಾವುದೇ ಧರ್ಮ, ಜಾತಿ ಭೇದವಿಲ್ಲದೆ ಇಂತಹ ಘಟನೆಗಳ ಬಗ್ಗೆ ಕ್ರಮ ವಹಿಸುವಂತೆ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.
ಸಿಆರ್ಝಡ್ ಮತ್ತು ಸಿಆರ್ಝಡ್ ಅಲ್ಲದ ಪ್ರದೇಶಗಳಿಂದ ಅಕ್ರಮವಾಗಿ ಮರಳು ತೆಗೆಯುತ್ತಿರುವುದನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದರೂ ಅಕ್ರಮ ಮರಳು ದಂಧೆ ಮುಂದುವರಿದಿದೆ. ಹೀಗಾಗಿ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ತಿಳಿಸಲಾಗಿದೆ.. ಇತ್ತೀಚೆಗೆ ಬೆಂಗಳೂರಿನಲ್ಲಿ ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳು ತೆಗೆಯುವ ಕುರಿತು ಸಭೆ ನಡೆಯಿತು. ಸಿಆರ್ಝಡ್ ಪ್ರದೇಶಗಳಲ್ಲಿ ಮರಳು ತೆಗೆಯಲು ಇರುವ ಎಲ್ಲಾ ಕಾನೂನು ಅಡೆತಡೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾದುಹೋಗಿರುವ ಎಲ್ಲಾ ರಾಷ್ಟ್ರೀಯ ಹೆದ್ಧಾರಿಗಳನ್ನು ಸಮರ್ಪಕ ದುರಸ್ತಿ ಮಾಡಿ ಸುಗಮ ಸಂಚಾರಕ್ಕೆ ಅನುಕೂಲಕರವಾಗಿ ಮಾಡುವಂತೆ ಸಚಿವರಾದ ದಿನೇಶ್ ಗುಂಡೂರಾವ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬಿಸಿ.ರೋಡ್-ಕಲ್ಲಡ್ಕ-ಮಾಣಿ ರಾಷ್ಟ್ರೀಯ ಹೆದ್ಧಾರಿಯಲ್ಲಿ ದುರಸ್ತಿಯನ್ನು ಒಂದು ವಾರದೊಳಗೆ ಪೂರ್ಣಗೊಳಿಸಬೇಕು, ಮಳೆಯ ನೀರು ಹರಿದು ಹೋಗಲು ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದ ಅವರು ವಾಹನಗಳು ಸುಗಮವಾಗಿ ಸಂಚರಿಸಲು ರಸ್ತೆಯನ್ನು ಅಭಿವೃದ್ಧಿ ಪಡಿಸಬೇಕು, ಮಳೆಯಿಂದ ಕಾಮಗಾರಿ ಮತ್ತೆ ಹಾನಿ ಆದರೆ ಮತ್ತೆ ದುರಸ್ತಿ ಮಾಡಬೇಕು. ಮಳೆಗಾಲ ಪೂರ್ಣಗೊಳ್ಳುವವರೆಗೂ ಈ ಹೆದ್ದಾರಿ ಮೇಲೆ ನಿಗಾ ವಹಿಸಬೇಕು ಎಂದು ಸಚಿವರು ಸೂಚಿಸಿದರು.
ಬಿ ಸಿ ರಸ್ತೆಯಿಂದ ಅಡ್ಡಹೊಳೆವರೆಗಿನ ರಾಷ್ಟ್ರೀಯ ಹೆದ್ದಾರಿ 75ರ ನಾಲ್ಕು ಪಥಗಳ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದೆ. ಅವರು ಮಳೆನೀರು ಚರಂಡಿಗಳ ಕಾಮಗಾರಿಯನ್ನು ಇಷ್ಟೊತ್ತಿಗೆ ಪೂರ್ಣಗೊಳಿಸಿರಬೇಕು. ಪೂಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ಮಳೆಗಾಲದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪಿಡಬ್ಲ್ಯೂಡಿಯಿಂದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಿಸ್ತರಣೆ ಕಾಮಗಾರಿ ಪ್ರಗತಿಯಲ್ಲಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳು ತಕ್ಷಣವೇ ವಿಸ್ತರಣೆಯನ್ನು ಪರಿಶೀಲಿಸುತ್ತಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮಳೆನೀರು ಚರಂಡಿಗಳ ಹೂಳು ತೆಗೆಯುವಂತಹ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಕಡಬ, ಪುತ್ತೂರು ಭಾಗದಲ್ಲಿ ಆನೆಗಳ ಹಾವಳಿ ಕುರಿತಂತೆ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್ ಕೇರಳದ ಹಿಂಡಿನ ಒಂದು ಆನೆ ದಾರಿ ತಪ್ಪಿ ಜಿಲ್ಲೆಗೆ ನುಗ್ಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಆನೆಯನ್ನು ಹಿಂಡಿಗೆ ಸೇರಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಉಳ್ಳಾಲ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಮುದ್ರ ಕೊರೆತ ತಡೆಗೆ ತಾತ್ಕಾಲಿಕ ಕ್ರಮಕೈಗೊಳ್ಳಲಾಗುವುದು.
ರಾಷ್ಟ್ರೀಯ ಸುಸ್ಥಿರ ಕರಾವಳಿ ನಿರ್ವಹಣಾ ಕೇಂದ್ರ (ಎನ್ಸಿಎಸ್ಸಿಎಂ), ಚೆನ್ನೈಗೆ ಸಮುದ್ರ ಕೊರೆತವನ್ನು ಪರಿಶೀಲಿಸಲು ಕರಾವಳಿ ಬೆಲ್ಟ್ನಲ್ಲಿ ತೆಗೆದುಕೊಳ್ಳಬೇಕಾದ ಶಾಶ್ವತ ಕ್ರಮಗಳ ವರದಿಯನ್ನು ಸಲ್ಲಿಸಲು ಕೇಳಲಾಗಿದೆ. ಏತನ್ಮಧ್ಯೆ, ಸಮುದ್ರ ಕೊರೆತದಿಂದ ಭೂಮಿಗೆ ಅಪಾಯವಿರುವ ಬಟ್ಪಾಡಿಯ ಮರವಂತೆ ಬೀಚ್ ಮಾದರಿಯಲ್ಲಿ ಶಾಶ್ವತ ಕ್ರಮಗಳನ್ನು ಕೈಗೊಳ್ಳಲು ಬಂದರು ಇಲಾಖೆಯು 80 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸಲ್ಲಿಸಿದೆ ಎಂದು ಹೇಳಿದರು.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications