ಡಿಕೆ ರವಿ ಆತ್ಮಹತ್ಯೆ ಹಿಂದಿರುವ ಕಾರಣವೇನು?
ಬೆಂಗಳೂರು, ಅಕ್ಟೋಬರ್ 05 : ಐಎಎಸ್ ಅಧಿಕಾರಿ ಡಿಕೆ ರವಿ ಅವರ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಆತ್ಮಹತ್ಯೆಗೆ ಹಲವು ಕಾರಣಗಳನ್ನು ಪಟ್ಟಿ ಮಾಡಿದ್ದಾರೆ. ಸಿಬಿಐ ಸಿದ್ಧಪಡಿಸಿದ ಅಂತಿಮ ವರದಿ ಸಿಬಿಐ ಕೇಂದ್ರ ಕಚೇರಿಯಲ್ಲಿ ಅಂತಿಮ ಅನುಮತಿಗಾಗಿ ಕಾಯುತ್ತಿದೆ.
ತನಿಖಾ ತಂಡ ಸಿದ್ಧಪಡಿಸಿದ ಅಂತಿಮ ವರದಿಯನ್ನು ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ ಬಳಿಕ ಆತ್ಮಹತ್ಯೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ಮುಂದುವರೆಸಬೇಕೆ? ಬೇಡವೇ? ಎಂದು ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ. [ಡಿಕೆ ರವಿಯದು ಆತ್ಮಹತ್ಯೆ]

ವೈಯಕ್ತಿಕ ಮತ್ತು ಹಣಕಾಸು ಕಾರಣಗಳಿಂದಾಗಿ ಡಿಕೆ ರವಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿಬಿಐ ತನ್ನ ವರದಿಯಲ್ಲಿ ಹೇಳಿದೆ. ಹಣಕಾಸಿನ ವಿಚಾರದಲ್ಲಿ ಡಿಕೆ ರವಿ ಅವರನ್ನು ಅವರ ಸ್ನೇಹಿತರು ವಂಚಿಸಿದ್ದರು ಎಂದು ಸಿಬಿಐ ತನಿಖೆಯಿಂದ ತಿಳಿದುಬಂದಿದೆ. [ಡಿಕೆ ರವಿ ಪ್ರಕರಣದ ಟೈಮ್ ಲೈನ್]
ಅನುಮತಿ ಬೇಕು : ನಿಯಮಗಳ ಪ್ರಕಾರ ಸಿಬಿಐ ತನಿಖಾ ತಂಡ ವರದಿ ಸಿದ್ಧಗೊಳಿಸಿದ ನಂತರ ಅದಕ್ಕೆ ಕೇಂದ್ರ ಕಚೇರಿಯ ಅನುಮತಿ ಬೇಕು. ದೆಹಲಿಯ ಕೇಂದ್ರ ಕಚೇರಿಯಲ್ಲಿರುವ ಅಧಿಕಾರಿಗಳು ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆಯನ್ನು ಮುಂದುವರೆಸಬೇಕೆ? ಎಂದು ತಿರ್ಮಾನವನ್ನು ಕೈಗೊಳ್ಳುತ್ತಾರೆ. [ಡಿಕೆ ರವಿ ಆತ್ಮಹತ್ಯೆ ಹಿಂದೆ ಕ್ರಿಮಿನಲ್ ಸಂಚಿಲ್ಲ: ಸಿಬಿಐ]
ತನಿಖೆ ಮತ್ತು ವೈಜ್ಞಾನಿಕ ವರದಿಗಳ ಆಧಾರದ ಮೇಲೆ ಇದು ಆತ್ಮಹತ್ಯೆ ಪ್ರಕರಣ. ಈ ಪ್ರಕರಣದಲ್ಲಿ ಯಾವುದೇ ವ್ಯಕ್ತಿಯ ಕೈವಾಡವಿಲ್ಲ ಎಂದು ಹೇಳಿರುವ ಸಿಬಿಐ ಯಾವುದೇ ವ್ಯಕ್ತಿಯ ವಿರುದ್ಧ ತನಿಖೆಗೆ ಶಿಫಾರಸು ಮಾಡುವುದಿಲ್ಲ ಎಂದು ವರದಿ ನೀಡಿದೆ.
ಮರಣೋತ್ತರ ಪರೀಕ್ಷೆ ವರದಿ ಉಸಿರುಗಟ್ಟಿ ರವಿ ಅವರು ಸಾವನ್ನಪ್ಪಿದ್ದಾರೆ ಎಂದು ಇತ್ತು. ರವಿಯವರ ದೇಹದ ಕೆಲ ಭಾಗಗಳನ್ನು ಕೇಂದ್ರ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಎಲ್ಲಾ ವರದಿಗಳು ಇದು ಆತ್ಮಹತ್ಯೆ ಎಂದೇ ಹೇಳಿವೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications