ಮಂಗನ ಕಾಯಿಲೆ ನಿಯಂತ್ರಣ ಕುರಿತು ಮಲೆನಾಡು ಭಾಗದ ಶಾಸಕ ಜೊತೆ ಚರ್ಚೆ: ಆರೋಗ್ಯ ಸಚಿವರು ಕೊಟ್ಟ ಸೂಚನೆ ಏನು?
ಬೆಂಗಳೂರು, ಫೆಬ್ರವರಿ 20:ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳ ತಾಲೂಕುಗಳಲ್ಲಿ ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಮಲೆನಾಡು ಭಾಗದ ಶಾಸಕರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಮಹತ್ವದ ಸಭೆ ನಡೆಸಿದರು.
ವಿಧಾನಸೌಧದಲ್ಲಿ ಸೋಮವಾರ ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದ ಸಚಿವರಾದ ದಿನೇಶ್ ಗುಂಡೂರಾವ್ ಅವರು, ಕಾಯಿಲೆ ನಿಯಂತ್ರಣಕ್ಕೆ ಹೆಚ್ಚಿನ ಕ್ರಮಗಳ ಕುರಿತು ಶಾಸಕರ ಅಭಿಪ್ರಾಯ ಆಲೀಸಿದರು.

ಮಂಗನ ಕಾಯಿಲೆ ರೋಗಲಕ್ಷಣಗಳು ಕಂಡುಬಂದ ತಕ್ಷಣ ಟೆಸ್ಟಿಂಗ್ ಶೀಘ್ರಗತಿಯಲ್ಲಿ ನಡೆಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೇ ಕೆಎಫ್.ಡಿ ಪಾಸಿಟಿವ್ ಬಂದವರನ್ನ ಕಡ್ಡಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.ಶಿರಸಿಯಲ್ಲಿ ಕೆಎಫ್.ಡಿ ಟೆಸ್ಟಿಂಗ್ ಗೆ ಪ್ರಯೋಗಾಲಯ ಸ್ಥಾಪನೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ರಾಜ್ಯದ ಸದ್ಯ 103 ಮಂಗನ ಕಾಯಿಲೆ ಪ್ರಕರಣಗಳು ಸಕ್ರಿಯವಾಗಿದ್ದು ಪಾಸಿಟಿವ್ ಪ್ರಕರಣಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಮಂಗನ ಕಾಯಿಲೆಯಿಂದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ತಲಾ 1 ಸಾವು ಸಂಭವಿಸಿದ್ದು, ಮರಣ ಪ್ರಮಾಣ ತಗ್ಗಿಸಲು ಆಯಾ ಜಿಲ್ಲೆಗಳ ಡಿಹೆಚ್ಒ ಗಳಿಗೆ ಹೆಚ್ಚಿನ ಹೊಣೆ ನೀಡಲಾಗಿದೆ. ರಾಜ್ಯದಲ್ಲಿ ಕೆಎಫ್ಡಿ ಪರೀಕ್ಷೆ, ಪಾಸಿಟಿವ್, ಮರಣ, ಡಿಸ್ಚಾರ್ಜ್ ಕುರಿತಾಗಿ ದೈನಂದಿನ ಬುಲೆಟಿನ್ ಹೊರಡಿಸಲಾಗುತ್ತಿದೆ ಎಂದು ಹೇಳಿದರು.

VDL ಶಿವಮೊಗ್ಗ ಮತ್ತು MIV ಮಣಿಪಾಲದಲ್ಲಿನ ಪ್ರಯೋಗಾಲಯಗಳನ್ನು KFD ಪರೀಕ್ಷೆಗೆ ಗುರುತಿಸಲಾಗಿದ್ದು, ಶೀಘ್ರವಾಗಿ ಮಾದರಿಗಳನ್ನು ಸಂಸ್ಕರಿಸಿ ಪರೀಕ್ಷೆ ನಡೆಸಿ ವರದಿ ನೀಡಲಾಗುತ್ತಿದೆ. ಕಳೆದ 1 ತಿಂಗಳಿನಿಂದ ಮಂಗನ ಕಾಯಿಲೆಗೆ ಲಸಿಕೆ ನೀಡಲಾಗುತ್ತಿದ್ದು ಮುಂದಿನ 2 ತಿಂಗಳಿಗಾಗುವಷ್ಟು ಲಸಿಕೆ ಲಭ್ಯವಿದೆ. ಶಿರಸಿ ಹಾಗೂ ಸಾಗರದಲ್ಲಿ ಮಂಗನ ಕಾಯಿಲೆ ಪತ್ತೆಹಚ್ಚಲು ಹೊಸ ಪರೀಕ್ಷಾ ಕೇಂದ್ರಗಳ ಸ್ಥಾಪನೆ ಮಾಡಬೇಕು ಎಂದು ತಿಳಿಸಿದರು.
ಮಂಗನ ಕಾಯಿಲೆಗೆ ಲಸಿಕೆ ಕಂಡುಹಿಡಿಯುವ ನಿಟ್ಟಿನಲ್ಲಿ ICMR ಜೊತೆ ಮಾತುಕತೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಲಸಿಕೆ ಲಭ್ಯವಾಗಲಿದೆ. ಮಂಗನ ಕಾಯಿಲೆಯ ತ್ವರಿತ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ಗಳ ಹೆಚ್ಚಳ ಮಾಡಲಾಗುವುದು ಎಂದ ಅವರು, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ ಸಹಯೋಗದಲ್ಲಿ ಗ್ರಾಮೀಣ ಭಾಗದಲ್ಲಿ ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರ ಮೂಲಕ ಮಂಗನ ಕಾಯಿಲೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಸಭೆಯಲ್ಲಿ ಸಚಿವರಾದ ಮಧು ಬಂಗಾರಪ್ಪ, ಸಚಿವರಾದ ಮಂಕಾಳ ಎಸ್. ವೈದ್ಯ, ಶಾಸಕರಾದ ಅರಗ ಜ್ಞಾನೇಂದ್ರ, ಹೆಚ್.ಡಿ.ತಮ್ಮಯ್ಯ, ಬೇಳೂರು ಗೋಪಾಲಕೃಷ್ಣ, ನಯನ ಮೋಟಮ್ಮ ಸೇರಿದಂತೆ ಜನಪ್ರತಿನಿಧಿಗಳು, ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications