ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿ ಘೋಷಿಸಿದ ಡಿ ಕೆ ಶಿವಕುಮಾರ್‌

ಬೆಂಗಳೂರು, ಜನವರಿ 24: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ. ಇತ್ತ ಬಿಜೆಪಿ ಹಾಗೂ ಜೆಡಿಎಸ್‌ ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿ ಮೈತ್ರಿ ನಾಯಕರೆಲ್ಲಾ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ನಿವಾಸದಲ್ಲಿ ಸಭೆ ನಡೆಸುವ ಮೂಲಕ ಚುನಾವಣಾ ಲೆಕ್ಕಾಚಾರವನ್ನ ನಡೆಸಿದ್ದಾರೆ.

ಈ ಮಧ್ಯೆ ಶಿಕ್ಷಕರ ಕ್ಷೇತ್ರದ ಚುನಾವಣೆ ಇದ್ದು ಪುಟ್ಟಣ್ಣ ನಮ್ಮ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಏನಾದರೂ ಮಾಡಿಕೊಳ್ಳಲಿ. ಶಿಕ್ಷಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಮ್ಮ ಅಭ್ಯರ್ಥಿ ಗೆಲ್ಲುವಂತೆ ಮಾಡಬೇಕು. ಇದು ನಿಮ್ಮ ಚುನಾವಣೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

DK Shivakumar announced Congress candidate for Bangalore Teachers Constituency

ಅಧಿಕಾರದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಪ್ರತಿ ಕ್ಷೇತ್ರದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು 18, ಜಿಲ್ಲಾ ಮಟ್ಟದಲ್ಲಿ 21 ಜನರನ್ನು ನೇಮಿಸಿ ನಿಮಗೆ ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಮನೆ ಬಾಗಿಲಿಗೆ ಹೋಗಿ ಜನರ ಸಮಸ್ಯೆ ಆಲಿಸಿ ಅದನ್ನು ಬಗೆಹರಿಸುವ ಕೆಲಸ ಮಾಡುತ್ತಿದ್ದೇನೆ. ಪರಿಷತ್ ಚುನಾವಣೆ ನಂತರ ಇತರ ಭಾಗಗಳಲ್ಲಿ ಈ ಕಾರ್ಯಕ್ರಮ ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿಯವರು ಧರ್ಮದ ವಿಚಾರವಾಗಿ ರಾಜಕಾರಣ ಮಾಡುತ್ತಿದ್ದಾರೆ. ಹೀಗಾಗಿ ಅವರು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ, ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದು ಜನಪರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ನೀವು ಧರ್ಮವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದರೂ ನಾವು ಅದರ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತಿಲ್ಲ. ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ, ಶಿವಕುಮಾರ ಹೆಸರಲ್ಲಿ ಶಿವ ಹಾಗೂ ಷಣ್ಮುಗ ಇದ್ದಾರೆ. ಹರಿಪ್ರಸಾದ್ ಅವರ ಹೆಸರಲ್ಲಿ ಹರಿ ಇದ್ದಾನೆ. ಕೃಷ್ಣ ಭೈರೇಗೌಡರ ಹೆಸರಲ್ಲಿ ಕೃಷ್ಣ ಇದ್ದಾನೆ. ಹಿಂದೂ ಧರ್ಮ ನಿಮ್ಮ ಮನೆ ಆಸ್ತಿಯೇ? ಎಂದು ಪ್ರಶ್ನಿಸಿದ್ದಾರೆ.

DK Shivakumar announced Congress candidate for Bangalore Teachers Constituency

ಧರ್ಮ ಯಾವುದಾದರೂ ತತ್ವವೊಂದೇ, ನಾಮ ನೂರಾದರೂ ದೈವವೊಂದೆ, ಪೂಜೆ ನೂರಾದರೂ ಭಕ್ತಿವೊಂದೇ, ಕರ್ಮ ಹಲವಾದರೂ ನಿಷ್ಠೇವೊಂದೇ, ದೇವನೊಬ್ಬ ನಾಮ ಹಲವು. ನಾವು ಕಲ್ಲು, ನೀರು, ಮರ, ಗಾಳಿಯಲ್ಲಿ ದೇವರನ್ನು ಕಾಣುತ್ತೇವೆ. ನಮ್ಮ ಸರ್ಕಾರದಲ್ಲಿ ಧಾರ್ಮಿಕ ದತ್ತಿ ಇಲಾಖೆ, ಹಜ್ ಸಮಿತಿ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ ಇದೆ. ಸಂವಿಧಾನದ ಪರವಾಗಿ ನಾವು ಎಲ್ಲಾ ಧರ್ಮಕ್ಕೂ ಆದ್ಯತೆ ನೀಡುತ್ತಾ ಬಂದಿದ್ದೇವೆ.

ಎಲ್ಲರಿಗೂ ಸಮಾನವಾಗಿ ಕಂಡು ಸರ್ವರಿಗೂ ಸಮಬಾಳು, ಸಮಪಾಲು ಎಂಬ ತತ್ವದ ಮೇಲೆ ಆಡಳಿತ ಮಾಡುತ್ತಿದ್ದೇವೆ. ನಿಮ್ಮ ಕೈಯಲ್ಲು ಅಧಿಕಾರ ಇತ್ತು. ಆಗ ಜನಪರ ಕಾರ್ಯಕ್ರಮ ಯಾಕೆ ಮಾಡಲಿಲ್ಲ. ಈಗ ಅಧಿಕಾರ ಹೋದ ನಂತರ ಸಂಕಟಪಡುತ್ತಿದ್ದಾರೆ. ಈ ಸರ್ಕಾರ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಬಲಿಷ್ಠವಾಯಿತು. ಇದನ್ನು ಬಿಜೆಪಿ ಸಹಿಸಲು ಆಗುತ್ತಿಲ್ಲ ಎಂದರು.

ನಾವೆಲ್ಲರೂ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ನಡೆದ ಭಾರತ ಜೋಡೋ ಯಾತ್ರೆ ವೇಳೆ ರಾಜ್ಯದಲ್ಲಿ ಚಾಮರಾಜನಗರದಿಂದ ರಾಯಚೂರಿನವರೆಗೂ ಹೆಜ್ಜೆ ಹಾಕಲಾಯಿತು. ಇದರ ಯಶಸ್ಸಿನಿಂದಾಗಿ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಬಲಿಷ್ಠವಾದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಿಮ್ಮ ಸೇವೆ ಅವಕಾಶ ಸಿಕ್ಕಿದೆ. ರಾಹುಲ್ ಗಾಂಧಿ ಅವರ ಯಾತ್ರೆಯಿಂದ ಬಿಜೆಪಿಯವರಿಗೆ ಭಯ ಹುಟ್ಟಿದೆ.

ನಾವು ಮತ್ತು ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ಮಾಡಿದ್ದೆವು. ಆ ಸರ್ಕಾರವನ್ನು ಬೀಳಿಸಿದವರ ಜತೆಗೆ ಇಂದು ಜೆಡಿಎಸ್ ಸಖ್ಯ ಬೆಳೆಸಿದೆ. ಅನ್ಯಾಯ ಮಾಡಿದವರ ಜತೆ ಸೇರಿ ರಾಜಕಾರಣ ಮಾಡುತ್ತಿದ್ದಾರೆ. ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮಿ, ಅನ್ನ ಭಾಗ್ಯ ಯೋಜನೆಗಳು ಜನರಿಗೆ ನೆರವಾಗಿದೆ. ಅನ್ನಭಾಗ್ಯ ಯೋಜನೆ ಅಕ್ಕಿಯೇ ನಾವು ಜನರಿಗೆ ನೀಡುವ ಮಂತ್ರಾಕ್ಷತೆ. ನಾವು ಈ ಯೋಜನೆಗಳನ್ನು ಒಂದು ಜಾತಿ, ಧರ್ಮ, ಸಮುದಾಯ, ಪಕ್ಷದವರಿಗೆ ಮಾತ್ರ ನೀಡುತ್ತಿದ್ದೇವಾ? ಇದೇ ಕಾಂಗ್ರೆಸ್ ಪಕ್ಷದ ಬದ್ಧತೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+