Get Updates
Get notified of breaking news, exclusive insights, and must-see stories!

ಅನರ್ಹ ಶಾಸಕರ ಬಗ್ಗೆ ಹೊಸ ಬಾಂಬ್ ಸಿಡಿಸಿದ ಜಗದೀಶ್ ಶೆಟ್ಟರ್

Recommended Video

      ಬಿಜೆಪಿ ಅಧಿಕಾರಕ್ಕೆ ಬರಲು ಸಹಕರಿಸಿದವರ ಬಗ್ಗೆ ಜಗದೀಶ್ ಶೆಟ್ಟರ್ ಏನು ಹೇಳಿದ್ದಾರೆ ಗೊತ್ತಾ?

      ಬೆಂಗಳೂರು, ಆಗಸ್ಟ್ 05: ಬಿಜೆಪಿ ಅಧಿಕಾರಕ್ಕೆ ಬರಲು ಸಹಕರಿಸಿ ಈಗ ಅನರ್ಹರಾಗಿರುವ ಶಾಸಕರ ಬಗ್ಗೆ ಜಗದೀಶ್ ಶೆಟ್ಟರ್ ಅವರು ಹೊಸದೊಂದು ಬಾಂಬ್ ಸಿಡಿಸಿದ್ದಾರೆ.

      ಅನರ್ಹಗೊಂಡಿರುವ ಶಾಸಕರು ಸಾಲು-ಸಾಲಾಗಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಹೋಗುತ್ತಿರುವ ಸಂದರ್ಭದಲ್ಲಿಯೇ, 'ಅನರ್ಹ ಶಾಸಕರಿಗೂ ನಮಗೂ ಸಂಬಂಧವಿಲ್ಲ' ಎಂದಿರುವ ಬಿಜೆಪಿ ಪ್ರಮುಖ ನಾಯಕ ಜಗದೀಶ್ ಶೆಟ್ಟರ್, ಹೊಸ ಅನುಮಾನವೊಂದನ್ನು ಬಿತ್ತಿದ್ದಾರೆ.

      ನಿನ್ನೆ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಅವರು, 'ಅನರ್ಹ ಶಾಸಕರಿಗೂ ಬಿಜೆಪಿಗೂ ಸಂಬಂಧವಿಲ್ಲ, ಅವರು ಹೊಸ ಪಕ್ಷ ಕಟ್ಟಬಹುದು' ಎಂದು ಹೇಳಿದ್ದಾರೆ.

      Disqualified MLAs may start new political party: Jagadish Shettar

      ಹದಿನೇಳು ಶಾಸಕರು ಅನರ್ಹರಾಗಿದ್ದು, ಅವರೆಲ್ಲರೂ ಸೇರಿ ಹೊಸದೊಂದು ಪಕ್ಷ ಕಟ್ಟುವ ಯೋಚನೆಯಲ್ಲಿದ್ದಾರೆಯೇ ಎಂಬ ಅನುಮಾನವನ್ನು ಜಗದೀಶ್ ಶೆಟ್ಟರ್ ಅವರು ಹೇಳಿಕೆ ಹುಟ್ಟುಹಾಕಿದೆ.

      ಅನರ್ಹರಾಗಿರುವ ಅವರು ಸದ್ಯಕ್ಕೆ ಬಿಜೆಪಿ ಸೇರುವಂತಿಲ್ಲ, ಸಚಿವರೂ ಆಗುವಂತಿಲ್ಲ. ಹಾಗೆಯೇ ಕಾಂಗ್ರೆಸ್ ಅಥವಾ ಜೆಡಿಎಸ್‌ಗೆ ಸೇರುವ ಸಾಧ್ಯಕ್ಕೆ ದೂರ-ದೂರಕ್ಕೂ ಇಲ್ಲ. ಹಾಗಾಗಿ ಅವರು ಹೊಸ ಪಕ್ಷದ ಸ್ಥಾಪನೆ ಮಾಡುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

      ಅನರ್ಹ ಶಾಸಕರು ಪ್ರಸ್ತುತ ಅನರ್ಹತೆ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ವಿಚಾರಣೆ ನಡೆದು ತೀರ್ಪು ಬಂದ ನಂತರವಷ್ಟೆ ಅನರ್ಹ ಶಾಸಕರ ಮುಂದಿನ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+