ಜಯಲಲಿತಾರನ್ನು ಸಿಎಂ ಸ್ಥಾನದಿಂದ ಇಳಿಸಲು ಕರ್ನಾಟಕದ ಮನವಿ
ಬೆಂಗಳೂರು, ಜೂ.24 : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರನ್ನು ಖುಲಾಸೆಗೊಳಿಸಿರುವ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಈ ಅರ್ಜಿಯಲ್ಲಿ ಕರ್ನಾಟಕ ಎರಡು ಮನವಿಗಳನ್ನು ಮಾಡಿದೆ.
ಜಯಲಲಿತಾ ಅವರಿಗೆ ವಿಶೇಷ ನ್ಯಾಯಾಲಯ ನೀಡಿದ್ದ ಶಿಕ್ಷೆಯನ್ನು ಜಾರಿಗೊಳಿಸಬೇಕು ಎಂಬುದು ಮೊದಲ ಮನವಿಯಾಗಿದೆ. ಕರ್ನಾಟಕ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಬೇಕು ಎಂಬುದು ಎರಡನೇ ಮನವಿಯಾಗಿದೆ. ವಿಶೇಷ ನ್ಯಾಯಾಲಯದ ತೀರ್ಪನ್ನು ಜಾರಿಗೊಳಿಸಬೇಕು ಎಂದು ಮಧ್ಯಂತರ ಮನವಿ ಮಾಡಲಾಗಿದೆ. [ಜಯಾ ಕೇಸ್, ಕರ್ನಾಟಕದಿಂದ ಮೇಲ್ಮನವಿ ಸಲ್ಲಿಕೆ]

ವಿಶೇಷ ನ್ಯಾಯಾಲಯ ಜಯಲಲಿತಾ ಅವರಿಗೆ 4 ವರ್ಷದ ಜೈಲು ಶಿಕ್ಷೆ ಮತ್ತು 100 ಕೋಟಿ ರೂ.ಗಳ ದಂಡವನ್ನು ವಿಧಿಸಿತ್ತು. ಈ ಶಿಕ್ಷೆಯನ್ನು ಜಾರಿಗೊಳಿಸಬೇಕು ಎಂದು ಸರ್ಕಾರ ಮಧ್ಯಂತರ ಮನವಿ ಮಾಡಿದೆ. ಇದಕ್ಕೆ ಕೋರ್ಟ್ ಒಪ್ಪಿಗೆ ಸೂಚಿಸಿದರೆ ಜಯಲಲಿತಾ ಅವರು ಸಿಎಂ ಸ್ಥಾನಕ್ಕೆ ಪುನಃ ರಾಜೀನಾಮೆ ನೀಡಬೇಕಾಗುತ್ತದೆ. [ಜಯಾ ಪ್ರಕರಣ: ಸರ್ಕಾರದಿಂದ 4 ಸಾವಿರ ಪುಟಗಳ ಅಪೀಲ್]
ವಿಶೇಷ ನ್ಯಾಯಾಲಯದ ತೀರ್ಪು ಪ್ರಕಟಗೊಂಡಾಗ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜಯಲಲಿತಾ ಅವರು ಹೈಕೋರ್ಟ್ನಿಂದ ಖುಲಾಸೆಗೊಂಡ ಬಳಿಕ ಪುನಃ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಯುವ ತನಕ ವಿಶೇಷ ಕೋರ್ಟ್ ಆದೇಶವನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ಮನವಿ ಮಾಡಿದೆ. [ಜಯಲಲಿತಾ ವಿರುದ್ಧ ಮೇಲ್ಮನವಿ ಸಲ್ಲಿಸಲು 7 ಕಾರಣಗಳು!]
ತೀರ್ಪು ವಜಾಗೊಳಿಸಿ : ಜೆ.ಜಯಲಲಿತಾ ಅವರು ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ವಿಶೇಷ ಪೀಠದ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ 2015ರ ಮೇ 11ರಂದು ತೀರ್ಪು ನೀಡಿದ್ದರು. ಈ ತೀರ್ಪನ್ನು ವಜಾಗೊಳಿಸಿ ಎಂಬುದು ಕರ್ನಾಟಕ ಸರ್ಕಾರದ ಎರಡನೇ ಮನವಿಯಾಗಿದೆ.[ಜಯಲಲಿತಾ ಪ್ರಕರಣ Timeline]
2014ರ ಸೆ. 27ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪು ನೀಡಿದ್ದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಡಿ.ಕುನ್ಹ ಅವರು, ಜಯಲಲಿತಾ, ವಿ.ಕೆ.ಶಶಿಕಲಾ, ಜೆ.ಇಳವರಸಿ ಮತ್ತು ವಿ.ಎನ್.ಸುಧಾಕರನ್ ತಪ್ಪಿತಸ್ಥರು ಎಂದು ಆದೇಶ ನೀಡಿದ್ದರು. ಜಯಲಲಿತಾ ಅವರಿಗೆ 100 ಕೋಟಿ ಹಾಗೂ ಇತರರಿಗೆ ತಲಾ 10 ಕೋಟಿ ದಂಡ ಮತ್ತು ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications