ಕರ್ನಾಟಕ ರಾಜ್ಯೋತ್ಸವದ ಸಂಭ್ರಮದಲ್ಲಿ ಐತಿಹಾಸಿಕ ಫೋಟೋ ಹಂಚಿಕೊಂಡ ಕಾಂಗ್ರೆಸ್!
ಕನ್ನಡ ಭಾಷೆ ಮತ್ತು ಕನ್ನಡ ನಾಡಿನ ಸಂಸ್ಕೃತಿ ಬಗ್ಗೆ ಇಡೀ ಜಗತ್ತಿಗೆ ಗೊತ್ತು. ಸಾವಿರಾರು ವರ್ಷಗಳಿಂದ ಕನ್ನಡಿಗರ ಜೊತೆಗೆ ವ್ಯವಹರಿಸುತ್ತಿರುವ ವಿವಿಧ ದೇಶಗಳಲ್ಲಿ, ಕನ್ನಡ ಭಾಷೆ ಇತಿಹಾಸ ಸಾರುವ ಸಾಕ್ಷ್ಯಗಳು ಸಿಗುತ್ತವೆ. ಇಂತಿಪ್ಪ ಕನ್ನಡ ನಾಡು ಹರಿದು ಹಂಚಿಹೋಗಿ, ಹಲವು ರಾಜ್ಯಗಳಲ್ಲಿ ಸೇರಿಕೊಂಡಿತ್ತು. ಆದರೆ ಹೀಗೆ ಬೇರೆಯಾಗಿದ್ದ ಕರ್ನಾಟಕ ಒಗ್ಗೂಡಿ, ಕರ್ನಾಟಕ ಎಂಬ ಹೆಸರು ಪಡೆದು ಅರ್ಧಶತಮಾನ ಕಳೆದಿದೆ. ಈ ಸಂಭ್ರಮದಲ್ಲಿ ಕನ್ನಡ ನಾಡಿನ ಇತಿಹಾಸ ಸಾರುವ ಫೋಟೋ ವೈರಲ್ ಆಗುತ್ತಿದೆ.
ಕರ್ನಾಟಕ ಏಕೀಕರಣದ ನಂತರ, ನಮ್ಮ ರಾಜ್ಯಕ್ಕೆ ಮೈಸೂರು ರಾಜ್ಯ ಎಂಬ ಹೆಸರನ್ನು ಇಡಲಾಗಿತ್ತು. ಆದ್ರೆ ಒಂದೇ ಪ್ರಾಂತ್ಯ ಅಥವಾ ಒಂದು ಭಾಗದ ಹೆಸರನ್ನು ಇಡೀ ರಾಜ್ಯಕ್ಕೆ ಇಟ್ಟಿರುವ ಬಗ್ಗೆ ಚರ್ಚೆ ನಡೆಯುತ್ತಿತ್ತು. ಅಂತಿಮವಾಗಿ ಮೈಸೂರು ರಾಜ್ಯ ಹೋಗಿ, ಈಗ ಕರೆಯಲಾಗುತ್ತಿರುವ ಕರ್ನಾಟಕ ಎಂಬ ಹೆಸರು ಬಂತು. ಹೀಗೆ ಕರ್ನಾಟಕ ಎಂಬ ಹೆಸರು ಜಾರಿಗೆ ತಂದ ಕೀರ್ತಿ ಮಾಜಿ ಸಿಎಂ ದಿ. ದೇವರಾಜ್ ಅರಸು ಅವರಿಗೆ ಸಲ್ಲಬೇಕು. ಇದೀಗ ಕರ್ನಾಟಕ ಕಾಂಗ್ರೆಸ್, ಕನ್ನಡಿಗರಿಗೆ ಸಂಬಂಧಿಸಿದ ಅರಸು ಅವರ ಅಪರೂಪದ ಫೋಟೋ ಹಂಚಿಕೊಂಡಿದೆ.

ದೇವರಾಜ ಅರಸು ಸಾಧನೆ ಸ್ಮರಣೆ!
ಹೌದು ಸ್ವಾತಂತ್ರ್ಯ ಬಂದ ನಂತರ ಕನ್ನಡ ನಾಡು ಹಲವು ಸಮಸ್ಯೆಗಳನ್ನ ಎದುರಿಸುತ್ತಿತ್ತು. ಅದರಲ್ಲೂ ಹಲವು ವರ್ಷ ಕಾಲ ಬೇರೆ ಬೇರೆ ರಾಜ್ಯಗಳ ಅಡಿಯಲ್ಲಿ ಆಳ್ವಿಕೆಗೆ ಒಳಪಟ್ಟಿದ್ದ ಹಿನ್ನೆಲೆ ಸಾಕಷ್ಟು ಸವಾಲು ಎದುರಾಗಿದ್ದವು. ಇದೆಲ್ಲವನ್ನೂ ಹಂತ ಹಂತವಾಗಿ ಕರ್ನಾಟಕ ಸರಿಪಡಿಸುತ್ತಾ ಬಂತು. ಆದರೆ ಇಡೀ ರಾಜ್ಯಕ್ಕೆ ಒಂದೇ ಹೆಸರು ಹೊಂದಾಣಿಕೆ ಆಗುವಂತೆ ಇಡುವುದು ದೊಡ್ಡ ಸವಾಲಾಗಿತ್ತು. ಕೊನೆಗೆ ಅರ್ಧ ಶತಮಾನದ ಹಿಂದೆ ಈ ಕಾರ್ಯವೂ ನೆರವೇರಿತ್ತು. ಅಷ್ಟಕ್ಕೂ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ್ದ ದಿನ ಏನಾಗಿತ್ತು ಗೊತ್ತಾ?
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, 'ನವೆಂಬರ್ 1, 1973ರಂದು ಮೈಸೂರು ರಾಜ್ಯಕ್ಕೆ "ಕರ್ನಾಟಕ"ವೆಂದು ಹೆಸರಿಸಲಾಯ್ತು. ಅಂದಿನ ಮುಖ್ಯಮಂತ್ರಿ ದಿ. ದೇವರಾಜ್ ಅರಸುರವರು ಹಂಪಿಯಲ್ಲಿ ಬಹುದೊಡ್ಡ ಕಾರ್ಯಕ್ರಮ ಆಯೋಜಿಸಿ "ಕರ್ನಾಟಕ"ವೆಂಬ ಹೆಸರಿನ ನಾಮಫಲಕವನ್ನು ಅನಾವರಣಗೊಳಿಸಿದರು. ಕಾಂಗ್ರೆಸ್ ಅಂದಿನಿಂದ ಇಂದಿನವರೆಗೂ ನಾಡು, ನುಡಿಯ ಬಗ್ಗೆ ಕಾಳಜಿ, ಗೌರವವನ್ನು ಕಾಪಾಡಿಕೊಂಡು ಬಂದಿದೆ. ದೇವರಾಜ್ ಅರಸುರವರ ಬದ್ಧತೆ, ಇಚ್ಛಾಶಕ್ತಿಯಿಂದಾಗಿ ಕನ್ನಡನಾಡು ಕರ್ನಾಟಕವಾಗಿ ರೂಪುಗೊಂಡಿದೆ.' ಎಂದು ಪೋಸ್ಟ್ ಹಾಕಿದೆ.
ನವೆಂಬರ್ 1, 1973ರಂದು ಮೈಸೂರು ರಾಜ್ಯಕ್ಕೆ "ಕರ್ನಾಟಕ"ವೆಂದು ಹೆಸರಿಸಲಾಯ್ತು.
— Karnataka Congress (@INCKarnataka) November 1, 2023
ಅಂದಿನ ಮುಖ್ಯಮಂತ್ರಿ ದಿ. ದೇವರಾಜ್ ಅರಸುರವರು ಹಂಪಿಯಲ್ಲಿ ಬಹುದೊಡ್ಡ ಕಾರ್ಯಕ್ರಮ ಆಯೋಜಿಸಿ "ಕರ್ನಾಟಕ"ವೆಂಬ ಹೆಸರಿನ ನಾಮಫಲಕವನ್ನು ಅನಾವರಣಗೊಳಿಸಿದರು.
ಕಾಂಗ್ರೆಸ್ ಅಂದಿನಿಂದ ಇಂದಿನವರೆಗೂ ನಾಡು, ನುಡಿಯ ಬಗ್ಗೆ ಕಾಳಜಿ, ಗೌರವವನ್ನು ಕಾಪಾಡಿಕೊಂಡು ಬಂದಿದೆ.… pic.twitter.com/KA6RRtvnb1
ಒಟ್ನಲ್ಲಿ ಮೈಸೂರು ರಾಜ್ಯ ಈಗ ಕರ್ನಾಟಕ ರಾಜ್ಯವಾಗಿ ಜಗತ್ತಿನಾದ್ಯಂತ ಮಿಂಚುತ್ತಿದ್ದು, ಕನ್ನಡಿಗರ ಕೀರ್ತಿ ಪ್ರಪಂಚದ ಉದ್ದಗಲಕ್ಕೂ ಹರಡಿದೆ. ಇದೇ ಸಮಯದಲ್ಲಿ ಅದ್ಧೂರಿ & ಸಂಭ್ರಮದಿಂದ ಕರ್ನಾಟಕ ರಾಜ್ಯೋತ್ಸವವನ್ನ ಆಚರಿಸಲಾಗಿದೆ. ಇದೇ ರೀತಿ ಕನ್ನಡಿಗರು ತಮ್ಮ ಭಾಷಾಭಿಮಾನ ಮರೆಯದಿರಲಿ ಎಂಬುದೇ ಎಲ್ಲರ ಆಶಯ. ಯಾಕಂದ್ರೆ ಕರ್ನಾಟಕ ಮತ್ತು ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಭವ್ಯ ಇತಿಹಾಸ ಇದೆ.
-
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ












Click it and Unblock the Notifications