ಸಿದ್ದರಾಮಯ್ಯ ಇಳಿಸಲು ಡಿಕೆ ಶಿವಕುಮಾರ್ ಮಾತಿನಂತೆ ಬಿವೈ ವಿಜಯೇಂದ್ರ ಪಾದಯಾತ್ರೆ: ಹೊಸ ಬಾಂಬ್ ಸಿಡಿಸಿದ ಯತ್ನಾಳ್
ಬೆಳಗಾವಿ, ಜುಲೈ 30: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರನ ಮುಡಾ ಹೋರಾಟ ಸಿದ್ದರಾಮಯ್ಯ ಇಳಿಸಿ ಡಿಕೆ ಶಿವಕುಮಾರ ಸಿಎಂ ಮಾಡಲು ಮಾಡುತ್ತಿದ್ದಾರೆ. ಈ ಹೋರಾಟದ ಬಗ್ಗೆ ಬಹಿರಂಗ ಪಡಿಸಬೇಕು ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಒತ್ತಾಯಿಸಿದರು.
ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಆದೇಶದಂತೆ ಬಿಜಿಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ. ಈ ಪಾದಯಾತ್ರೆ ಹೊಂದಾಣಿ ರಾಜಕಾರಣ ಇದೆ.

ಡಿ.ಕೆ ಶಿವಕುಮಾರ ಉಪಕಾರ ತೀರಸಲಿಕೆ ಇವತ್ತು ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ. ನಾವು ಮತ್ತು ರಮೇಶ ಜಾರಕಿಹೋಳಿ ಕೇಂದ್ರದಿಂದ ಒಪ್ಪಿಗೆ ಪಡೆದು ಪ್ರತಿಭಟನೆ ಮಾಡುತ್ತಿದ್ದೇವೆ.ಆದರೆ ಎಲ್ಲಿಂದ ಪ್ರತಿಭಟನೆ ಮಾಡಬೇಕೆಂದು ನಿರ್ಣಯವಾಗಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಇನ್ನೂ ಬಿಜೆಪಿಯಲ್ಲಿ ಬಣ ರಾಜಕೀಯ ನಡೆಯುತ್ತಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಬಿಜೆಪಿಯಲ್ಲಿ ಎರಡು ಬಣ ಇಲ್ಲ. ಕಾಂಗ್ರೆಸ್ ಭ್ರಷ್ಟಾಚಾರ ವಿರುದ್ದ ಯಾವುದೇ ಒಳ ಒಪ್ಪಂದ ಇಲ್ಲದೇ ನಾವು ಹೋರಾಟ ಮಾಡುತ್ತಿದ್ದೇವೆ. ತಾವು ಮಾಡುವ ಹೋರಾಟ ಭ್ರಷ್ಟರ ವಿರುದ್ದ ಎಂದು ಹೇಳುವ ಮುಲಕ ವಿಜಯೇಂದ್ರ ವಿರುದ್ದ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಪಕ್ಷ ದಿವಾಳಿಯಾಗಿದೆ, ಹೆಣ್ಣು ಮಕ್ಕಳಿಗೆ 2,000 ಹಣ ಕೂಡಾ ಬಿಡುಗಡೆಯಾಗಿಲ್ಲ. ಭಾಗ್ಯದ ಲಕ್ಷ್ಮೀ ಬೆಳಗಾವಿಯಲ್ಲಿಯೇ ಕುಳತ್ತಿದ್ದಾರೆ. ಲಕ್ಷ್ಮೀ ಅಕ್ಕಾ ದುಡ್ಡು ಕೊಡಲಿಕ್ಕೆ ತಯಾರಿಲ್ಲ. ಲಕ್ಷ್ಮೀ ಅಕ್ಕಾ ದುಡ್ಡರೆ ಕೊಡವ್ವಾ ಇಲ್ಲಾ ಮನಿಗೆ ನಡಿವಾ ಎಂದು ಲೇವಡಿ ಮಾಡಿದರು.
ಮಾಜಿ ಹಾಗೂ ಹಾಲಿ ಸಿಎಂ ಮಕ್ಕಳು ಮಾತ್ರ ಬೆಳೆಯುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಆರೋಪ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಮಾಜಿ ಹಾಗೂ ಹಾಲಿ ಸಿಎಂ ಮಕ್ಕಳು ಬೆಳೆಯುತ್ತಿದ್ದರು ನಿಜಾ ಎಂದ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ ಒಪ್ಪಿಕೊಂಡರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications