ಸಫಾರಿ ರೈಡ್ ಸೀಟು ಹಂಚಿಕೆ ತಾರತಮ್ಯ: ಹೈಕೋರ್ಟ್ ಮೊರೆ ಹೋದ ಖಾಸಗಿ ರೆಸಾರ್ಟ್ಸ್
ಬೆಂಗಳೂರು, ನ.23:. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಸರ್ಕಾರಿ ಸ್ವಾಮ್ಯದ ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್ ಲಿಮಿಟೆಡ್ನಿಂದ ನಡೆಸಲಾದ ಸಫಾರಿಗಳಲ್ಲಿ ಖಾಸಗಿ ರೆಸಾರ್ಟ್ ಅತಿಥಿಗಳಿಗೆ ಸೀಟು ಹಂಚಿಕೆಯಲ್ಲಿ ತಾರತಮ್ಯವನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಕರ್ನಾಟಕ ಇಕೋ ಟೂರಿಸಂ ರೆಸಾರ್ಟ್ಸ್ ಅಸೋಸಿಯೇಷನ್, ವಾಟರ್ವುಡ್ಸ್ ಲಾಡ್ಜಸ್ ಮತ್ತು ರೆಸಾರ್ಟ್ಸ್ ಪ್ರೈವೇಟ್ ಲಿಮಿಟೆಡ್, ಆರೆಂಜ್ ಕೌಂಟಿ ರೆಸಾರ್ಟ್ಸ್ ಮತ್ತು ಹೊಟೇಲ್ ಲಿಮಿಟೆಡ್, ಕಬಿನಿ ಹಾಲಿಡೇ ಹೋಮ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಕರ್ನಾಟಕ ವೈಲ್ಡ್ಲೈಫ್ ರೆಸಾರ್ಟ್ಸ್ ಪ್ರೈವೇಟ್ ಲಿಮಿಟೆಡ್ ಹೈಕೋರ್ಟ್ ನಲ್ಲಿ ಪಿಐಎಲ್ ಹೂಡಿವೆ.
ಆ ಅರ್ಜಿಗಳನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆ ನಡೆಸಿತು.

ನಂತರ ನ್ಯಾಯಾಲಯವು ಪ್ರತಿವಾದಿಗಳಾದ ಕಾರ್ಯದರ್ಶಿ (ಅರಣ್ಯ ಇಲಾಖೆ), ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಕರ್ನಾಟಕ) ಮತ್ತು ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್ ಲಿಮಿಟೆಡ್ಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆಗಳನ್ನು ಸಲ್ಲಿಸಲು ಮೂರು ವಾರಗಳ ಕಾಲಾವಕಾಶವನ್ನು ನೀಡಿದೆ.
ಅರ್ಜಿದಾರರ ಪರ ವಕೀಲರು, ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್ ಲಿಮಿಟೆಡ್ ನಡೆಸುತ್ತಿರುವ ಸಫಾರಿಗಾಗಿ ಖಾಸಗಿ ರೆಸಾರ್ಟ್ಗಳಲ್ಲಿ ಅತಿಥಿಗಳಿಗೆ ಕಡಿಮೆ ಸೀಟುಗಳನ್ನು ನಿಗದಿಪಡಿಸಲಾಗಿದೆ ಮತ್ತು ಶಿಥಿಲಾವಸ್ಥೆಯಲ್ಲಿರುವ ವಾಹನಗಳಲ್ಲಿ ಅವರ ಅತಿಥಿಗಳಿಗೆ ಆಸನಗಳನ್ನು ನಿಗದಿಪಡಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಹಲವಾರು ಸಭೆಗಳಲ್ಲಿ, ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್ ಲಿಮಿಟೆಡ್ನ ಅಧಿಕಾರಿಗಳು ಖಾಸಗಿ ರೆಸಾರ್ಟ್ಗಳಲ್ಲಿ ಅತಿಥಿಗಳಿಗೆ ಸಫಾರಿಯಲ್ಲಿ ಶೇ.50 ರಷ್ಟು ಸೀಟುಗಳನ್ನು ನೀಡುವುದಾಗಿ ಲಿಖಿತವಾಗಿ ನೀಡಿದ್ದರು ಎಂದು ಅವರು ಹೇಳಿದರು.
ಆದರೆ, ನಾಗರಹೊಳೆ ಮತ್ತು ಬಂಡೀಪುರ ಮೀಸಲು ಪ್ರದೇಶದಲ್ಲಿ ಖಾಸಗಿ ರೆಸಾರ್ಟ್ಗಳಿಂದ ಬಂದವರು ಕ್ರಮವಾಗಿ ಶೇ.71 ಮತ್ತು ಶೇ. 83 ಅತಿಥಿಗಳನ್ನು ಹೊಂದಿದ್ದರೂ, ಅಧಿಕಾರಿಗಳು ಅವರಿಗೆ ಕೆಲವು ಆಸನಗಳನ್ನು ಮಾತ್ರ ನಿಗದಿಪಡಿಸಿದ್ದಾರೆ ಎಂದು ಅರ್ಜಿದಾರರು ದೂರಿದ್ದಾರೆ.












Click it and Unblock the Notifications