ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇವೇಗೌಡ-ದಿನೇಶ್ ಗುಂಡೂರಾವ್ ಭೇಟಿ: ಸೀಟು ಹಂಚಿಕೆ ಮಾತುಕತೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 21: ದೇವೇಗೌಡ ಅವರನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಪದ್ಮನಾಭ ನಗರ ನಿವಾಸದಲ್ಲಿ ಇಂದು ಭೇಟಿಯಾಗಿ ಲೋಕಸಭೆ ಸೀಟು ಹಂಚಿಕೆ ಬಗ್ಗೆ ಮಹತ್ವದ ಮಾತುಕತೆ ನಡೆಸಿದ್ದಾರೆ.

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಇಬ್ಬರೂ ನಾಯಕರು ಚರ್ಚೆ ನಡೆಸಿದರು. ಲೋಕಸಭೆ ಚುನಾವಣೆ ಸೀಟು ಹಂಚಿಕೆ ವಿಚಾರವಾಗಿ ಜೆಡಿಎಸ್-ಕಾಂಗ್ರೆಸ್ ನಡುವೆ ನಡೆದ ಮೊದಲ ಅಧಿಕೃತ ಸಭೆ ಇದಾಗಿದೆ.

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ಸೀಟು ಹಂಚಿಕೆ ಬಗ್ಗೆ ನಡೆದ ಪ್ರಾಥಮಿಕ ಹಂತದ ಮಾತುಕತೆ ಇದಾಗಿದ್ದು, ಒಳ್ಳೆಯ ಚರ್ಚೆ ಆಯಿತು, ಇನ್ನು ಎರಡು ಮೂರು ದಿನಗಳಲ್ಲಿ ಅಂತಿಮ ಚರ್ಚೆ ಆಗಲಿದೆ ಎಂದರು.

ಮಂಡ್ಯ ಉಳಿಸಿಕೊಳ್ಳಲು ದಾಳ ಉರುಳಿಸಿದ ದೇವೇಗೌಡರು! ಮಂಡ್ಯ ಉಳಿಸಿಕೊಳ್ಳಲು ದಾಳ ಉರುಳಿಸಿದ ದೇವೇಗೌಡರು!

ಅಂತಿಮ ಸಭೆಯ ಬಳಿಕ ಹೈಕಮಾಂಡ್‌ಗೆ ಮಾಹಿತಿ ರವಾನೆ ಆಗುತ್ತದೆ, ಆ ನಂತರದ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಪ್ರಾಥಮಿಕ ಸಭೆ ಅಷ್ಟೆ

ಪ್ರಾಥಮಿಕ ಸಭೆ ಅಷ್ಟೆ

ಪ್ರಸ್ತುತ ಹಾಲಿ ಸಂಸದರಿರುವ ಕ್ಷೇತ್ರದಲ್ಲಿ ಬದಲಾವಣೆ ಮಾಡುವುದಿಲ್ಲ ಎಂಬ ಕಾಂಗ್ರೆಸ್‌ ತೀರ್ಮಾನದ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚೆ ಆಯಿತು, ಇದು ನಮ್ಮ ಪಕ್ಷದ ನಿರ್ಣಯವಾಗಿತ್ತು. ಈ ಬಗ್ಗೆ ದೇವೇಗೌಡರು ಅಭಿಪ್ರಾಯ ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ಹೇಳಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಲೋಕಸಭಾ ಚುನಾವಣೆ ಮೈತ್ರಿ, ಮೌನ ಮುರಿದ ಸಿದ್ದರಾಮಯ್ಯ ಲೋಕಸಭಾ ಚುನಾವಣೆ ಮೈತ್ರಿ, ಮೌನ ಮುರಿದ ಸಿದ್ದರಾಮಯ್ಯ

ಮಂಡ್ಯ-ಹಾಸನದ ಬಗ್ಗೆ ಮಾತಿಲ್ಲ

ಮಂಡ್ಯ-ಹಾಸನದ ಬಗ್ಗೆ ಮಾತಿಲ್ಲ

ಇಂದಿನ ಚರ್ಚೆ ಆರೋಗ್ಯಕರವಾಗಿತ್ತು ಎಂದು ಹೇಳಿದ ಅವರು, ಮಂಡ್ಯ ಮತ್ತು ಹಾಸನ ಕ್ಷೇತ್ರಗಳ ಬಗ್ಗೆ ಏನೂ ಮಾತನಾಡುವುದಿಲ್ಲ, ಯಾರಿಗೆ ಎಷ್ಟು ಸೀಟು ಎಂಬುದು ಸಹ ಇಂದು ಚರ್ಚೆ ಆಗಿಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದರು. ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಸುವ ಉಮೇದು ದೇವೇಗೌಡರಿಗಿದೆ, ಆದರೆ ಸುಮಲತಾ ಅಂಬರೀಶ್ ಅದಕ್ಕೆ ಅಡ್ಡಗಾಲಾಗಿದ್ದಾರೆ.

ದೇವೇಗೌಡ-ಕುಮಾರಸ್ವಾಮಿ ಭೇಟಿ: ಲೋಕಸಭೆ ಸೀಟು ಹಂಚಿಕೆ ಚರ್ಚೆ ದೇವೇಗೌಡ-ಕುಮಾರಸ್ವಾಮಿ ಭೇಟಿ: ಲೋಕಸಭೆ ಸೀಟು ಹಂಚಿಕೆ ಚರ್ಚೆ

ಕುಮಾರಸ್ವಾಮಿ-ದೇವೇಗೌಡ ಭೇಟಿ

ಕುಮಾರಸ್ವಾಮಿ-ದೇವೇಗೌಡ ಭೇಟಿ

ಇಂದು ಬೆಳಿಗ್ಗೆಯಷ್ಟು ಕುಮಾರಸ್ವಾಮಿ ಅವರು ದೇವೇಗೌಡ ಅವರನ್ನು ಭೇಟಿಯಾಗಿ ಲೋಕಸಭೆ ಸೀಟು ಹಂಚಿಕೆ ಬಗ್ಗೆ ಮಾತುಕತೆ ನಡೆಸಿದ್ದರು. ಜೆಡಿಎಸ್‌ಗೆ 12 ಕ್ಷೇತ್ರಗಳು ಬೇಕು ಎಂಬುದು ಕುಮಾರಸ್ವಾಮಿ ಅವರ ಬೇಡಿಕೆ ಆಗಿದೆ.

ಕಾಂಗ್ರೆಸ್‌ ಯೋಜನೆ ಏನು?

ಕಾಂಗ್ರೆಸ್‌ ಯೋಜನೆ ಏನು?

ಪ್ರಸ್ತುತ ಸಂಸದರು ಇರುವ ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ಬೇಡ ಎನ್ನುವುದು ಜೊತೆಗೆ ಜೆಡಿಎಸ್‌ಗೆ ಆರು-ಏಳು ಸ್ಥಾನಗಳನ್ನು ನೀಡುವುದು ಎಂದು ಕಾಂಗ್ರೆಸ್‌ ನಿಶ್ಚಯಿಸಿದೆ ಎನ್ನಲಾಗಿದೆ. ಸೀಟು ಹಂಚಿಕೆಯು ಜೆಡಿಎಸ್-ಕಾಂಗ್ರೆಸ್ ನಡುವೆ ಭಿನ್ನಾಭಿಪ್ರಾಯ ತಂದೊಡ್ಡುವ ಸಂಭವ ಇದೆ ಎನ್ನಲಾಗಿದೆ.

English summary
KPCC president Dinesh Gundurao today met JDS president Deve Gowda and discussed about Lok Sabha elections 2019 seatsharing between congress and jds. This is primary meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X