ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ಆತ್ಮಸಾಕ್ಷಿಗೆ ಅಭಿನಂದನೆ ಸಲ್ಲಿಸಿದ ಡಿ.ಕೆ.ಶಿವಕುಮಾರ್

|
Google Oneindia Kannada News

ಬೆಂಗಳೂರು, ಫೆಬ್ರವರಿ 10 : 'ಪ್ರತಿಯೊಬ್ಭರಿಗೂ ಆತ್ಮಸಾಕ್ಷಿ ಇರುತ್ತದೆ. ಯಡಿಯೂರಪ್ಪನವರ ಆತ್ಮಸಾಕ್ಷಿಗೆ ಅಭಿನಂದನೆ ಸಲ್ಲಿಸುತ್ತೇನೆ' ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, 'ಅವರು ಹೇಳಿದ ಮೇಲೆ ಮಿಮಿಕ್ರಿ ಪ್ರಶ್ನೆ ಬರುವುದಿಲ್ಲ. ಕಳ್ಳತನ ಸೇರಿ ಐದು ವಿಚಾರವನ್ನು ಯಾರು ಮುಚ್ಚಿಡುವುದಕ್ಕೆ ಆಗುವುದಿಲ್ಲ. ಸತ್ಯ ಯಾವತ್ತಿದ್ದರೂ ಹೊರಗಡೆ ಬರುತ್ತೆ' ಎಂದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಬಹುಮತವಿಲ್ಲ : ಯಡಿಯೂರಪ್ಪಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಬಹುಮತವಿಲ್ಲ : ಯಡಿಯೂರಪ್ಪ

'ಯಡಿಯೂರಪ್ಪನವರ ಆತ್ಮಸಾಕ್ಷಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ಮಿಕ್ಕಿದ ವಿಚಾರವನ್ನು ಸೋಮವಾರ ಸ್ಪೀಕರ್ ನೋಡಿಕೊಳ್ಳುತ್ತಾರೆ. ಕೆಲವರ ವಾಯ್ಸ್ ಅನ್ನು ಯಾರು ಮಿಮಿಕ್ರಿ ಮಾಡಲು ಸಾಧ್ಯವಿಲ್ಲ' ಎಂದು ತಿಳಿಸಿದರು.

ಆಡಿಯೋ ಸುಳ್ಳಾದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ: ಕುಮಾರಸ್ವಾಮಿ ಸವಾಲುಆಡಿಯೋ ಸುಳ್ಳಾದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ: ಕುಮಾರಸ್ವಾಮಿ ಸವಾಲು

DK Shivakumar congratulated Yeddyurappa

'ಆಪರೇಷನ್ ಕಮಲದ ಆಡಿಯೋ ಬಗ್ಗೆ ಮುಖ್ಯಮಂತ್ರಿಗಳು ಏನು ಹೇಳಬೇಕೋ ಅದನ್ನು ಹೇಳಿದ್ದಾರೆ. ಆ ಹುಡುಗ ಸಹ ಏನು ಹೇಳಬೇಕೋ ಅದನ್ನ ಹೇಳಿದ್ದಾರೆ. ಯಡಿಯೂರಪ್ಪ ಅವರು ಸಹ ಏನು ಬೇಕೋ ಅದನ್ನ ಹೇಳಿದ್ದಾರೆ' ಎಂದರು.

ಎಚ್‌ಡಿಕೆ ಆಡಿಯೋ ಅಸ್ತ್ರಕ್ಕೆ ಪ್ರತಿಯಾಗಿ ಬಿಜೆಪಿಯಿಂದ ವಿಡಿಯೋ ಬಾಂಬ್ಎಚ್‌ಡಿಕೆ ಆಡಿಯೋ ಅಸ್ತ್ರಕ್ಕೆ ಪ್ರತಿಯಾಗಿ ಬಿಜೆಪಿಯಿಂದ ವಿಡಿಯೋ ಬಾಂಬ್

ಆಪರೇಷನ್ ಕಮಲದ ಆಡಿಯೋ ಬಗ್ಗೆ ಮಾತನಾಡಿದ್ದ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, 'ಶಾಸಕ ನಾಗನಗೌಡ ಪುತ್ರ ಶರಣಗೌಡರ ಜೊತೆ ನಾನು ಮಾತನಾಡಿದ್ದು ನಿಜ. ಆದರೆ, ಕೆಲ ಸತ್ಯಗಳನ್ನು ಮರೆ ಮಾಚಿದ್ದಾರೆ' ಎಂದು ಹೇಳಿದ್ದರು.

'ಕುಮಾರಸ್ವಾಮಿ ಥರ್ಡ್ ಗ್ರೇಡ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ. ಸೋಮವಾರ ಮುಖ್ಯಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಂಡವಾಳ ಬಿಚ್ಚಿಡುತ್ತೇನೆ' ಎಂದು ತಿಳಿಸಿದ್ದರು.

English summary
Water resources minister D.K.Shivakumar congratulated Karnataka BJP president B.S.Yeddyurappa for his statement on Operation Kamala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X