ದೇಶದ ಹೆಸರು ಬದಲಾವಣೆಯಿಂದ ಏನು ಲಾಭ; ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆಯೇ?: ಡಿ ಕೆ ಶಿವಕುಮಾರ್ ಪ್ರಶ್ನೆ
ಬೆಂಗಳೂರು, ಸೆಪ್ಟೆಂಬರ್ 06: ದೇಶದ ಹೆಸರು ಬದಲಾವಣೆ ಮಾಡಿದರೆ ಏನು ಲಾಭ. ದೇಶದ ಜನರ ಜೀವನದಲ್ಲಿ ಬದಲಾವಣೆ ಆಗುವುದು ಮುಖ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಬುಧವಾರ ಮಾಧ್ಯಮಗಳ ಜೊತೆಗೆ ಸದಾಶಿವನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ದೇಶದ ಎಲ್ಲ ಜನರಿಗೂ ಅನ್ನ, ಉದ್ಯೋಗ, ಮನೆ ಸಿಕ್ಕರೆ ಅದನ್ನು ಬದಲಾವಣೆ ಎನ್ನಬಹುದು. ಕಳೆದ 9 ವರ್ಷಗಳಲ್ಲಿ ಜನರ ಆದಾಯ ದುಪಟ್ಟಾಯಿತೇ, 15 ಲಕ್ಷ ಹಣ ಬ್ಯಾಂಕ್ ಖಾತೆಗೆ ಬಂದಿದೆಯೇ? ಇಲ್ಲ. ಒಂದೇ ಒಂದು ಅಕ್ಕಿಕಾಳು ಕಡಿಮೆ ಕೊಟ್ಟರು ಬಿಡುವುದಿಲ್ಲ ಎಂದು ಬಿಜೆಪಿಯವರು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದರು, ಆದರೆ ಅವರು ಕೊಟ್ಟ ಮಾತನ್ನು ಒಂದಾದರೂ ಉಳಿಸಿಕೊಂಡಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಶ್ರೀಮಂತರು, ದೊಡ್ಡ ಉದ್ಯಮಿಗಳು ದೇಶಬಿಟ್ಟು ಹೋಗುತ್ತಿದ್ದಾರೆ. 12 ಲಕ್ಷ ಪಾಸ್ಪೋರ್ಟ್ಗಳನ್ನು ಸರ್ಕಾರದ ವಶಕ್ಕೆ ನೀಡಿ ಈ ದೇಶದ ಕೋಟ್ಯಾಧಿಪತಿಗಳು ಬೇರೆ ದೇಶದ ಪೌರತ್ವ ತೆಗೆದುಕೊಂಡಿದ್ದಾರೆ. ನಮ್ಮ ದೇಶದ ಹಣ ಹೊರಗಡೆ ಹೋಗುತ್ತಿದೆ. ಹೆಸರು ಬದಲಾವಣೆಯಿಂದ ಏನೂ ಲಾಭವಿಲ್ಲ. ನಮ್ಮ ಆಚಾರ- ವಿಚಾರ ಬದಲಾವಣೆಯಾಗಬೇಕು ಎಂದು ಹೇಳಿದರು.
ಸರ್ಕಾರ ಜನರ ಕಲ್ಯಾಣ ಮಾಡುವ ಹೊಸ ಕಾನೂನುಗಳನ್ನು ತರಬೇಕು. ನಮ್ಮ ಯುಪಿಎ ಸರ್ಕಾರ ಇದ್ದಾಗ ಮಾಹಿತಿಹಕ್ಕು, ಆರ್ಟಿಐ, ನರೇಗಾ, ಆಹಾರ ಭದ್ರತಾ ಕಾಯ್ದೆಗಳನ್ನು ಜಾರಿಗೆ ತಂದೆವು, ಇಂತಹ ಯೋಚನೆಗಳು ಬಿಜೆಪಿಯವರಿಗೆ ಬರುವುದಿಲ್ಲವೇ? ಎಂದು ಪ್ರಶ್ನಿಸಿದರು.
ಗೃಹ ಸಚಿವರಾದ ಪರಮೇಶ್ವರ್ ಅವರು ಹಿಂದೂ ಧರ್ಮಕ್ಕೆ ಅಪ್ಪ- ಅಮ್ಮ ಯಾರು ಇಲ್ಲ ಎಂದು ಪ್ರಶ್ನಿಸಿರುವ ವಿಚಾರವಾಗಿ ಮಾತನಾಡಿ, ನಾನು ಭಾರತೀಯ ಹಾಗೂ ಹಿಂದೂವಾಗಿರುವುದ್ದಕ್ಕೆ ಹೆಮ್ಮೆ ಪಡುತ್ತೇನೆ ಎಂದು ತಿಳಿಸಿದರು.
ಇನ್ನು ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡಿನ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕಾವೇರಿ ನೀರಿನ ವಿಚಾರವಾಗಿ ನಡೆಯುತ್ತಿರುವ ವಿಚಾರಣೆಯ ಜೂಮ್ ಲಿಂಕ್ ಅನ್ನು ನನಗೆ ಕಳುಹಿಸಿದ್ದರು. ನಾನು ವಿಚಾರಣೆಯನ್ನು ನೋಡಲು ಕಾಯುತ್ತಿದೆ. ಆದರೆ ವಿಚಾರಣೆಯನ್ನು ಸುಪ್ರೀಂಕೋರ್ಟಿನವರು ಮುಂದಕ್ಕೆ ಹಾಕಿದ್ದಾರೆ. ಕಳೆದೆರಡು ದಿನಗಳಲ್ಲಿ ಮಳೆ ಬರುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು, ಮಳೆಯಾಗಿಲ್ಲ. ಹೀಗಾಗಿ ನಾವು ಮತ್ತೆ ಕಾಯಬೇಕು ಎಂದು ತಿಳಿಸಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications