ಡಿಕೆ ರವಿ ಶವ ಪರೀಕ್ಷೆ ಗೊಂದಲದಲ್ಲಿ ಸಿಬಿಐ
ಬೆಂಗಳೂರು, ಮೇ. 7: ಡಿಕೆ ರವಿ ಸಾವಿನ ತನಿಖೆ ವಹಿಸಿಕೊಂಡಿರುವ ಸಿಬಿಐ ಅಧಿಕಾರಿಗಳು ರವಿ ಕುಟುಂಬದ ಸದಸ್ಯರನ್ನು ಪ್ರಶ್ನೆ ಮಾಡಿ ಮಾಹಿತಿ ಕಲೆ ಹಾಕಿದ್ದಾರೆ. ಕುಟುಂಬದ ಕಡೆಯಿಂದ ಯಾವುದಾದರೂ ಒತ್ತಡವಿತ್ತೇ? ಅಥವಾ ವೈಯಕ್ತಿಕ ಸಮಸ್ಯೆಗಳಿದ್ದವೇ? ಎಂಬುದರ ಕುರಿತು ಸಿಬಿಐ ಮಾಹಿತಿ ಕಲೆಹಾಕಿದೆ.
ಡಿಕೆ ರವಿ ಅವರ ದೇಹವನ್ನು ಮತ್ತೆ ಹೊರತೆಗೆದು ಪರೀಕ್ಷೆಗೆ ಒಳಪಡಿಸಬೇಕೋ? ಬೇಡವೋ? ಎಂಬ ಗೊಂದಲವೂ ಉಂಟಾಗಿದೆ. ಸಿಬಿಐ ಅಧಿಕಾರಿಗಳು ಈ ಬಗ್ಗೆ ಪ್ರಶ್ನೆ ಮಾಡಿದ್ದು ಕುಟುಂಬ ಸದಸ್ಯರ ಅಭಿಪ್ರಾಯವನ್ನು ಕಲೆ ಹಾಕಿದ್ದಾರೆ. ಆದರೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ.["ಡಿಕೆ ರವಿ ಸಂಸಾರದಲ್ಲಿ ಯಾವುದೇ ತೊಂದರೆ ಇರ್ಲಿಲ್ಲ"]

ಆಡಳಿತ ಒತ್ತಡ ಹೆಚ್ಚಾಗಿತ್ತೇ?
ಡಿಕೆ ರವಿ ಕೆಲಸಗಳು ಬದಲಾಗುತ್ತಿದ್ದು ಅಧಿಕಾರಕ್ಕೆ ಸಂಬಂಧಿಸಿದ ಅನೇಕ ಒತ್ತಡಗಳು ಇದ್ದದ್ದು ನಿಜ. ಇದನ್ನು ಅವರು ಮನೆಯಲ್ಲಿ ಕೆಲವೊಮ್ಮೆ ಹಂಚಿಕೊಂಡಿದ್ದರು. ಅವರ ಸಾವಿನ ಹಿಂದೆ ಯಾವುದೋ ಕಾಣದ ಕೈಗಳ ಕೈವಾಡವಿದೆ ಎಂದು ಕುಟುಂಬ ಸದಸ್ಯರು ತಮ್ಮ ಹೇಳಿಕೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.[ಚಾಲಕನ ಹೇಳಿಕೆಗೆ ಹೆಚ್ಚು ಮಹತ್ವ]
ಶವ ಹೊರತೆಗೆದು ಮತ್ತೆ ಪರೀಕ್ಷೆಗೆ ಒಳಪಡಿಸುವ ಬಗ್ಗೆಯೂ ಮಾತುಕತೆ ನಡೆದಿದೆ. ಆದರೆ ಈ ಬಗ್ಗೆ ಅಂತಿಮವಾಗಿ ಯಾವುದೇ ತೀರ್ಮಾನಕ್ಕೆ ಬರಲಾಗಿಲ್ಲ.
ದಾಖಲೆಗಳ ಪರಿಶೀಲನೆ
ರವಿ ಸಾವಿಗೆ ಸಂಬಂಧಿಸಿದ ಡಜನ್ ಗೂ ಅದಿಕ ಫೈಲ್ ಗಳನ್ನು ಸಿಬಿಐ ಅಧಿಕಾರಿಗಳು ಪರೀಶಿಲನೆ ಮಾಡಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಬಗ್ಗೆಯೂ ತಂಡ ಮಾಹಿತಿ ಕಲೆ ಹಾಕಿದೆ.
ಸಿಬಿಐ ತಂಡ ಪೊಲೀಸ್ ಆಯುಕ್ತ ಎಂಎನ್ ರೆಡ್ಡಿ, ಡಿಕೆ ರವಿ ಸಹೋದ್ಯೋಗಿಗಳು, ಡಿಕೆ ರವಿ ಮಾವ ಅವರನ್ನು ಪ್ರಶ್ನೆ ಮಾಡಿ ಮಾಹಿತಿ ಕಲೆ ಹಾಕಿತ್ತು. ಅಲ್ಲದೇ ರವಿ ಕೊನೆಯದಾಗಿ ಕಳಿಸಿದ್ದ ಮೆಸೇಜ್ ಗಳ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದೆ. [ಡಿಕೆ ರವಿ ಸಾವು: ಸಿಬಿಐಗೆ ಉತ್ತರ ನೀಡಿದ ಎಂಎನ್ ರೆಡ್ಡಿ]
ಸಿಐಡಿ ಏನು ಹೇಳುತ್ತಿದೆ?
ಈ ಮೊದಲುಮ ತನಿಖೆ ನಡೆಸಿದ್ದ ಸಿಐಡಿ ಡಿಕೆ ರವಿ ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂಬ ತೀರ್ಮಾನಕ್ಕೆ ಬಂದಿತ್ತು. ಸಿಬಿಐ ಅಧಿಕಾರಿಗಳು ಸಿಐಡಿ ಅಧಿಕಾರಿಗಳನ್ನು ಪ್ರಶನೆ ಮಾಡಿದ್ದಾರೆ. ಅವರ ಎದುರು ಸಂಬಂಧಿಸಿದರು ನೀಡಿದ ಹೇಳಿಕೆಯನ್ನು ಪರಿಶೀಲನೆ ಮಾಡುತ್ತಿದ್ದಾರೆ.[ಡಿಕೆ ರವಿ ಸಾವು ಪ್ರಕರಣದ ಸಂಪೂರ್ಣ ಮಾಹಿತಿ]
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications