ಕಾಂಗ್ರೆಸ್ ನಲ್ಲಿ ಬಂಡಾಯದ ಕೆಂಡ ಇನ್ನೂ ಉರಿಯುತ್ತಲೇ ಇದೆ
Recommended Video

ಬೆಂಗಳೂರು, ಸೆಪ್ಟೆಂಬರ್ 18 : ಜಾರಕಿಹೊಳಿ ಬ್ರದರ್ಸ್ ಅವರ ಜಠರದಲ್ಲಿ ಹುಟ್ಟಿಕೊಂಡಿದ್ದ ಆಕ್ರೋಶ, ಅಸಮಾಧಾನದ ಜ್ವಾಲೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಶಮನ ಮಾಡಿದ್ದಾರೆ, ಎಲ್ಲ ಬಹುತೇಕ ಎಲ್ಲ ಬೇಡಿಕೆಗಳನ್ನು ಪೂರೈಸಲು ಒಪ್ಪಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡರೂ ವಿವಾದದ ಬುಡದಲ್ಲಿ ನಿಗಿನಿಗಿ ಕೆಂಡ ಇನ್ನೂ ಉರಿಯುತ್ತಲೇ ಇದೆ.
ಡಿಕೆ ಶಿವಕುಮಾರ್ ಅವರು ಬೆಳಗಾವಿ ರಾಜಕೀಯದಲ್ಲಿ ಮೂಗು ತೂರಿಸಬಾರದು, ತಮಗೆ ಆಯಕಟ್ಟಿನ ಖಾತೆ ನೀಡಬೇಕು, ಬಳ್ಳಾರಿಯ ಪರಿಶಿಷ್ಟ ಪಂಗಡದ ನಾಯಕರಿಗೆ ಸಚಿವ ಸ್ಥಾನಮಾನ ನೀಡಬೇಕು, ಬೆಳಗಾವಿಯಲ್ಲಿ ತಾವು ಸೂಚಿಸಿದ ಅಧಿಕಾರಿಗಳನ್ನೇ ನೇಮಕ ಮಾಡಬೇಕು ಇತ್ಯಾದಿ ಇತ್ಯಾದಿ ಬೇಡಿಕೆಗಳ ಮೂಟೆಯನ್ನೇ ಹೊತ್ತುಕೊಂಡು ಬಂದಿದ್ದ ಜಾರಕಿಹೊಳಿ ಸಹೋದರರು ಅಸಲಿಗೆ ಹಚ್ಚಿದ ಕಿಡಿ ಸರದಲ್ಲಿರುವ ಮತ್ತೊಂದು ಪಟಾಕಿಗೂ ಹತ್ತಿಕೊಂಡಿದೆ.
ಎಲ್ಲ ಬಂಡಾಯ ಶಮನವಾಯಿತು, ಸತೀಶ್ ಮತ್ತು ರಮೇಶ್ ಜಾರಕಿಹೊಳಿ ಬ್ರದರ್ಸ್ ತಮ್ಮ ಬೆಂಬಲಿಗರ ಸಮೇತ ಬೆಳಗಾವಿಗೆ ಮರಳುತ್ತಾರೆ, ಬಂಡಾಯಕ್ಕೇ ಕಾದುಕುಳಿತಿದ್ದ ಬಿಜೆಪಿ ಶಾಸಕರು ಬಂದ ದಾರಿಗೆ ಸುಂಕವಿಲ್ಲವೆಂಬಂತೆ ತಮ್ಮ ಕ್ಷೇತ್ರಗಳಿಗೆ ಮರಳಲಿದ್ದಾರೆ ಎನ್ನುವಷ್ಟರಲ್ಲಿ ಮತ್ತೊಂದಿಷ್ಟು ತುರುಸಿನ ರಾಜಕೀಯ ಚಟುವಟಿಕೆಗಳು ಆರಂಭವಾಗಿದ್ದು, ಈ ರಾಜಕೀಯ ಬೃಹನ್ನಾಟಕಕ್ಕೆ ಮತ್ತೆ ಕಳೆ ಬಂದಂತಾಗಿದೆ. ಈ ನಾಟಕಕ್ಕೆ ಇಷ್ಟು ಬೇಗನೆ ತೆರೆ ಬೀಳುವಂತೆ ಕಂಡುಬರುತ್ತಿಲ್ಲ.

ಬಂದಿರುವ ಸುದ್ದಿಯ ಪ್ರಕಾರ, ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮತ್ತೊಂದಿಷ್ಟು ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯನವರನ್ನು ಮಂಗಳವಾರ ಸಂಜೆ ಭೇಟಿಯಾಗಲಿದ್ದಾರೆ. ಪರಿಶಿಷ್ಟ ಪಂಗಡದ ಶಾಸಕರಿಗೆ ಅಷ್ಟೇ ಏಕೆ ಸಚಿವ ಸ್ಥಾನ ನೀಡಬೇಕು, ಪರಿಶಿಷ್ಟ ಜಾತಿಗೆ ಸೇರಿದ ಶಾಸಕರಿಗೂ ಸಂಪುಟ ಸೇರುವ ಭಾಗ್ಯ ಕರುಣಿಸಬೇಕು ಎಂದು ಸುಮಾರು 12 ಶಾಸಕರು ಕಣ್ಣು ಕಿವಿ ಕೆಂಪಗೆ ಮಾಡಿಕೊಂಡು ಸಿದ್ದರಾಮಯ್ಯನವರನ್ನು ಭೇಟಿ ಮಾಡಲಿದ್ದಾರೆ.
ಅಲ್ಲಿಗೆ ಮತ್ತೊಂದು ಸುತ್ತಿನ ನಾಟಕಕ್ಕೆ ತೆರೆ ಏಳಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸಮನ್ವಯ ಸಮಿತಿಯ ಅಧ್ಯಕ್ಷತೆ ವಹಿಸಿರುವ ಸಿದ್ದರಾಮಯ್ಯ ಅವರು ಈ ಭಿನ್ನಮತವನ್ನು ಬುಡದಲ್ಲಿಯೇ ಚಿವುಟಿ ಹಾಕಲು ಏನು ಕಸರತ್ತು ಮಾಡಲಿದ್ದಾರೆ ಎಂಬುದು ಸಂಜೆಯ ನಂತರ ತಿಳಿದುಬರಲಿದೆ. ಅಂದ ಹಾಗೆ, ತಾವು ಯುರೋಪಿನಿಂದ ವಾಪಸ್ ಬಂದ ಬಳಿಕ ಸಂಪುಟ ವಿಸ್ತರಣೆಗೆ ಕೈಹಾಕುವುದಾಗಿ ಸಿದ್ದರಾಮಯ್ಯ ಹೇಳಿದ್ದರು. ಈಗ ಅಕ್ಟೋಬರ್ 3ರ ನಂತರ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications