DK Shivakumar: ಕಾಂಗ್ರೆಸ್‌ ಟೀಕೆಗಳ ಲೆಕ್ಕ ನೀಡುವ ಬದಲು ರಾಜ್ಯಕ್ಕೆ ಕೊಟ್ಟ ಕೊಡುಗೆಗಳ ಲೆಕ್ಕ ನೀಡಲಿ: ಡಿ.ಕೆ. ಶಿವಕುಮಾರ್

ಬೆಂಗಳೂರು,ಏಪ್ರಿಲ್30:‌ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಬಂದು ವಿರೋಧ ಪಕ್ಷಗಳ ಟೀಕೆಗಳ ಬಗ್ಗೆ ಲೆಕ್ಕ ನೀಡುತ್ತಿದ್ದಾರೆ. ಅದರ ಬದಲು ಅವರ ಡಬಲ್ ಇಂಜಿನ್ ಸರ್ಕಾರ ರಾಜ್ಯಕ್ಕೆ ನೀಡಿರುವ ಕೊಡುಗೆಗಳ ಲೆಕ್ಕ ಹೇಳಬೇಕಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಪ್ರಧಾನಿಗಳು, ಬೇರೆ ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಬಂದು ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದಾರೆ. ವಿಶ್ವಗುರು ಎಂದೇ ಕರೆದುಕೊಳ್ಳುವ ಮೋದಿ ಅವರು ಅಷ್ಟು ದೊಡ್ಡ ಸ್ಥಾನದಲ್ಲಿದ್ದು, ಅವರು ರಾಜ್ಯಕ್ಕೆ ಬಂದು ಅವರ ವಿರುದ್ಧದ ಟೀಕೆಗಳ ಲೆಕ್ಕ ಹೇಳುತ್ತಿದ್ದಾರೆ. ಆದರೆ ರಾಜ್ಯದ ಜನ ಅವರ ಸಾಧನೆ, ಅಭಿವೃದ್ಧಿ ಕಾರ್ಯಕ್ರಮಗಳ ಲೆಕ್ಕ ಹೇಳುತ್ತಾರೆ ಎಂದು ಕಾಯುತ್ತಿದ್ದಾರೆ.

DK Shivakumar Asked To Account For The Contributions Given To The State

ಮೋದಿ ಅವರು ಕೋವಿಡ್ ಸಂದರ್ಭದಲ್ಲಿ 20 ಲಕ್ಷ ಕೋಟಿ ಪ್ಯಾಕೆಜ್ ಘೋಷಣೆ ಮಾಡಿದ್ದು ಯಾವ ವರ್ಗದವರಿಗೆ ಎಷ್ಟು ಪರಿಹಾರ ನೀಡಲಾಗಿದೆ, ಕೋವಿಡ್ ಮೃತರಿಗೆ, ಆಕ್ಸಿಜನ್ ದುರಂತದಲ್ಲಿ ಸತ್ತವರಿಗೆ ಎಷ್ಟು ಪರಿಹಾರ ನೀಡಿದ್ದಾರೆ ಎಂಬ ಲೆಕ್ಕ ನೀಡಲೇ ಇಲ್ಲ. ಈ ವಿಚಾರವಾಗಿ ಮಾತನಾಡಿದ್ದಾರೆ ಅವರಿಗೆ ಗೌರವ ಇರುತ್ತಿತ್ತು. ಮೋದಿ ಅವರು ನನಗೆ ಮತ ಹಾಕಿ ಎಂದು ಕೇಳುತ್ತಿದ್ದಾರೆ. ಅವರಿಗೂ ರಾಜ್ಯ ಚುನಾವಣೆಗೆ ಏನು ಸಂಬಂಧ? ಡಬಲ್ ಇಂಜಿನ್ ಸರ್ಕಾರ ಏನು ಮಾಡಿದೆ ಎಂದು ಅವರ ಮುಖ ನೋಡಿ ಮತ ನೀಡಬೇಕು.

ಬೊಮ್ಮಾಯಿ, ಯಡಿಯೂರಪ್ಪ, ಅವರ ಮಂತ್ರಿಗಳ ಸಾಧನೆ ಬಗ್ಗೆ ಮಾತನಾಡುತ್ತಿಲ್ಲ. ದಕ್ಷ ಆಡಳಿತಕ್ಕೆ ಹೆಸರಾಗಿರುವ ಕರ್ನಾಟಕ ರಾಜ್ಯದಲ್ಲಿ ಇವರು ತಮ್ಮ ಆಡಳಿತ ಹೇಗಿತ್ತು ಎಂಬುದನ್ನು ಹೇಳುತ್ತಿಲ್ಲ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ, ಆದರೆ ರಾಜ್ಯದಲ್ಲಿ ನಾಯಕತ್ವವನ್ನು ಬಿಂಬಿಸಬೇಕಲ್ಲವೆ. ಬಿಜೆಪಿ ಇಂತಹ ದುಸ್ಥಿತಿಗೆ ಬಂದಿದೆ ಎಂಬುದಕ್ಕೆ ಸಾಕ್ಷಿ.

DK Shivakumar Asked To Account For The Contributions Given To The State

ಪ್ರಧಾನಿ, ನಡ್ಡಾ ಸೇರಿದಂತೆ ಬಿಜೆಪಿ ನಾಯಕರು ಕಾಂಗ್ರೆಸ್ ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುತ್ತಿದ್ದಾರೆ. 200 ಯೂನಿಟ್ ವಿದ್ಯುತ್ ಉಚಿತ, 2 ಸಾವಿರ ಖಚಿತ, 10 ಕೆ.ಜಿ ಅಕ್ಕಿ ನಿಶ್ಚಿತ, ಎಲ್ಲಾ ಮಹಿಳೆಯರಿಗೆ ಸಾರ್ವಜನಿಕ ಬಸ್ ಪ್ರಯಾಣ ಉಚಿತ, ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ಎಂದರು.

ಈ ಐದು ಯೋಜನೆಗಳನ್ನು ಸರ್ಕಾರ ಬಂದ ಮೊದಲ ಸಂಪುಟದಲ್ಲಿ ಜಾರಿ ಮಾಡಿ ಜೂನ್ ತಿಂಗಳಿಂದ ಜಾರಿ ಮಾಡುತ್ತೇವೆ. ಮುಂದಿನ ಎರಡು ದಿನಗಳಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ. ಎಲ್ಲಾ ವರ್ಗಗಳಿಗೆ ಆದ್ಯತೆ ನೀಡಲಾಗಿದೆ. ಹಳೆ ಪಿಂಚಣಿ ಬಗ್ಗೆ ಆಲೋಚನೆ ಮಾಡಿದ್ದು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಕರಾವಳಿ, ಮಲೆನಾಡು ಪ್ರದೇಶ, ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ ನೀಡಲಾಗುವುದು.

ನಾನು ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಜೆಡಿಎಸ್ ತವರು ಮಂಡ್ಯ ಹಾಗೂ ಹಾಸನ ಜಿಲ್ಲೆ ಪ್ರವಾಸ ಮಾಡಿದ್ದೆವು. ಅಲ್ಲಿ ಜನ ತೋರಿದ ವಿಶ್ವಾಸ ಪ್ರೀತಿ, ಮೇ 10ರಂದು ಬದಲಾವಣೆ ಗಾಳಿ ಬೀಸಲಿದೆ ಎಂದು ಸಾಬೀತು ಮಾಡಿತ್ತು. ನನ್ನ ಮೇಲೆ, ಖರ್ಗೆ ಹಾಗೂ ಸಿದ್ದರಾಮಯ್ಯ ಅವರ ಮೇಲೆ ವಿಶೇಷ ಪ್ರೀತಿ ತೋರಿ ನಮಗೆ ಬೆಂಬಲ ನೀಡುವುದಾಗಿ ಪ್ರತಿಜ್ಞೆ ಮಾಡಿ ನಮ್ಮನ್ನು ಹರಸಿ ಕಳುಹಿಸಿದ್ದಾರೆ ಎಂದರು.

ಗ್ಯಾರಂಟಿ ಯೋಜನೆ ಜಾರಿ ಅಸಾಧ್ಯ ಎಂಬ ಬಿಜೆಪಿ ನಾಯಕರ ಹೇಳಿಕೆ ಕುರಿತು ಮಾತನಾಡಿ, ರಾಜ್ಯದ ಜನರಿಗೆ ಅಸಾಧ್ಯವನ್ನು ಸಾಧ್ಯ ಮಾಡುವುದೇ ಮುಖ್ಯ. ಇಂಧನ ಸಚಿವ ಆದಾಗ 10 ಸಾವಿರ ಮೆಗಾ ವ್ಯಾಟ್ ಇದ್ದ ವಿದ್ಯುತ್ ಉತ್ಪಾದನೆ 20 ಸಾವಿರ ಮೆ.ವ್ಯಾಟ್ ಗೆ ಏರಿಕೆ ಮಾಡಲಾಯಿತು. ಅಲ್ಲದೆ ಒಬ್ಬ ರೈತನ ಜಮೀನನ್ನು ವಶಪಡಿಸಿಕೊಳ್ಳದೇ ಈ ಸಾಧನೆ ಮಾಡಲಾಗಿದೆ. ಇದು ಹೇಗೆ ಸಾಧ್ಯ ಆಯಿತು? ನಾವು ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಿದಾಗ ಬಿಜೆಪಿ ಸರ್ಕಾರ ಅದೇ ಮಾದರಿಯಲ್ಲಿ ಗೃಹಿಣಿ ಶಕ್ತಿ ಯೋಜನೆ ಬಗ್ಗೆ ಜಾಹೀರಾತು ನೀಡಿದರು. ನೀವು ಹೇಗೆ ಘೋಷಣೆ ಮಾಡಿದಿರಿ.

ರೈತರಿಗೆ 10 ತಾಸು ವಿದ್ಯುತ್ ನೀಡುತ್ತೇವೆ ಎಂದು ಹೇಗೆ ಹೇಳಿದಿರಿ? ರೈತರ ಆದಾಯ ಡಬಲ್ ಮಾಡುವುದಾಗಿ ಹೇಳಿದ್ದು ನೀವೇ ಅಲ್ಲವೇ? ಕಚ್ಚಾ ತೈಲ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಡೀಸೆಲ್ ಬೆಲೆ ಯಾಕೆ ಹೆಚ್ಚಳ ಮಾಡುತ್ತಿದ್ದೀರಿ ಎಂದು ತಿಳಿಸಿದರು.

ಕಾಂಗ್ರೆಸ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದೆ ಎಂಬ ಪ್ರಧಾನಿ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಅಂಬೇಡ್ಕರ್ ಅವರನ್ನು ಸಂವಿಧಾನ ಕರಡು ಸಮಿತಿಗೆ ನೇಮಿಸಿತು. ಬಿಜೆಪಿ ನಾಯಕರು ಅವರ ಪಕ್ಷ ಕಟ್ಟಿ ಬೆಳೆಸಿದ ಆಡ್ವಾಣಿ, ಮುರಳಿ ಮನೋಹರ್ ಜೋಷಿ, ಯಡಿಯೂರಪ್ಪ ಅವರಿಗೆ ಮಾಡಿರುವ ಅಪಮಾನ ಬಗ್ಗೆ ಯೋಚಿಸಿ. ನಿಮ್ಮ ಮನೆ ನೀವು ಸರಿ ಮಾಡಿಕೊಳ್ಳಿ. ಅಂಬೇಡ್ಕರ್ ಅವರ ಫೋಟೋ ನಾವು ಇಟ್ಟುಕೊಂಡಿದ್ದೇವೆ. ನೀವು ರಾಷ್ಟ್ರಧ್ವಜ ಕೂಡ ಹಾರಿಸಿರಲಿಲ್ಲ. ವಾಜಪೇಯಿ ಹೇಳಿದ ನಂತರ ಹಾರಿಸಿದ್ದೀರಿ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+