ಶಾಶ್ವತ ಅಂಗವೈಕಲ್ಯ ಹೊಂದಿರುವವರಿಗೆ ಬಿಪಿಎಲ್ ಕಾರ್ಡ್
ಬೆಂಗಳೂರು, ಜುಲೈ, 19: ಶಾಶ್ವತ ಅಂಗವೈಕಲ್ಯ ಸಮಸ್ಯೆ ಎದುರಿಸುತ್ತಿರುವವರಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಕುಷ್ಠರೋಗ, ಅಂಗವೈಕಲ್ಯ, ಕುರುಡು, ಕಿವುಡು, ಬುದ್ಧಿಮಾಂದ್ಯತೆಯಂಥಹ ಸಮಸ್ಯೆ ಹೊಂದಿರುವವರಿಗೆ ಬಿಪಿಎಲ್ ಪಡಿತರ ಚೀಟಿ ನೀಡಲಾಗುವುದು. ಈ ಮೂಲಕ ಅವರ ಜೀವನದಲ್ಲಿ ಬದಲಾವಣೆ ತರಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.[ತೊಗರಿ ಬೇಳೆ ದಾಸ್ತಾನಿಗೆ ಸರ್ಕಾರದ ಕಡಿವಾಣ]
ಕಾರ್ಡ್ ಪಡೆಯುವ ನಿಯಮಗಳನ್ನು ಮತ್ತಷ್ಟು ಸರಳೀಕರಣಗೊಳಿಸಲಾಗುವುದು. ಅಕ್ರಮ ಪಡಿತರ ಚೀಟಿದಾರರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.[ಎಪಿಎಲ್ ಕಾರ್ಡ್ದಾರರಿಗೆ ಜೂ.1ರಿಂದ ಅಕ್ಕಿ ಭಾಗ್ಯ]
'ಅನ್ನಭಾಗ್ಯ' ಯೋಜನೆಯನ್ನು ಇನ್ನಷ್ಟು ಸಮಪರ್ಕವಾಗಿ ಅನುಷ್ಠಾನ ಮಾಡಲಾಗುವುದು. ರಾಜ್ಯದ ಯಾವ ಕುಟುಂಬವೂ ಹಸಿವಿನಿಂದ ನರಳಬಾದರದು. ಅದಕ್ಕಾಗಿ ಸರ್ಕಾರ ಸುಧಾರಣೆ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದರು. ಕ್ಯಾನ್ಸರ್ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿರುವವರಿಗೂ ಬಿಪಿಎಲ್ ಕಾರ್ಡ್ ನೀಡುತ್ತೇವೆ ಎಂದು ಖಾದರ್ ಕೆಲ ದಿನಗಳ ಹಿಂದೆ ಘೋಷಣೆ ಮಾಡಿದ್ದರು.