ಮುಂಬೈನಲ್ಲಿರುವ ಅತೃಪ್ತ ಶಾಸಕರಿಗೆ 'ಹಿಡಿಶಾಪ' ಹಾಕಿದ ಸಿದ್ದರಾಮಯ್ಯ
ಬೆಂಗಳೂರು, ಜುಲೈ 23: ವಿಶ್ವಾಸಮತಯಾಚನೆ ಸಂಬಂಧದ ಚರ್ಚೆ ಅಂತಿಮ ಹಂತ ತಲುಪಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಎಂದಿನ ಶೈಲಿಯಲ್ಲಿ ಭಾಷಣ ಮಾಡಿ, ಅತೃಪ್ತ ಶಾಸಕರ ವಿರುದ್ದ ಕಿಡಿಕಾರಿದರು.
ಯಾವ ಶಾಸಕರು ಬಾಗಿಲು ಹಾಕಿಕೊಂಡು ಮುಂಬೈನಲ್ಲಿ ಕೂತಿದ್ದಾರೋ, ಅವರು ಮುಂದಿನ ಚುನಾವಣೆಯಲ್ಲಿ ಗೆಲ್ಲುವುದಿಲ್ಲ, ಗೆಲ್ಲಲೂ ಬಾರದು ಎಂದು ಸಿದ್ದರಾಮಯ್ಯ ಹಿಡಿಶಾಪ ಹಾಕಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆ ಗೆದ್ದಿದ್ದ ಆರ್ ಶಂಕರ್, ತನ್ನ ಪಕ್ಷವನ್ನು ವಿಲೀನಗೊಳಿಸಿ, ಕಾಂಗ್ರೆಸ್ಸಿಗೆ ಬಂದಿದ್ದರು. ಈಗ ತಮ್ಮ ನಿಲುವನ್ನು ಬದಲಾಯಿಸಿದ್ದಾನೆ. ಅವನು ಈಗ ಕಾಂಗ್ರೆಸ್ಸಿಗೆ ಬಂದರೂ, ನಮಗೆ ಬೇಡ. ಅವನನ್ನು ಯಡಿಯೂರಪ್ಪನವರ ಪಕ್ಕ ಕೂರಿಸಿ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಬಿಜೆಪಿಯವರೇ ಕುದುರೆ ವ್ಯಾಪಾರ ಮಾಡಿಸುತ್ತಿರುವುದು, ಪಕ್ಷಾಂತರ ಮಾಡುತ್ತಿರುವುದು. ಈಗ ಮುಂಬೈಗೆ ಹೋದವರು, ನಾಳೆ ಸಚಿವರಾದರೆ ಇಡೀ ರಾಜ್ಯಕ್ಕೆ ಗೊತ್ತಾಗುವುದಿಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ನನಗೆ ಸಂಬಂಧವಿಲ್ಲ ಎಂದು ಬಿಜೆಪಿಯವರು ಎಷ್ಟೇ ಹೇಳಿದರೂ, ಆಪರೇಷನ್ ಕಮಲದ ಬಗ್ಗೆ ಆಡಿಯೋ ಹೊರಬಂದಿಲ್ಲವೇ. ಆಡಿಯೋದಲ್ಲಿರುವ ಧ್ವನಿ ನಂದೇ ಎಂದು ಯಡಿಯೂರಪ್ಪನವರೇ ಒಪ್ಪಿಕೊಂಡಿದ್ದಾರೆಂದು ಸಿದ್ದರಾಮಯ್ಯ ಲೇವಡಿ ಮಾಡಿದರು.
ಈ ಹಿಂದೆ ಕೂಡಾ ಆಪರೇಷನ್ ಕಮಲ ನಡೆಸಿದ ಅನುಭವ ಬಿಜೆಪಿಗಿದೆ. ಆಮಿಷಕ್ಕೊಳಗಾದ ಶಾಸಕರು ಮತ್ತೆ ಚುನಾವಣೆಯಲ್ಲಿ ಸೋತ ಉದಾಹರಣೆಯೂ ನಮ್ಮ ಮುಂದಿದೆ. ಈಗ ಮುಂಬೈಗೆ ಹೋಗಿರುವ ಶಾಸಕರಿಗೂ ಮುಂದೆ ಅದೇ ಆಗಲಿದೆ, ಅದೇ ಆಗಬೇಕು ಎಂದು ಸಿದ್ದರಾಮಯ್ಯ ಶಾಪ ಹಾಕಿದ್ದಾರೆ.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications