ತನ್ನ ಬಣದ ಶಾಸಕರಿಂದ ಹೈಕಮಾಂಡ್ ಭೇಟಿ: ಡಿ.ಕೆ.ಶಿವಕುಮಾರ್ ರಿಯಾಕ್ಷನ್
ಡಿ.ಕೆ.ಶಿವಕುಮಾರ್ ಅವರ ಬಣದ ಕೆಲ ಶಾಸಕರು ದೆಹಲಿಗೆ ತೆರಳಿ, ಹೈಕಮಾಂಡ್ ಬಳಿ ಡಿಕೆಶಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆಸಿದ್ದಾರೆ, ಅಲ್ಲದೆ ಡಿಕೆ ಶಿವಕುಮಾರ್ ಅವರೇ ಸಿಎಂ ಸ್ಥಾನಕ್ಕಾಗಿ ತಮ್ಮ ಬಣದ ಶಾಸಕರಿಂದ ಹೈಕಮಾಂಡ್ಗೆ ಒತ್ತಡ ಹಾಕಲು ಮಾಸ್ಟರ್ಪ್ಲ್ಯಾನ್ ಮಾಡಿದ್ದಾರೆ ಎಂಬ ವಿಚಾರದ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ಶಾಸಕರು ದೆಹಲಿಗೆ ಹೋಗಿದ್ದು ಯಾವ ಕಾರಣಕ್ಕೆ ಎಂದು ಕ್ಲಾರಿಟಿ ಕೊಟ್ಟಿದ್ದಾರೆ.
ರಾಜ್ಯದಲ್ಲಿ ಸಿಎಂ ಹುದ್ದೆಯ ಬಗ್ಗೆ ಇರುವ ಊಹಾಪೋಹಗಳ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್, 'ಮುಖ್ಯಮಂತ್ರಿಗಳು ಸಂಪುಟ ಪುನರ್ರಚನೆ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಎಲ್ಲರೂ ಸಚಿವರಾಗಲು ಬಯಸುತ್ತಾರೆ. ಆದ್ದರಿಂದ ಅವರು ದೆಹಲಿಯಲ್ಲಿ ನಾಯಕರನ್ನು ಭೇಟಿಯಾಗುವುದು ಸಹಜ ಎಂದಿದ್ದಾರೆ. ಅದು ಅವರ ಹಕ್ಕು. ನಾವು ಅವರನ್ನು ತಡೆಯಲು ಆಗಲ್ಲ, ಇಲ್ಲ ಎಂದು ಹೇಳಲು ಸಾಧ್ಯವಿಲ್ಲ' ಎಂದಿದ್ದಾರೆ.

'ಸಂಪುಟ ಪುನರ್ರಚನೆಗೆ ಸಿಎಂ ನಿರ್ಧರಿಸಿದ್ದಾರೆ. ಆದ್ದರಿಂದ ಅವರೆಲ್ಲರೂ ಸಚಿವರಾಗಲು ಆಸಕ್ತಿ ಹೊಂದಿದ್ದಾರೆ. ಅವರು ದೆಹಲಿಯಲ್ಲಿ ನಾಯಕರನ್ನು ಭೇಟಿಯಾಗಲು ಹೋಗುವುದು ಸಹಜ. ಅದರ ಹೊರತಾಗಿ, ನಾನು ಏನು ಹೇಳಲಿ? ಅವರಿಗೆ ಎಲ್ಲಾ ಹಕ್ಕಿದೆ. ನಾನು ಯಾರನ್ನೂ ಕರೆದುಕೊಂಡು ಹೋಗಿಲ್ಲ' ಎಂದಿದ್ದಾರೆ ಡಿ.ಕೆ.ಶಿವಕುಮಾರ್.
'ಅವರಲ್ಲಿ ಕೆಲವರು ಹೋಗಿ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ. ಅವರು ಸಿಎಂ ಅವರನ್ನು ಕೂಡ ಭೇಟಿಯಾಗಿದ್ದಾರೆ. ಇದರಲ್ಲಿ ಏನು ತಪ್ಪು? ಅದು ಅವರ ಜೀವನ. ಯಾರೂ ಅವರನ್ನು ಕರೆದಿಲ್ಲ, ಅವರೇ ಸ್ವಯಂಪ್ರೇರಣೆಯಿಂದ ಹೋಗಿ ತಮ್ಮ ಮುಖಗಳನ್ನು ತೋರಿಸುತ್ತಿದ್ದಾರೆ. ಅವರು ಮುಂಚೂಣಿಯಲ್ಲಿದ್ದಾರೆ, ಕೆಲಸ ಮಾಡಬಹುದು ಮತ್ತು ಜವಾಬ್ದಾರಿಯನ್ನು ಬಯಸುತ್ತಾರೆ ಎಂದು ತಮ್ಮ ಉಪಸ್ಥಿತಿಯನ್ನು ತೋರಿಸಲು ಬಯಸಿದ್ದರು' ಎಂದು ಸ್ಪಷ್ಟನೆ ನೀಡಿದ್ದಾರೆ.
'ನನ್ನ ಯಾವ ಬಣವೂ ಇಲ್ಲ'
'ನನ್ನ ಬಳಿ ಯಾವ ಬಣವೂ ಇಲ್ಲ. ನಾನು ಯಾವ ಬಣದ ನಾಯಕನೂ ಅಲ್ಲ. ಗುಂಪು ಕಟ್ಟುವುದು ನನ್ನ ರಕ್ತದಲ್ಲಿಯೇ ಇಲ್ಲ. ಎಲ್ಲ 140 ಶಾಸಕರಿಗೂ ನಾನು ಕಾಂಗ್ರೆಸ್ ಅಧ್ಯಕ್ಷ. ನನಗೆ ಎಲ್ಲ ಶಾಸಕರು ಮುಖ್ಯ. ನಾನು ಯಾವ ಗುಂಪನ್ನು ಕರ್ಕೊಂಡು ಹೋಗಿಲ್ಲ. ಆ ಕೆಲಸ ನಾನು ಮಾಡೋದೂ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ವರ್ಷಗಳನ್ನು ಪೂರ್ಣಗೊಳಿಸುವುದಾಗಿ ಹೇಳಿದ್ದಾರೆ. ಅವರಿಗೆ ಶುಭ ಹಾರೈಸುತ್ತೇನೆ. ನಾವೆಲ್ಲರೂ ಅವರೊಂದಿಗೆ ಕೆಲಸ ಮಾಡುತ್ತೇವೆ. ಮುಖ್ಯಮಂತ್ರಿ ಮತ್ತು ನಾನು ಇಬ್ಬರೂ ಹೈಕಮಾಂಡ್ಗೆ ಬದ್ಧರಾಗಿರುತ್ತೇವೆ ಎಂದು ಪದೇ ಪದೇ ಹೇಳುತ್ತಿದ್ದೇವೆ' ಎಂದು ಸ್ಪಷ್ಟಪಡಿಸಿದ್ದಾರೆ.
-
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications