ನೋಟು ಬದಲು ಪ್ರಕರಣ: ಬಂಧನದ ಭೀತಿಯಲ್ಲಿ ಡಿಕೆಶಿ ಆಪ್ತರು
ಬೆಂಗಳೂರು, ಜೂನ್ 30: ನೋಟು ಬದಲು ಪ್ರಕರಣದ ಕುರಿತು ಸಿಬಿಐ ನಿಂದ ಚಾರ್ಜ್ ಶೀಟ್ ದಾಖಲಾದ ಬೆನ್ನಲ್ಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಅವರ ಆಪ್ತರಿಗೆ ಹಿನ್ನಡೆಯಾಗಿದೆ.
ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅವರ ಆರು ಜನ ಆಪ್ತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು ಆರೋಪಿಗಳು ಬಂಧನದ ಭೀತಿಯಲ್ಲಿದ್ದಾರೆ.
ಬಿ.ಪದ್ಮನಾಭಯ್ಯ,ಶಿವಕುಮಾರ್ ಮಾಜಿ ಪಿ.ಎ. ಪಿ.ಎ ಶೇಷಗಿರಿ, ಎಸ್ ಪದ್ಮರೇಖಾ, ತಿಮ್ಮಯ್ಯ , ಶಿವನಾಂದ್ ಹಾಗೂ ನಂಜಪ್ಪ ಅವರುಗಳ ನಿರೀಕ್ಷಣಾ ಅರ್ಜಿಯನ್ನು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ಹೆಚ್. ಪುಷ್ಪಂಜಾಲಿ ದೇವಿ ವಜಾಗೊಳಿಸಿದರು ಆರೋಪಿಗಳೆಲ್ಲರೂ ಡಿಕೆಶಿ ಕುಟುಂಬದ ಆಪ್ತರು ಎನ್ನಲಾಗಿದೆ.

ಇದೊಂದು ಗಂಭೀರ ಪ್ರಕರಣವಾಗಿದ್ದು ಆರೋಪಿಗಳಿಗೆ ಈ ಹಂತದಲ್ಲಿ ಜಾಮೀನು ನೀಡುವುದು ಸರಿಯಲ್ಲ ಎಂಬ ಅಭಿಪ್ರಾಯವನ್ನು ಹೈಕೋರ್ಟ್ ತಳೆದಿದೆ. ಆರೋಪಿಗಳೆಲ್ಲರೂ 10 ಲಕ್ಷ ಮೌಲ್ಯದ 500,1000 ನೋಟುಗಳನ್ನು ರಾಮನಗರ ಕಾರ್ಪೊರೇಷನ್ ಬ್ಯಾಂಕಿನಲ್ಲಿ ಹೊಸ ನೋಟುಗಳನ್ನಾಗಿ ಬದಲಾಯಿಸಿಕೊಂಡಿದ್ದರು ಎಂಬ ಆರೋಪ ಹೊರಿಸಲಾಗಿದೆ.
ಆರೋಪಿಗಳು ಬದಲಾಯಿಸಿದ ಹಣ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಸುರೇಶ್ ಅವರದ್ದೇ ಹಣ ಎನ್ನಲಾಗುತ್ತಿದ್ದು. ತನಿಖೆ ಮುಂದುವರೆದಂತೆ ಡಿಕೆಶಿ ಹಾಗೂ ಸುರೇಶ್ ಅವರ ಬಂಧನದ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ.
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ












Click it and Unblock the Notifications