ಬಿಇಎಂಎಲ್ ಹೊರಗುತ್ತಿಗೆ ಕಾರ್ಮಿಕರ ಧರಣೆ: ಹೆಚ್.ಡಿ.ಕುಮಾರಸ್ವಾಮಿ ಕೊಟ್ಟ ಭರವಸೆ ಏನು?
ಕೋಲಾರ, ನವೆಂಬರ್ 18: ಬಿಇಎಂಎಲ್ ಹೊರಗುತ್ತಿಗೆ ಕಾರ್ಮಿಕರ ಸಮಸ್ಯೆಗಳ ಬಗ್ಗೆ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಭರವಸೆ ನೀಡಿದರು.
ಕೆಜಿಎಫ್ ನಲ್ಲಿ ಕಳೆದ 13 ದಿನಗಳಿಂದ ಕಾರ್ಮಿಕರು ಧರಣಿ ನಡೆಸುತ್ತಿರುವ ಸ್ಥಳಕ್ಕೆ ಕೋಲಾರ ಸಂಸದ ಮಲ್ಲೇಶ್ ಬಾಬು, ಶಾಸಕರಾದ ವೆಂಕಟ ಶಿವಾರೆಡ್ಡಿ, ಸಮೃದ್ಧಿ ಮಂಜುನಾಥ್ ಅವರೊಂದಿಗೆ ಭೇಟಿ ನೀಡಿ ಮಾತುಕತೆ ನಡೆಸಿದ ಹೆಚ್ ಡಿ ಕುಮಾರಸ್ವಾಮಿ ಅವರು, ನಿಮ್ಮ ಬೇಡಿಕೆಗಳ ಬಗ್ಗೆ ಈಗಾಗಲೇ ಕಂಪನಿಯ ಸಿಎಂಡಿ (ಅಧ್ಯಕ್ಷ - ವ್ಯವಸ್ಥಾಪಕ ನಿರ್ದೇಶಕ) ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಅವರು ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ.

ಇಂದು (ಸೋಮವಾರ) ಬೆಳಗ್ಗೆ ದೆಹಲಿಗೆ ತೆರಳುತ್ತಿದ್ದು, ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಹಾಗೂ ರಕ್ಷಣಾ ಸಚಿವಾಲಯದ ಕಾರ್ಯದರ್ಶಿ ಅವರನ್ನು ಭೇಟಿಯಾಗಿ ನಿಮ್ಮ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುತ್ತೇನೆ. ಸಿಂಗ್ ಅವರಿಗೆ ಕರ್ನಾಟಕದ ಬಗ್ಗೆ ವಿಶೇಷ ಕಾಳಜಿ ಇದ್ದು, ನಿಮ್ಮ ಸಮಸ್ಯೆಗಳಿಗೆ ಅವರು ಖಂಡಿತಾ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಎನ್ನುವ ಭರವಸೆ ಇದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದರು.
ಉದ್ಯೋಗ ಖಾಯಂ, ವೇತನ ಹೆಚ್ಚಳ ಸೇರಿದಂತೆ ಹಲವಾರು ಬೇಡಿಕೆಗಳನ್ನಿಟ್ಟುಕೊಂಡು ಕಳೆದ 13 ದಿನಗಳಿಂದ ಧರಣಿ ನಡೆಸುತ್ತಿರುವ ನಿಮ್ಮ ನೋವನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ. ನಾನು ಇಲ್ಲಿಗೆ ಬರುವುದಕ್ಕೆ ಮೊದಲೇ ಬಿಇಎಂಎಲ್ ಸಿಎಂಡಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದೆ. ಉದ್ಯೋಗ ಖಾಯಂ ವಿಷಯ ಒಂದು ಮಾತ್ರ ನನ್ನ ಕೈಯ್ಯಲ್ಲಿ ಇಲ್ಲ, ಉಳಿದ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ನಾವು ಪರಿಶೀಲನೆ ಮಾಡಲು ಸಿದ್ಧರಿದ್ದೇವೆ. ಕಾರ್ಮಿಕರು ಧರಣಿ ಅಂತ್ಯಗೊಳಿಸಿ ಕೆಲಸಕ್ಕೆ ಹಾಜರಾದರೆ, ಈ ಬಗ್ಗೆ ಕೂತು ಚರ್ಚೆ ನಡೆಸಲು ನಾವು ತಯಾರಿದ್ದೇವೆ ಎಂದು ಅವರು ನನಗೆ ತಿಳಿಸಿದರು ಎಂಬುದಾಗಿ ಸಚಿವರು ಕಾರ್ಮಿಕರ ಸಭೆಯಲ್ಲಿ ಹೇಳಿದರು.
ಬಿಇಎಂಎಲ್ ಕೇಂದ್ರ ಸರಕಾರಿ ಸ್ವಾಮ್ಯದ ಬೃಹತ್ ಕೈಗಾರಿಕೆ. 13 ದಿನಗಳಿಂದ ಧರಣಿಗೆ ಅವಕಾಶ ಮಾಡಿಕೊಡುವ ಪರಿಸ್ಥಿತಿ ಸೃಷ್ಟಿ ಆಗಿದ್ದೇ ಕಳವಳಕಾರಿ. ಇದು ಕಂಪನಿಗಾಗಲಿ, ದೇಶಕ್ಕಾಗಲಿ ಅಥವಾ ಕಾರ್ಮಿಕರ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಆದ್ದರಿಂದ ನನ್ನ ಮಾತಿನ ಮೇಲೆ ಭರವಸೆ ಇಡಿ. ತಕ್ಷಣ ನಿಮ್ಮ ಧರಣಿ ಅಂತ್ಯಗೊಳಿಸಿ ಕೆಲಸಕ್ಕೆ ಹಾಜರಾಗಿ. ನಾನು ಗುರುವಾರದೊಳಗೆ ರಕ್ಷಣಾ ಸಚಿವರ ಜತೆ ಚರ್ಚೆ ನಡೆಸಿದ ಬಳಿಕ ಶುಕ್ರವಾರ ಬೆಳಗ್ಗೆ ನಾನೇ ಸ್ವತಃ ಇಲ್ಲಿಗೆ ಬಂದು ನಿಮ್ಮೆಲ್ಲರಿಗೂ ಒಳ್ಳೆಯ ಸುದ್ದಿ ಕೊಡುತ್ತೇನೆ ಎಂದು ಹೆಚ್ ಡಿ ಕುಮಾರಸ್ವಾಮಿ ಅವರು ಮನವಿ ಮಾಡಿದರು.
ನಿಮ್ಮಗಳ ಕುಟುಂಬಗಳಿಗೆ ಒಳ್ಳೆಯದಾಗುವ ರೀತಿಯಲ್ಲಿ ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ, ಇದು ನನ್ನ ಜವಾಬ್ದಾರಿ. ನೀವು ಮೊದಲು ಕೆಲಸಕ್ಕೆ ಹೋಗಿ, ಇಷ್ಟು ದಿನ ಧರಣೆ ಕೂತರೆ ಯಾರಿಗೂ ಶ್ರೇಯಸ್ಕರ ಅಲ್ಲ. ಶನಿವಾರ ಈ ವಿಷಯ ನನ್ನ ಗಮನಕ್ಕೆ ಬಂತು. ಭಾನುವಾರ ನಿಮ್ಮ ಬಳಿಗೆ ಬಂದಿದ್ದೇನೆ. ನರೇಂದ್ರ ಮೋದಿ ಅವರ ಸರಕಾರ ಕೆಲಸ ಮಾಡುವ ರೀತಿ ಇದು ಎಂದು ಕುಮಾರಸ್ವಾಮಿ ಹೇಳಿದರು.
ಇದಕ್ಕೂ ಮೊದಲು ಕೇಂದ್ರ ಸಚಿವರು ಕಾರ್ಮಿಕ ಮುಖಂಡರ ಮನವಿಗಳನ್ನು ಆಲಿಸಿದರು. ಬಳಿಕ ಸಚಿವರ ಮಾತಿಗೆ ಸ್ಪಂದಿಸಿದ ಕಾರ್ಮಿಕರು; ಈ ಕೂಡಲೇ ನಾವು ಕೆಲಸಕ್ಕೆ ಹಾಜರಾಗಬೇಕು ಎನ್ನುವ ನಿಮ್ಮ ಒತ್ತಾಸೆಯ ಬಗ್ಗೆ ಚರ್ಚೆ ನಡೆಸುತ್ತೇವೆ. ಇಲ್ಲಿ ಯಾವುದೇ ಕಾರಣಕ್ಕೂ ನಿಮ್ಮ ಕಳಕಳಿಗೆ ವಿರುದ್ಧವಾದ ಯಾವುದೇ ನಿರ್ಧಾರ ಮಾಡುವುದಿಲ್ಲ ಎಂದು ಹೇಳಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications