ಕರ್ನಾಟಕಕ್ಕೆ ನಿರಾಸೆ ಬುತ್ತಿ ಕಟ್ಟಿ ಕೊಟ್ಟ ಅರುಣ್ ಜೇಟ್ಲಿ
ರಾಜ್ಯದ ಹಲವಾರು ಆರ್ಥಿಕ ಬೇಡಿಕೆಗಳ ಜತೆಯಲ್ಲೇ ರೈಲ್ವೇ ಸಂಪರ್ಕ ವಿಚಾರದಲ್ಲಿ ಬಹುವರ್ಷಗಳ ಬೇಡಿಕೆಯಾದ ತುಮಕೂರು-ಚಿತ್ರದುರ್ಗ-ದಾವಣಗೆರೆ (200 ಕಿಮೀ) ನಂತಹ ಯೋಜನೆಗಳಿಗೆ ಈ ಬಾರಿ ಹಸಿರು ನಿಶಾನೆ ಸಿಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ, ಈ ಬಾ
ನವದಹೆಲಿ, ಫೆಬ್ರವರಿ 1: ಕೇಂದ್ರ ಸರ್ಕಾರ ಬುಧವಾರ ಮಂಡಿಸಿರುವ ವಿತ್ತೀಯ ಹಾಗೂ ರೈಲ್ವೇ ಬಜೆಟ್ ನಲ್ಲಿ ಕರ್ನಾಟಕಕ್ಕೆ ಯಾವುದೇ ಅನುದಾನ, ಯೋಜನೆಗಳು ಘೋಷಣೆಯಾಗದಿರುವುದು ನಿರಾಸೆ ಮೂಡಿಸಿದೆ.[ರಾಜಕೀಯ ಪಕ್ಷಗಳ ದೇಣಿಗೆ 2 ಸಾವಿರ ರು.ಗಳಿಗೆ ಇಳಿಕೆ]
ಸಾಮಾನ್ಯ ಬಜೆಟ್ ನಲ್ಲಿ ರಾಜ್ಯಕ್ಕೆ ಹೆದ್ದಾರಿ ಅಗಲೀಕರಣ, ನಗರ ಹಾಗೂ ಗ್ರಾಮೀಣ ಮೂಲ ಸೌಕರ್ಯ, ಸ್ಮಾರ್ಟ್ ಸಿಟಿ ಅಭಿವೃದ್ಧಿ ಮಂತಾದ ಯೋಜನೆಗಳಿಗೆ ಅನುದಾನ ನಿರೀಕ್ಷಿಸಲಾಗಿತ್ತು. ಆದರೆ, ಇದಕ್ಕೆ ಕೇಂದ್ರ ಸರ್ಕಾರದಿಂದ ಯಾವುದೇ ಅನುಕೂಲ ಸಿಕ್ಕಿಲ್ಲ.[ಬಜೆಟ್ 2017: ಆದಾಯ ತೆರಿಗೆ ಮಿತಿ ಏರಿಕೆ ಇಲ್ಲ]

ರೈಲ್ವೇಯಲ್ಲೂ ನಿರಾಸೆ: ಇನ್ನು, ರೈಲ್ವೇ ಬಜೆಟ್ ನಲ್ಲಿಯೂ ಕರ್ನಾಟಕಕ್ಕೆ ನಿರಾಸೆ ಕಟ್ಟಿಟ್ಟ ಬುತ್ತಿ ಎಂಬಂತಾಗಿದೆ. ಈ ಹಿಂದಿನ ರೈಲ್ವೇ ಬಜೆಟ್ ಗಳಿಗೆ ಹೋಲಿಸಿ ನೋಡಿದರೆ, ಈ ಬಾರಿಯ ರೈಲ್ವೇ ಬಜೆಟ್ ರಾಜ್ಯದ ಪಾಲಿಗೆ ಅತ್ಯಂತ ನಿರಾಶಾದಾಯಕ ಬಜೆಟ್ ಎನ್ನಲಡ್ಡಿಯಿಲ್ಲ.[ಒಂದಷ್ಟು ಹೊಸ ಘೋಷಣೆ, ಹಳೆ ಯೋಜನೆಗಳ ಮುಂದುವರಿಕೆ; ಓಡದ ಜೇಟ್ಲಿ ರೈಲು]
ರಾಜ್ಯವು, ಲೋಂಡಾ-ಮೀರಜ್, ಗದಗ-ಹೊಟಗಿ, ಅರಸೀಕೆರೆ- ತುಮಕೂರು, ಹುಬ್ಬಳ್ಳಿ-ಚಿಕ್ಕಜಾಜೂರು, ಯಲಹಂಕ-ಪೆನುಗೊಂಡ ಮಾರ್ಗದ ಕಾಮಗಾರಿ ತ್ವರಿತಗೊಳಿಸಲು ಹೆಚ್ಚಿನ ಆರ್ಥಿಕ ನೆರವು ಬೇಕಿತ್ತು. ಆದರೆ, ಅದಕ್ಕೆ ಯಾವುದೇ ಅನುದಾನ ನೀಡುವ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪವಾಗಿಲ್ಲ.[ಬಜೆಟ್ 2017: ಅರುಣ್ ಜೇಟ್ಲಿ ಹೇಳಿದ ತೆರಿಗೆ ಲೆಕ್ಕಾಚಾರ]
ಇನ್ನ, ದಶಕಗಳಿಂದ ಬೇಡಿಕೆಯಲ್ಲಿರುವ ತುಮಕೂರು-ಚಿತ್ರದುರ್ಗ-ದಾವಣಗೆರೆ, ತುಮಕೂರು-ರಾಯದುರ್ಗ, ಗದಗ-ವಾಡಿ, ಕುಡಚಿ-ಬಾಗಲಕೋಟೆ ಹೊಸ ಮಾರ್ಗಗಳ ಬಗ್ಗೆ ಯಾವುದೇ ಯೋಜನೆ, ಅನುದಾನಗಳ ಪ್ರಸ್ತಾವನೆಯನ್ನೇ ಮಾಡಿಲ್ಲದಿರುವುದು ನಿರಾಸೆ ತಂದಿದೆ.[ಬಜೆಟ್ 2017: ಹಣಕಾಸು ಸಚಿವ ಅರುಣ್ ಜೇಟ್ಲಿ ಘೋಷಿಸಿದ ಮುಖ್ಯಾಂಶಗಳು]
ಇದರ ಜತೆಯಲ್ಲೇ ಮೈಸೂರು ಪ್ರಾಂತ್ಯದಿಂದ ತಮಿಳುನಾಡಿನ ಗಡಿಭಾಗದ ಜಿಲ್ಲೆಗಳಿಗೆ ಪ್ರಮುಖ ಸಂಪರ್ಕ ಕೊಂಡಿಯಾಗಲಿರುವ ಚಾಮರಾಜ ನಗರ- ಮೆಟ್ಟು ಪಾಳ್ಯಂ ರೈಲ್ವೇ ಮಾರ್ಗಕ್ಕೆ ಈ ಬಾರಿ ಹಸಿರು ನಿಶಾನೆ ಸಿಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ, ಅದು ಈ ಬಾರಿಯೂ ಹುಸಿಯಾಗಿದೆ.[ಇಡೀ ದೇಶವೇ ಎದುರು ನೋಡುತ್ತಿರುವ ಕೇಂದ್ರ ಬಜೆಟ್ ನಿಮ್ಮ ಮುಂದೆ LIVE]
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications