ಕರ್ನಾಟಕಕ್ಕೆ ನಿರಾಸೆ ಬುತ್ತಿ ಕಟ್ಟಿ ಕೊಟ್ಟ ಅರುಣ್ ಜೇಟ್ಲಿ
ರಾಜ್ಯದ ಹಲವಾರು ಆರ್ಥಿಕ ಬೇಡಿಕೆಗಳ ಜತೆಯಲ್ಲೇ ರೈಲ್ವೇ ಸಂಪರ್ಕ ವಿಚಾರದಲ್ಲಿ ಬಹುವರ್ಷಗಳ ಬೇಡಿಕೆಯಾದ ತುಮಕೂರು-ಚಿತ್ರದುರ್ಗ-ದಾವಣಗೆರೆ (200 ಕಿಮೀ) ನಂತಹ ಯೋಜನೆಗಳಿಗೆ ಈ ಬಾರಿ ಹಸಿರು ನಿಶಾನೆ ಸಿಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ, ಈ ಬಾ
ನವದಹೆಲಿ, ಫೆಬ್ರವರಿ 1: ಕೇಂದ್ರ ಸರ್ಕಾರ ಬುಧವಾರ ಮಂಡಿಸಿರುವ ವಿತ್ತೀಯ ಹಾಗೂ ರೈಲ್ವೇ ಬಜೆಟ್ ನಲ್ಲಿ ಕರ್ನಾಟಕಕ್ಕೆ ಯಾವುದೇ ಅನುದಾನ, ಯೋಜನೆಗಳು ಘೋಷಣೆಯಾಗದಿರುವುದು ನಿರಾಸೆ ಮೂಡಿಸಿದೆ.[ರಾಜಕೀಯ ಪಕ್ಷಗಳ ದೇಣಿಗೆ 2 ಸಾವಿರ ರು.ಗಳಿಗೆ ಇಳಿಕೆ]
ಸಾಮಾನ್ಯ ಬಜೆಟ್ ನಲ್ಲಿ ರಾಜ್ಯಕ್ಕೆ ಹೆದ್ದಾರಿ ಅಗಲೀಕರಣ, ನಗರ ಹಾಗೂ ಗ್ರಾಮೀಣ ಮೂಲ ಸೌಕರ್ಯ, ಸ್ಮಾರ್ಟ್ ಸಿಟಿ ಅಭಿವೃದ್ಧಿ ಮಂತಾದ ಯೋಜನೆಗಳಿಗೆ ಅನುದಾನ ನಿರೀಕ್ಷಿಸಲಾಗಿತ್ತು. ಆದರೆ, ಇದಕ್ಕೆ ಕೇಂದ್ರ ಸರ್ಕಾರದಿಂದ ಯಾವುದೇ ಅನುಕೂಲ ಸಿಕ್ಕಿಲ್ಲ.[ಬಜೆಟ್ 2017: ಆದಾಯ ತೆರಿಗೆ ಮಿತಿ ಏರಿಕೆ ಇಲ್ಲ]

ರೈಲ್ವೇಯಲ್ಲೂ ನಿರಾಸೆ: ಇನ್ನು, ರೈಲ್ವೇ ಬಜೆಟ್ ನಲ್ಲಿಯೂ ಕರ್ನಾಟಕಕ್ಕೆ ನಿರಾಸೆ ಕಟ್ಟಿಟ್ಟ ಬುತ್ತಿ ಎಂಬಂತಾಗಿದೆ. ಈ ಹಿಂದಿನ ರೈಲ್ವೇ ಬಜೆಟ್ ಗಳಿಗೆ ಹೋಲಿಸಿ ನೋಡಿದರೆ, ಈ ಬಾರಿಯ ರೈಲ್ವೇ ಬಜೆಟ್ ರಾಜ್ಯದ ಪಾಲಿಗೆ ಅತ್ಯಂತ ನಿರಾಶಾದಾಯಕ ಬಜೆಟ್ ಎನ್ನಲಡ್ಡಿಯಿಲ್ಲ.[ಒಂದಷ್ಟು ಹೊಸ ಘೋಷಣೆ, ಹಳೆ ಯೋಜನೆಗಳ ಮುಂದುವರಿಕೆ; ಓಡದ ಜೇಟ್ಲಿ ರೈಲು]
ರಾಜ್ಯವು, ಲೋಂಡಾ-ಮೀರಜ್, ಗದಗ-ಹೊಟಗಿ, ಅರಸೀಕೆರೆ- ತುಮಕೂರು, ಹುಬ್ಬಳ್ಳಿ-ಚಿಕ್ಕಜಾಜೂರು, ಯಲಹಂಕ-ಪೆನುಗೊಂಡ ಮಾರ್ಗದ ಕಾಮಗಾರಿ ತ್ವರಿತಗೊಳಿಸಲು ಹೆಚ್ಚಿನ ಆರ್ಥಿಕ ನೆರವು ಬೇಕಿತ್ತು. ಆದರೆ, ಅದಕ್ಕೆ ಯಾವುದೇ ಅನುದಾನ ನೀಡುವ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪವಾಗಿಲ್ಲ.[ಬಜೆಟ್ 2017: ಅರುಣ್ ಜೇಟ್ಲಿ ಹೇಳಿದ ತೆರಿಗೆ ಲೆಕ್ಕಾಚಾರ]
ಇನ್ನ, ದಶಕಗಳಿಂದ ಬೇಡಿಕೆಯಲ್ಲಿರುವ ತುಮಕೂರು-ಚಿತ್ರದುರ್ಗ-ದಾವಣಗೆರೆ, ತುಮಕೂರು-ರಾಯದುರ್ಗ, ಗದಗ-ವಾಡಿ, ಕುಡಚಿ-ಬಾಗಲಕೋಟೆ ಹೊಸ ಮಾರ್ಗಗಳ ಬಗ್ಗೆ ಯಾವುದೇ ಯೋಜನೆ, ಅನುದಾನಗಳ ಪ್ರಸ್ತಾವನೆಯನ್ನೇ ಮಾಡಿಲ್ಲದಿರುವುದು ನಿರಾಸೆ ತಂದಿದೆ.[ಬಜೆಟ್ 2017: ಹಣಕಾಸು ಸಚಿವ ಅರುಣ್ ಜೇಟ್ಲಿ ಘೋಷಿಸಿದ ಮುಖ್ಯಾಂಶಗಳು]
ಇದರ ಜತೆಯಲ್ಲೇ ಮೈಸೂರು ಪ್ರಾಂತ್ಯದಿಂದ ತಮಿಳುನಾಡಿನ ಗಡಿಭಾಗದ ಜಿಲ್ಲೆಗಳಿಗೆ ಪ್ರಮುಖ ಸಂಪರ್ಕ ಕೊಂಡಿಯಾಗಲಿರುವ ಚಾಮರಾಜ ನಗರ- ಮೆಟ್ಟು ಪಾಳ್ಯಂ ರೈಲ್ವೇ ಮಾರ್ಗಕ್ಕೆ ಈ ಬಾರಿ ಹಸಿರು ನಿಶಾನೆ ಸಿಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ, ಅದು ಈ ಬಾರಿಯೂ ಹುಸಿಯಾಗಿದೆ.[ಇಡೀ ದೇಶವೇ ಎದುರು ನೋಡುತ್ತಿರುವ ಕೇಂದ್ರ ಬಜೆಟ್ ನಿಮ್ಮ ಮುಂದೆ LIVE]
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications