ರವಿ ಸಾವು ಮತ್ತು ಸದನಕ್ಕೆ ಸಿದ್ದು ಕೊಟ್ಟ ಲಿಖಿತ ಉತ್ತರ
ಬೆಂಗಳೂರು, ಮಾ. 23 : 'ದಕ್ಷ ಐಎಎಸ್ ಅಧಿಕಾರಿ ಡಿಕೆ ರವಿ ಅವರ ಸಾವಿನ ಬಗ್ಗೆ ನಮಗೂ ನೋವಿದೆ. ಪ್ರಕರಣವನ್ನು ಸರ್ಕಾರ ಲಘುವಾಗಿ ಪರಿಗಣಿಸಿಲ್ಲ, ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಸೋಮವಾರದ ವಿಧಾನಸಭೆ ಕಲಾಪದಲ್ಲಿ ಡಿಕೆ ರವಿ ಪ್ರಕರಣದ ಬಗ್ಗೆ ಸದನಕ್ಕೆ ಲಿಖಿತ ಉತ್ತರ ನೀಡಿದ ಮುಖ್ಯಮಂತ್ರಿಗಳು, 'ಸರ್ಕಾರ ಡಿಕೆ ರವಿ ಅವರ ಪೋಷಕರ ಭಾವನೆಗಳಿಗೆ ಸ್ಪಂದಿಸಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ನಿರ್ಧಾರವನ್ನು ಕೈಗೊಂಡಿದೆ' ಎಂದು ಹೇಳಿದರು. [ಡಿಕೆ ರವಿ ಕೇಸ್ : ಚೆನ್ನೈ ಸಿಬಿಐ ತಂಡದಿಂದ ತನಿಖೆ]

'ಡಿಕೆ ರವಿ ಅವರ ಸಾವಿನ ಪ್ರಕರಣವನ್ನು ಸರ್ಕಾರ ಲಘುವಾಗಿ ಪರಿಗಣಿಸಿಲ್ಲ, ತನಿಖೆಯನ್ನು ಸಿಬಿಐಗೆ ವಹಿಸುವುದಿಲ್ಲ ಎಂದು ಹೇಳಿಲ್ಲ, ಸಿಐಡಿ ವರದಿ ಬಂದ ಬಳಿಕ ಸಿಬಿಐ ತನಿಖೆಗೆ ವಹಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ' ಎಂದು ಹೇಳಿದ್ದೆವು ಎಂದರು.[ಡಿಕೆ ರವಿ ಪ್ರಕರಣ, ಸೋಮವಾದರ ಬೆಳವಣಿಗೆಗಳು]
'ಯಾವುದೇ ರಾಜ್ಯಗಳಲ್ಲೂ ಇಂತಹ ಘಟನೆಗಳು ನಡೆದ ತಕ್ಷಣ ಸಿಬಿಐ ತನಿಖೆಗೆ ವಹಿಸುವುದಿಲ್ಲ. ಸ್ಥಳೀಯ ಪೊಲೀಸರ ತನಿಖೆ ನಂತರ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಇಲ್ಲವಾದಲ್ಲಿ ನಮ್ಮ ಪೊಲೀಸರ ನೈತಿಕ ಸ್ಥೈರ್ಯ ಕುಸಿಯುತ್ತದೆ, ಆದ್ದರಿಂದ ಸಿಐಡಿ ವರದಿಗಾಗಿ ಕಾಯುತ್ತಿದ್ದೆವು'. [ಜನ ಸಾಮಾನ್ಯರು ಸಿಬಿಐಗೆ ದೂರು ನೀಡಬಹುದೇ?]
ಸಿಐಡಿ ವರದಿ ಮುಂದಿಡುತ್ತಿದ್ದೆ : 'ಡಿಕೆ ರವಿ ಸಾವಿನ ಪ್ರಕರಣದಲ್ಲಿ ವಿರೋಧ ಪಕ್ಷಗಳು ಮಾಡಿರುವ ಆಧಾರ ರಹಿತ ಆರೋಪಗಳಿಂದ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆಗೆ ಧಕ್ಕೆ ಬಂದಿದೆ. ಆದ್ದರಿಂದ ಸಿಐಡಿ ವರದಿಯನ್ನು ಸದನಲ್ಲಿ ಮಂಡಿಸಲು ತೀರ್ಮಾನಿಸಿದ್ದೆ, ಆದರೆ, ಹೈಕೋರ್ಟ್ ಆದೇಶದಿಂದ ಇದು ಸಾಧ್ಯವಾಗುತ್ತಿಲ್ಲ' ಎಂದರು.

'ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ನಾವು ಹಲವು ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿದ್ದೆವು. ಆದರೆ, ಆಗ ಬಿಜೆಪಿ ಸಿಬಿಐ ಕಾಂಗ್ರೆಸ್ ಕೈಗೊಂಬೆ ಎಂದೆಲ್ಲಾ ಹೇಳುತ್ತಿತ್ತು. ಈಗ ಅದೇ ಬಿಜೆಪಿ ಸಿಬಿಐ ತನಿಖೆಗೆ ಒತ್ತಾಯಿಸುತ್ತಿದೆ' ಎಂದು ಸಿದ್ದರಾಮಯ್ಯ ಹೇಳಿದರು.
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications