ಡಿಕೆ ರವಿ ಪ್ರಕರಣ : ಶುಕ್ರವಾರದ ಪ್ರಮುಖ ಬೆಳವಣಿಗೆಗಳು
ಬೆಂಗಳೂರು, ಮಾ. 20 : ಡಿಕೆ ರವಿ ಅವರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬ ಒತ್ತಾಯದ ನಡುವೆಯೇ ಸಿಐಡಿ ಪ್ರಕರಣದ ತನಿಖೆಯನ್ನು ಬಿರುಸಿನಿಂದ ಮುಂದುವರೆಸಿದೆ. ಶುಕ್ರವಾರ ಸಿಬಿಐ ತನಿಖೆಗೆ ಆಗ್ರಹಿಸಿ ಜೆಡಿಎಸ್ ಪಾದಯಾತ್ರೆ ಹಮ್ಮಿಕೊಂಡಿದೆ.
ಗುರುವಾರ ರಾತ್ರಿ ಸಿಐಡಿ ಅಧಿಕಾರಿಗಳು ಕೋರಮಂಗಲದ ವಾಣಿಜ್ಯ ತೆರಿಗೆ ಇಲಾಖೆ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿದರು. ಮತ್ತೊಂದು ತಂಡ ಕೋಲಾರದ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಯನ್ನು ವಿಚಾರಣೆ ನಡೆಸಿದ್ದಾರೆ. ಶುಕ್ರವಾರವೂ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿಚಾರಣೆ ಮುಂದುವರೆಯಲಿದೆ. [ಸಿಐಡಿ ಮತ್ತು ಸಿಬಿಐ ನಡುವಿನ ವ್ಯತ್ಯಾಸವೇನು?]

ರವಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಬೆಂಗಳೂರಿನ ಟೌನ್ಹಾಲ್ ಬಳಿ ಗುರುವಾರ ರಾತ್ರಿ ಪ್ರತಿಭಟನೆ ನಡೆಸುತ್ತಿದ್ದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರದೊಳಗೆ ಸಿಬಿಐ ತನಿಖೆಗೆ ವಹಿಸದಿದ್ದರೆ ಹೋರಾಟ ಮುಂದುವರೆಸುತ್ತೇವೆ ಎಂದು ಪ್ರತಿಪಕ್ಷ ಬಿಜೆಪಿ ಹೇಳಿದೆ. [ಈ ಸಾವು ನ್ಯಾಯವೇ ಮತ ಹಾಕಿ]
ಸಮಯ 6 ಗಂಟೆ : ಐಎಎಸ್ ಅಧಿಕಾರಿಗಳ ಸಂಘ ಡಿಕೆ ರವಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವ ಸ್ವತಂತ್ರ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಒತ್ತಾಯಿಸಿದೆ.
ಸಮಯ 5 ಗಂಟೆ : ಡಿ.ಕೆ.ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕಲಬುರಗಿಯ ಖಜೂರಿ ಗ್ರಾಮದಲ್ಲಿನ ಪಿಎಸ್ಐ ಮಲ್ಲಿಕಾರ್ಜುನ ಬಂಡೆ ಸಮಾಧಿಯಿಂದ, ತುಮಕುರಿನ ದೊಡ್ಡಕೊಪ್ಪಲ್ಲಿನ ಡಿ.ಕೆ.ರವಿ ಸಮಾಧಿವರೆಗೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
ಸಮಯ 4 ಗಂಟೆ : ಐಎಎಸ್ ಅಧಿಕಾರಿ ಡಿ.ಕೆ.ರವಿ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ವಿದ್ಯಾರ್ಥಿಯೊಬ್ಬ ಪಾದಯಾತ್ರೆ ಪ್ರಾರಂಭಿಸಿದ್ದಾನೆ. ತುಮಕೂರಿನ ಎಸ್ಎಸ್ಐಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿ ದರ್ಶನ್, ಏಕಾಂಗಿಯಾಗಿ ತುಮಕೂರಿನ ಟೌನ್ಹಾಲ್ ವೃತ್ತದಿಂದ ಪಾದಯಾತ್ರೆ ಆರಂಭಿಸಿದ್ದಾನೆ.
ಸಮಯ 3 ಗಂಟೆ : ರಾಜ್ಯ ಒಕ್ಕಲಿಗರ ಸಂಘದಿಂದ ಐಎಎಸ್ ಅಧಿಕಾರಿ ಡಿಕೆ ರವಿ ಕುಟುಂಬಕ್ಕೆ 10 ಲಕ್ಷ ರೂ. ಸಹಾಯಧನ ಹಾಗೂ ಅವರ ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ನೀಡಲಾಗುತ್ತದೆ ಎಂದು ಡಿ.ಕೆ.ರವಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಡಾ.ಅಪ್ಪಾಜಿಗೌಡ ಘೋಷಣೆ ಮಾಡಿದ್ದಾರೆ.
ಸಮಯ 2 ಗಂಟೆ : ಐಎಎಸ್ ಅಧಿಕಾರಿ ಡಿಕೆ ರವಿ ಅವರ ಸಾವಿನ ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐಗೆ ವಹಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರರೊಂದಿಗೆ ಮಾತನಾಡಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಕುರಿತು ನಿರ್ದೇಶನ ನೀಡಿದ್ದಾರೆ. ಸೋಮವಾರದ ವಿಧಾನಸಭೆ ಕಲಾಪದಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. [ಡಿಕೆ ರವಿ ನಿಗೂಢ ಸಾವು : ಸೋಮವಾರ ಪ್ರಾಥಮಿಕ ವರದಿ]
ಸಮಯ 1.28 : ಡಿಕೆ ರವಿ ಅವರ ಸಹೋದರ ರಮೇಶ್ ಅವರಿಗೆ ಅಪರಿಚಿತರು ಕರೆ ಮಾಡಿ ಪ್ರಾಣ ಬೆದರಿಕೆ ಹಾಕಿದ್ದಾರೆ. ಪ್ರತಿಭಟನೆ, ದೂರು ಎಂದು ಹೋದರೆ ನಿಮ್ಮ ಕುಟುಂಬವನ್ನು ನಾಶ ಮಾಡುತ್ತೇನೆ ಎಂದು ಶುಕ್ರವಾರ ಬೆಳಗ್ಗೆ ಕರೆ ಮಾಡಿದ್ದಾರೆ. ರಮೇಶ್ ಅವರು ಕರೆ ಬಂದ ತಕ್ಷಣ ಮಕ್ಕಳು ಓದುತ್ತಿರುವ ಹುಲಿಯೂರು ದುರ್ಗದ ಜ್ಞಾನ ಭಾರತಿ ಶಾಲೆಗೆ ಕರೆ ಮಾಡಿ ಮಕ್ಕಳನ್ನು ಅಪರಿಚಿತರೊಂದಿಗೆ ಕಳಿಸಬೇಡಿ ಎಂದು ಮನವಿ ಮಾಡಿದ್ದಾರೆ.
ಸಮಯ 1.10 : ಡಿಕೆ ರವಿ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿಕೆ ಸುರೇಶ್ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ. ಇತ್ತ ಅವರ ಸಹೋದರ ಇಂಧನ ಸಚಿವ ಡಿಕೆ ಶಿವಕುಮಾರ್ ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಹೇಳುತ್ತಿದ್ದಾರೆ.

ಸಮಯ 12.40 : ಸಿದ್ದರಾಮಯ್ಯ ಮತ್ತು ರಾಜ್ಯಪಾಲರ ಭೇಟಿ ಮುಕ್ತಾಯವಾಗಿದೆ. ರಾಜ್ಯಪಾಲರಿಗೆ ಡಿಕೆ ರವಿ ಅವರ ಪ್ರಕರಣದ ಬಗ್ಗೆ ಪೂರ್ಣ ಮಾಹಿತಿ ನೀಡಿದ್ದೇನೆ. ಸಿಐಡಿ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದೇನೆ ಎಂದು ಸಿದ್ದರಾಮಯ್ಯ ಭೇಟಿಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಸಮಯ 12 ಗಂಟೆ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಭವನಕ್ಕೆ ಭೇಟಿ ನೀಡಿದ್ದು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿದ್ದಾರೆ. ಗುರುವಾರ ಬಿಜೆಪಿ ಮತ್ತು ಜೆಡಿಎಸ್ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ರವಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸರ್ಕಾರಕ್ಕೆ ಸೂಚನೆ ನೀಡುವಂತೆ ಮನವಿ ಮಾಡಿದ್ದರು.

ಸಮಯ 11 ಗಂಟೆ : ಐಎಎಸ್ ಅಧಿಕಾರಿ ಡಿಕೆ ರವಿ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಒಕ್ಕಲಿಗೆ ಸಂಘ ಬೃಹತ್ ಪಾದಯಾತ್ರೆ ಆರಂಭಿಸಿದೆ. ಕಿಮ್ಸ್ ಆವರಣದಲ್ಲಿನ ಕಚೇರಿಯಿಂದ ಫ್ರೀಡಂಪಾರ್ಕ್ ವರೆಗೆ ಪಾದಯಾತ್ರೆ ನಡೆಯಲಿದ್ದು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಸಮಯ 10.45 : ರವಿ ಅವರ ಸೋದರತ್ತೆ ಸಾವು : ಡಿ.ಕೆ. ರವಿ ಸಾವಿನಿಂದ ನಂತರ ಅಘಾತಕ್ಕೊಳಗಾಗಿ ಊಟ ಬಿಟ್ಟಿದ್ದ ಅವರ ಸೋದರತ್ತೆ ಪದ್ಮಮ್ಮ (56) ಶುಕ್ರವಾರ ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನದಿಂದ ಅಸ್ವಸ್ಥರಾಗಿದ್ದ ಪದ್ಮಮ್ಮ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಸಮಯ 10.15 : ಡಿಕೆ ರವಿ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಶಿರಾ ನಿವಾಸಿ ಶಶಿ ಕುಮಾರ್ ತುಮಕೂರಿನ ಟೌನ್ಹಾಲ್ನಿಂದ ಬೆಂಗಳೂರಿನ ತನಕ ಪಾದಯಾತ್ರೆ ಕೈಗೊಂಡಿದ್ದಾರೆ.
ಸಮಯ 10 ಗಂಟೆ : ಐಎಎಸ್ ಅಧಿಕಾರಿ ಡಿಕೆ ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಇಂದು ಮಂಡ್ಯ ಬಂದ್ಗೆ ಕರೆ ನೀಡಿವೆ.
ಸಮಯ 9 ಗಂಟೆ : ಡಿಕೆ ರವಿ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ರವಿ ಅವರ ಮಾವ ಹನುಮಂತರಾಯಪ್ಪ ಮತ್ತು ಪತ್ನಿ ಕುಸುಮಾ ಅವರ ಹೇಳಿಕೆಯನ್ನು ಇಂದು ಸಿಐಡಿ ಅಧಿಕಾರಿಗಳು ಪಡೆಯಲಿದ್ದಾರೆ. ಬುಧವಾರ ಸಂಜೆ ಒಂದು ಬಾರಿ ಇಬ್ಬರ ಹೇಳಿಕೆಗಳನ್ನು ಅಧಿಕಾರಿಗಳು ಪಡೆದಿದ್ದಾರೆ.

ಮತ್ತೊಂದು ತಂಡ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿಚಾರಣೆ ನಡೆಸಲಿದ್ದಾರೆ. ರವಿ ಅವರು ಇತ್ತೀಚೆಗೆ ನಡೆಸಿದ ದಾಳಿಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಸಂಗ್ರಹಣೆ ಮಾಡಲಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಲಿದ್ದಾರೆ. [ಡಿಕೆ ರವಿ ಪ್ರಕರಣ, ಗುರುವಾರದ ಪ್ರಮುಖ ಸುದ್ದಿಗಳು]
ಸಮಯ 8 ಗಂಟೆ : ಮಗನ ಸಾವಿನಿಂದ ಅಘಾತಗೊಂಡಿರುವ ಡಿಕೆ ರವಿ ಅವರ ತಾಯಿ ಗೌರಮ್ಮ ಮೂರು ದಿನಗಳಿಂದ ಊಟ ಮಾಡಿಲ್ಲ. ಹಿರಿಯ ಪುತ್ರ ರಮೇಶ್ ಅವರು ಮನವೊಲಿಕೆ ಮಾಡುತ್ತಿದ್ದು, ಪರಿಸ್ಥಿತಿ ಹೀಗೆ ಮುಂದುವರೆದರೆ ಆಸ್ಪತ್ರೆಗೆ ದಾಖಲು ಮಾಡುತ್ತೇನೆ ಎಂದು ಮಾಧ್ಯಮಗಳಿಗೆ ಹೇಳಿದ್ದಾರೆ. ದೊಡ್ಡಕೊಪ್ಪಲಿನಲ್ಲಿರುವ ನಿವಾಸದಲ್ಲಿ ಗೌರಮ್ಮ ಇದ್ದಾರೆ.

ಸಮಯ 7 ಗಂಟೆ : ಡಿಕೆ ರವಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇಂದು ಬೆಂಗಳೂರಿನ ಶಂಕರ ಮಠದಿಂದ ನವರಂಗ್ ಸರ್ಕಲ್ ತನಕ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications