‘ಜಮೀರ್ ಅಹ್ಮದ್ ಅವರಿಂದ ರಾಜೀನಾಮೆ ಪಡೆಯುವುದು ಒಂದು ಕಡೆ ಇರಲಿ...’
ಇಷ್ಟುದಿನ ಕರ್ನಾಟಕ ರಾಜಕೀಯದಲ್ಲಿ ಕಾಂಗ್ರೆಸ್ & ಬಿಜೆಪಿ ನಡುವೆ ಗುಪ್ತವಾಗಿದ್ದ ಕಿಚ್ಚು, ಈಗ ಜ್ವಾಲೆಯಾಗಿ ಧಗಧಗಿಸುತ್ತಿದೆ. ವಿಧಾನಸಭೆ ಬೆಳಗಾವಿ ಅಧಿವೇಶನ ಶುರುವಾದ ನಂತರ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನ ಬಿಜೆಪಿ ಹೊರಿಸುತ್ತಿದೆ. ಇದೀಗ ಆ ಸಾಲಿಗೆ ಜಮೀರ್ ಅಹ್ಮದ್ ಖಾನ್ ಅವರ ವಿಚಾರ ಕೂಡ ಸೇರ್ಪಡೆ ಆಗಿದ್ದು, ಸದನದಲ್ಲಿನ ಕಿತ್ತಾಟ ತಾರಕಕ್ಕೆ ಏರಿದೆ. ಇದೇ ಸಮಯದಲ್ಲಿ ಬಿಜೆಪಿ ಸ್ಫೋಟಕ ಆರೋಪ ಮಾಡಿದೆ!
ಹೌದು, ಪಂಚರಾಜ್ಯ ಚುನಾವಣೆ ಮುಗಿದು ಹೋಗಿದೆ. ಅದರಲ್ಲೂ ಪಂಚರಾಜ್ಯ ಎಲೆಕ್ಷನ್ ರಿಸಲ್ಟ್ ಕರ್ನಾಟಕ ಬಿಜೆಪಿ ನಾಯಕರಿಗೆ ಮತ್ತಷ್ಟು ಹುಮ್ಮಸ್ಸು ನೀಡಿದೆ. ಮೊತ್ತೊಮ್ಮೆ ಕೇಂದ್ರ ಸರ್ಕಾರದ ಆಡಳಿತ ಚುಕ್ಕಾಣಿ ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟಕ್ಕೆ ಪಕ್ಕಾ ಅನ್ನೋದು ಬಿಜೆಪಿ ನಾಯಕರ ವಿಶ್ವಾಸವಾಗಿದೆ. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಕರ್ನಾಟಕದ ಬಿಜೆಪಿ ನಾಯಕರು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಿದ್ದಾರೆ. ಈಗ, ಈ ಆರೋಪ & ಪ್ರತ್ಯಾರೋಪಕ್ಕೆ ಹೊಸ ಸೇರ್ಪಡೆ ಆಗಿದೆ.

'ಜಮೀರ್ ಅಹ್ಮದ್ ಅವರಿಂದ...'
ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಮಾಡಿ ಟ್ವೀಟ್ ಮಾಡಿರುವ ಬಿಜೆಪಿ, 'ಯಾವುದೇ ಜಾತಿ ಮತ ಪಂಥಗಳಿಗೆ ಸೀಮಿತಗೊಳ್ಳದೆ ಸರ್ವ ಪಕ್ಷದ ಶಾಸಕರನ್ನು ಸಮಾನತೆಯಿಂದ ಕಾಣುವುದು ವಿಧಾನಸಭೆಯ ಸ್ಪೀಕರ್ ಅವರ ಕರ್ತವ್ಯ. ಆದರೆ ಸಚಿವ @BZZameerAhmedK ಅವರು ಪಂಚರಾಜ್ಯ ಚುನಾವಣೆ ಪ್ರಚಾರದ ವೇಳೆ ಸ್ಪೀಕರ್ ಸ್ಥಾನಕ್ಕೆ ಅವಮಾನ ಮಾಡಿ ಪ್ರಚಾರದ ಅಸ್ತ್ರವಾಗಿ ಬಳಸಿಕೊಂಡಿದ್ದರು.' ಎಂದಿದೆ ಕರ್ನಾಟಕ ಬಿಜೆಪಿ.
ಹಾಗೇ ಟ್ವೀಟ್ನಲ್ಲಿ ವಾಗ್ದಾಳಿ ಮುಂದುವರಿಸಿದ ಬಿಜೆಪಿ, 'ಮುಖ್ಯಮಂತ್ರಿ @siddaramaiah ಅವರಾಗಲಿ, ವಿಧಾನಸಭೆಯ ಸ್ಪೀಕರ್ @utkhader ಅವರಾಗಲಿ ಜಮೀರ್ ಅಹ್ಮದ್ ಅವರಿಂದ ರಾಜೀನಾಮೆ ಪಡೆಯುವುದು ಒಂದು ಕಡೆ ಇರಲಿ, ಹೇಳಿಕೆಯನ್ನು ಸೌಜನ್ಯಕ್ಕಾದರೂ ಖಂಡಿಸುವ ಕೆಲಸ ಮಾಡಿಲ್ಲ.
ಯಾವುದೇ ಜಾತಿ ಮತ ಪಂಥಗಳಿಗೆ ಸೀಮಿತಗೊಳ್ಳದೆ ಸರ್ವ ಪಕ್ಷದ ಶಾಸಕರನ್ನು ಸಮಾನತೆಯಿಂದ ಕಾಣುವುದು ವಿಧಾನಸಭೆಯ ಸ್ಪೀಕರ್ ಅವರ ಕರ್ತವ್ಯ.
— BJP Karnataka (@BJP4Karnataka) December 11, 2023
ಆದರೆ ಸಚಿವ @BZZameerAhmedK ಅವರು ಪಂಚರಾಜ್ಯ ಚುನಾವಣೆ ಪ್ರಚಾರದ ವೇಳೆ ಸ್ಪೀಕರ್ ಸ್ಥಾನಕ್ಕೆ ಅವಮಾನ ಮಾಡಿ ಪ್ರಚಾರದ ಅಸ್ತ್ರವಾಗಿ ಬಳಸಿಕೊಂಡಿದ್ದರು.
ಮುಖ್ಯಮಂತ್ರಿ @siddaramaiah ಅವರಾಗಲಿ,… pic.twitter.com/8K12zhywQX
ಕಾಂಗ್ರೆಸ್ ನಾಯಕರು ಅತ್ಯುನ್ನತ ಸ್ಪೀಕರ್ ಸ್ಥಾನಕ್ಕೆ ಅಪಮಾನ ಮಾಡಿದ್ದು ಅಲ್ಲದೇ, ಒಂದು ಧರ್ಮದ ಓಲೈಕೆಗಾಗಿ ದುರುಪಯೋಗ ಪಡಿಸಿಕೊಳ್ಳುತ್ತಿರುವುದು ನಾಡಿನ ಸಮಸ್ತ ಜನತೆಗೆ ಮಾಡುತ್ತಿರುವ ದ್ರೋಹ..!' ಎಂದಿದೆ. ಈ ಮೂಲಕ ಕಾಂಗ್ರೆಸ್ನ ನಾಯಕರ ವಿರುದ್ಧ ಹೊಸ ಅಸ್ತ್ರ ಪ್ರಯೋಗಿಸಿದೆ.
ಒಟ್ನಲ್ಲಿ ಇತ್ತೀಚೆಗೆ ಬಿಜೆಪಿ ಕರ್ನಾಟಕಕ್ಕೆ ವಿರೋಧ ಪಕ್ಷದ ನಾಯಕರ ಆಗಮನವಾಗಿದ್ದು, ಇದರ ಜೊತೆ ನೂತನ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಬೆಳವಣಿಗೆ ನಡುವೆ ವಿಧಾನಸಭೆ ಅಧಿವೇಶನ ಕೂಡ ಶುರುವಾಗಿದ್ದು, ರಾಜಕೀಯ ತಿಕ್ಕಾಟ ಕೂಡ ಬಲು ಜೋರಾಗಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications