ಡಿಕೆ ರವಿ ಸಾವು: ಸಿಬಿಐ ತನಿಖೆಯ ಮೊದಲ ಪುಟ!
ಬೆಂಗಳೂರು, ಮೇ 20 : ಐಎಎಸ್ ಅಧಿಕಾರಿ ಡಿಕೆ ರವಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ಸಿಬಿಐ ತೀರ್ಮಾನಿಸಿದೆ. ಉದ್ಯಮ ಮತ್ತು ವೈಯಕ್ತಿಕ ಕಾರಣಕ್ಕಾಗಿ ಅವರು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. ರಿಯಲ್ ಎಸ್ಟೇಟ್ ಉದ್ಯಮ ಆರಂಭಿಸಲು ರವಿ ಪ್ರಯತ್ನ ಆರಂಭಿಸಿದ್ದರು ಎಂಬುದು ತನಿಖೆಯಿಂದ ಬಹಿರಂಗವಾಗಿದೆ.
ಡಿಕೆ ರವಿ ನಿಗೂಢ ಸಾವಿನ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಪ್ರಾಥಮಿಕ ತನಿಖೆಯಿಂದ ಹಲವು ಮಾಹಿತಿಗಳನ್ನು ಸಂಗ್ರಹಣೆ ಮಾಡಿದ್ದಾರೆ. ರವಿ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದು, ಹೈದರಾಬಾದ್ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ನಂತರ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮ : ಡಿಕೆ ರವಿ ಅವರು ಚಿಕ್ಕಬಳ್ಳಾಪುರದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಆರಂಭಿಸಲು ಸಿದ್ಧತೆ ನಡೆಸಿದ್ದರು. 50 ಎಕರೆ ಜಾಗವನ್ನು ಖರೀದಿ ಮಾಡಲು ಮುಂದಾಗಿದ್ದರು. ರವಿ ಮತ್ತು ಅವರ ಸ್ನೇಹಿತ ಹರಿ ಸೇರಿಕೊಂಡು ಈ ಉದ್ಯಮ ಆರಂಭಿಸಲು ಮುಂದಾಗಿದ್ದರು. [ಡಿಕೆ ರವಿ ಕೇಸ್: ಮತ್ತೊಮ್ಮೆ ಅಟಾಪ್ಸಿ ಪರೀಕ್ಷೆ]
ಆರ್ ಅಂಡ್ ಎಚ್ ಪ್ರಾಪರ್ಟೀಸ್ ಹೆಸರಿನಲ್ಲಿ ರವಿ ಮತ್ತು ಹರಿ ಸೇರಿಕೊಂಡು ಉದ್ಯಮ ಆರಂಭಿಸುವ ಸಿದ್ಧತೆಯಲ್ಲಿದ್ದರು. ಇದಕ್ಕಾಗಿ 50 ಎಕರೆ ಜಾಗವನ್ನು ಚಿಕ್ಕಬಳ್ಳಾಪುರದಲ್ಲಿ ಖರೀದಿ ಮಾಡಲು ಮುಂದಾಗಿದ್ದರು.ಇದಕ್ಕಾಗಿ ಹಲವರ ಬಳಿ ಆರ್ಥಿಕ ಸಹಾಯವನ್ನು ಕೇಳಿದ್ದರು. [ರವಿ ಕಳಿಸಿದ ಕೊನೆ ವಾಟ್ಸಪ್ ಸಂದೇಶದಲ್ಲಿ ಏನಿದೆ?]
ಈಗಾಗಲೇ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಕೊಂಡಿದ್ದ ಡಿಕೆ ರವಿ ಅವರ ಬ್ಯಾಚ್ ಮೇಟ್ ವೊಬ್ಬರ ಪತಿ ರವಿ ಅವರ ಈ ಉದ್ಯಮದಲ್ಲಿ 10 ಲಕ್ಷ ಹಣ ತೊಡಗಿಸಿದ್ದರು ಎಂದು ಸಿಬಿಐ ಅಧಿಕಾರಿಗಳ ವಿಚಾರಣೆ ಸಂದರ್ಭದಲ್ಲಿ ಹರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಉದ್ಯಮದಲ್ಲಿ ನಷ್ಟ : ಡಿಕೆ ರವಿ ಅವರಿಗೆ ಉದ್ಯಮದಲ್ಲಿ ನಷ್ಟ ಉಂಟಾಗಿತ್ತು. ನಿರೀಕ್ಷೆಯಂತೆ ಅವರಿಗೆ 50 ಎಕರೆ ಜಾಗವನ್ನು ಖರೀದಿ ಮಾಡಲು ಸಾಧ್ಯವಾಗಿರಲಿಲ್ಲ. ಆದರೆ, ಉದ್ಯಮದಲ್ಲಿ ಹಣ ಹೂಡಿಕೆ ಮಾಡಿರುವವರು ಹಣವನ್ನು ವಾಪಸ್ ನೀಡುವಂತೆ ರವಿ ಅವರನ್ನು ಒತ್ತಾಯಿಸುತ್ತಿದ್ದರು.
ರವಿ ಮತ್ತು ಹರಿ ಸೇರಿ ಆರ್ ಅಂಡ್ ಎಚ್ ಪ್ರಾಪರ್ಟೀಸ್ ಬ್ಯಾಂಕ್ ಖಾತೆಯಿಂದ 2 ಕೋಟಿ ಹಣವನ್ನು ತೆಗೆದು ಹೂಡಿಕೆ ಮಾಡಿದವರಿಗೆ ನೀಡಿದ್ದರು. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ ಅದರಲ್ಲಿ 5.42 ಕೋಟಿ ಹಣ ಜಮಾವಾಗಿರುವುದು ಪತ್ತೆಯಾಗಿದೆ.
ಡಿಕೆ ರವಿ ಅವರ ನಿಗೂಢ ಸಾವಿನ ಪ್ರಕರಣ ರಾಜ್ಯಾದ್ಯಂತ ಭಾರೀ ಕುತೂಹಲ ಕೆರಳಿಸಿತ್ತು. ಜನರ ಭಾರೀ ವಿರೋಧಕ್ಕೆ ಮಣಿದ ಸರ್ಕಾರ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಪ್ರಾಥಮಿಕ ತನಿಖೆಯಿಂದ ರವಿ ಅವರ ಸಾವಿಗೆ ಕಾರಣ ಏನೆಂದು ಸಿಬಿಐ ಪತ್ತೆ ಹಚ್ಚಿದೆ. ಅಂತಿಮ ವರದಿ ಏನು ಹೇಳುತ್ತದೆ ಎನ್ನುವುದು ಕುತೂಹಲ ಮೂಡಿಸಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications