ಗುಜರಾತಿ ಉದ್ಯಮಿಯಿಂದ ಶಾಸಕರ 'ಕುದುರೆ ವ್ಯಾಪಾರ'
ಬೆಂಗಳೂರು, ಮೇ 16: ಕರ್ನಾಟಕದಲ್ಲಿ ಸ್ಥಿರ ಸರ್ಕಾರ ಹಾಗೂ ಕೋಮುವಾದಿ ಪಕ್ಷವನ್ನು ದೂರ ಇಡುವ ನಿಟ್ಟಿನಲ್ಲಿ ಜೆಡಿಎಸ್ ಜತೆ ಕಾಂಗ್ರೆಸ್ ಕೈಜೋಡಿಸಿದೆ. ಆದರೆ, ಭಾರತೀಯ ಜನತಾ ಪಕ್ಷ (ಬಿಜೆಪಿ) ಮಾತ್ರ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ಸಿನ ಸಾಮಾಜಿಕ ಮಾಧ್ಯಮಗಳ ಮುಖ್ಯಸ್ಥೆ ರಮ್ಯಾ ಅಲಿಯಾಸ್ ದಿವ್ಯಸ್ಪಂದನ ಕಿಡಿಕಾರಿದ್ದಾರೆ.
ಬಹುಮತ ಸಾಬೀತುಪಡಿಸಲು ಬೇಕಾದ ಸಂಖ್ಯೆ ಇಲ್ಲದಿದ್ದರೂ ಬಿಜೆಪಿ ಯತ್ನ ಸರಿಯಿಲ್ಲ.
ಬಿಜೆಪಿ ವಾಮಮಾರ್ಗದಿಂದ ಸರ್ಕಾರ ರಚನೆಗೆ ಬಿಜೆಪಿ ಮುಂದಾಗಿದೆ. ಬಹುಮತ ಸಾಬೀತುಪಡಿಸಲು ಬೇಕಾದ ಸಂಖ್ಯೆ ಇಲ್ಲದಿದ್ದರೂ ಬಿಜೆಪಿ ಯತ್ನ ಸರಿಯಿಲ್ಲ.
#BJPChor100Crore https://t.co/3puDlI7fP7
— Divya Spandana/Ramya (@divyaspandana) May 16, 2018
ಗುಜರಾತಿನ ಉದ್ಯಮಿಯೊಬ್ಬರು ಕರ್ನಾಟಕದಲ್ಲಿ ಕುದುರೆ ವ್ಯಾಪಾರದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದು, ಶಾಸಕರನ್ನು ಖರೀದಿಸಲು ಯತ್ನಿಸುತ್ತಿದ್ದಾರೆ. ಬಿಜೆಪಿಯ ಭ್ರಷ್ಟಾಚಾರವನ್ನು ತಡೆಗಟ್ಟುವವರು ಯಾರು? ಹೊಸ ವಿತ್ತ ಸಚಿವ ಪಿಯೂಹ್ ಗೋಯಲ್ ಅವರು ಈ ಬಗ್ಗೆ ಏನು ಪ್ರತಿಕ್ರಿಯೆ ನೀಡುತ್ತಾರೆ ಎಂದು ರಮ್ಯಾ ಟ್ವೀಟ್ ಮಾಡಿದ್ದಾರೆ.
Who is this businessman from Gujarat bankrolling BJP’s bid to buy MLA’s in Karnataka? What deal has the BJP struck with him? Will public sector banks have to pick up the tab for BJP’s corruption? Will our temporary FM @PiyushGoyal respond?
— Divya Spandana/Ramya (@divyaspandana) May 16, 2018