ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೈಕೋರ್ಟ್ ಮೆಟ್ಟಿಲೇರಿದ ಡಿ. ಕೆ. ಶಿವಕುಮಾರ್ ಆಪ್ತರು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 15 : ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಆಪ್ತರು ಬಂಧನದ ಭೀತಿಯಿಂದಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸದಂತೆ ನಿರ್ದೇಶಿಸುವಂತೆ ಮನವಿ ಮಾಡಿದ್ದಾರೆ.

ಡಿ. ಕೆ. ಶಿವಕುಮಾರ್ ಬಂಧನ ಮತ್ತು ಅವರ ಕುಟುಂಬ ಸದಸ್ಯರ ವಿಚಾರಣೆ ಬಳಿಕ ಮಾಜಿ ಸಚಿವರ ಆಪ್ತರು ಬಂಧನ ಭೀತಿಯಲ್ಲಿದ್ದಾರೆ. ಕರ್ನಾಟಕ ಹೈಕೋರ್ಟ್‌ನಲ್ಲಿ ನಾಲ್ವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.

ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ಇ.ಡಿ ಸಮನ್ಸ್ ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ಇ.ಡಿ ಸಮನ್ಸ್

Recommended Video

DK Shivakumar's Bail Plea Hearing Today | Oneindia Kannada

ಸಚಿನ್ ನಾರಾಯಣ್, ಆಂಜನೇಯ, ಸುನೀಲ್ ಶರ್ಮಾ ಮತ್ತು ರಾಜೇಂದ್ರ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಜಾರಿ ನಿರ್ದೇಶನಾಲಯ ತಮ್ಮನ್ನು ಬಂಧಿಸದಂತೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಎಲ್ಲವನ್ನೂ ಗೆದ್ದು ಬರ್ತೀನಿ, ಎಲ್ಲದಕ್ಕೂ ಉತ್ತರ ಕೊಡ್ತೀನಿ: ಡಿಕೆ ಶಿವಕುಮಾರ್ ಎಲ್ಲವನ್ನೂ ಗೆದ್ದು ಬರ್ತೀನಿ, ಎಲ್ಲದಕ್ಕೂ ಉತ್ತರ ಕೊಡ್ತೀನಿ: ಡಿಕೆ ಶಿವಕುಮಾರ್

ಡಿ. ಕೆ. ಶಿವಕುಮಾರ್ ಆಪ್ತರಾಗಿರುವ ನಾಲ್ವರು ಸಹ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಗಳು. ಈಗಾಗಲೇ ಎರಡು ಬಾರಿ ಸುನೀಲ್ ಶರ್ಮಾ ಇಡಿ ವಿಚಾರಣೆ ಎದುರಿಸಿದ್ದಾರೆ. ಆದರೆ, ಅವರನ್ನು ಬಂಧಿಸಲು ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಇದೆ.

ಡಿಕೆಶಿ ಆಪ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ತಿ ವಿವರ; ಕೋಟಿ ಕೋಟಿ ಹಣ ಇದ್ದರೂ ಬಂಗಾರ ಮಾತ್ರ ಇಲ್ಲಡಿಕೆಶಿ ಆಪ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ತಿ ವಿವರ; ಕೋಟಿ ಕೋಟಿ ಹಣ ಇದ್ದರೂ ಬಂಗಾರ ಮಾತ್ರ ಇಲ್ಲ

ನಾಲ್ಕು ವಾರಗಳ ರಕ್ಷಣೆ

ನಾಲ್ಕು ವಾರಗಳ ರಕ್ಷಣೆ

ಡಿ. ಕೆ. ಶಿವಕುಮಾರ್ ಆಪ್ತರಾದ ಸಚಿನ್ ನಾರಾಯಣ್, ಆಂಜನೇಯ, ಸುನೀಲ್ ಶರ್ಮಾ ಮತ್ತು ರಾಜೇಂದ್ರ ಕರ್ನಾಟಕ ಹೈಕೋರ್ಟ್‌ಗೆ ಹಿಂದೆಯೂ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ನಾಲ್ವರನ್ನು ನಾಲ್ಕುವಾರಗಳ ಕಾಲ ಬಂಧಿಸದಂತೆ ಆದೇಶ ನೀಡಿತ್ತು ಮತ್ತು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತು.

ಇಡಿ ನೋಟಿಸ್ ನೀಡಿದ್ದಾರೆ

ಇಡಿ ನೋಟಿಸ್ ನೀಡಿದ್ದಾರೆ

ಸುಪ್ರೀಂಕೋರ್ಟ್‌ಗೆ ರಜೆ ಇರುವ ಕಾರಣ ಅಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಇಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ ಎಂದು ಹೇಳಿರುವ ನಾಲ್ವರು, ಪುನಃ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮನ್ನು ಬಂಧಿಸದಂತೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ

ಅಕ್ರಮ ಹಣ ವರ್ಗಾವಣೆ ಪ್ರಕರಣ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ. ಕೆ. ಶಿವಕುಮಾರ್‌ ಬಂಧನವಾಗಿದೆ. ಡಿ. ಕೆ. ಶಿವಕುಮಾರ್ ಸಹೋದರ, ಪುತ್ರಿ ವಿಚಾರಣೆ ನಡೆದಿದೆ. ತಾಯಿ ಗೌರಮ್ಮ ಮತ್ತು ಪತ್ನಿ ಉಷಾಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿದೆ. ಆದ್ದರಿಂದ, ಡಿ. ಕೆ. ಶಿವಕುಮಾರ್ ಆಪ್ತರಿಗೆ ಬಂಧನ ಭೀತಿ ಎದುರಾಗಿದೆ.

ಜಾಮೀನು ಅರ್ಜಿ ವಿಚಾರಣೆ

ಜಾಮೀನು ಅರ್ಜಿ ವಿಚಾರಣೆ

ಡಿ. ಕೆ. ಶಿವಕುಮಾರ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ದೆಹಲಿ ಹೈಕೋರ್ಟ್‌ನಲ್ಲಿ ಇಂದು ಮಧ್ಯಾಹ್ನ 3.30ಕ್ಕೆ ನಡೆಯಲಿದೆ. ಡಿ. ಕೆ. ಶಿವಕುಮಾರ್ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯಗೊಳ್ಳಿದ್ದು, ಅವರನ್ನು ಇಡಿ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ.

English summary
Former minister D.K.Shivakumar close aides moved Karnataka high court seeking direction to enforcement directorate not to arrest them in money laundering case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X