DK Shivakumar Bail Application Verdict Live Updates: ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಜಾ
ಬೆಂಗಳೂರು, ಸೆಪ್ಟೆಂಬರ್ 25 : ಕರ್ನಾಟಕ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿ ವಜಾಗೊಂಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ.
ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯ (ಇಡಿ) ವಿಶೇಷ ನ್ಯಾಯಾಲಯ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿಯ ತೀರ್ಪನ್ನು ಮಂಗಳವಾರ ಪ್ರಕಟಿಸಿತು. ಜಾಮೀನು ನಿರಾಕರಿಸಲಾಗಿದೆ ಎಂದು ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಒಂದೇ ಸಾಲಿನ ಆದೇಶ ನೀಡಿದರು.

ಸತತ ನಾಲ್ಕು ದಿನಗಳ ವಿಚಾರಣೆ ಬಳಿಕ ಸೆಪ್ಟೆಂಬರ್ 3ರಂದು ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್ ಬಂಧಿಸಿತ್ತು. ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದು, ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.
ಡಿ. ಕೆ. ಶಿವಕುಮಾರ್ಗೆ ಇಂದು ಜಾಮೀನು ಸಿಗಲಿದೆ. ಅವರು ಬಿಡುಗಡೆಯಾಗಲಿದ್ದಾರೆ ಎಂದು ಅವರ ಅಪಾರ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದರು. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿ. ಕೆ. ಶಿವಕುಮಾರ್ ಪರವಾಗಿ ತೀರ್ಪು ಬರಲಿ ಎಂದು ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದರು.












Click it and Unblock the Notifications