ಗ್ರಾಮ ಪಂಚಾಯಿತಿ ಚುನಾವಣೆ ಮುಗಿದ ಬೆನ್ನಲ್ಲೆ ಡಿಕೆಶಿ ಮೆಗಾ ಪ್ಲಾನ್!
ಬೆಂಗಳೂರು, ಡಿ. 30: ಪಂಚಾಯತಿ ಮಟ್ಟದಲ್ಲಿ ಪಕ್ಷವನ್ನು ಬಲಗೊಳಿಸಲು ಹಾಗೂ ಮುಂಬರುವ ಉಪ ಚುನಾವಣೆಗಳು, ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಗಳಿಗೆ ಪಕ್ಷದ ಬಲವರ್ಧನೆಗೆ ವಿಭಾಗವಾರು ಸಭೆ ನಡೆಸಲು ಕಾಂಗ್ರೆೆಸ್ ನಿರ್ಧರಿಸಿದೆ.
ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಕ್ಷದ ಎಲ್ಲ ಜಿಲ್ಲಾ ಹಾಗೂ ಬ್ಲಾಕ್ ಮಟ್ಟದ ಅಧ್ಯಕ್ಷರೊಂದಿಗೆ ವರ್ಚುವಲ್ ಸಭೆ ನಡೆಸಿ, ಜನವರಿ 6 ರಂದು ಮೈಸೂರು ವಿಭಾಗದ ಸಭೆಯನ್ನು ಮಂಗಳೂರಿನ ಬಂಟ್ವಾಳದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಈ ಸಭೆಯಲ್ಲಿ ಬ್ಲಾಕ್ ಹಾಗೂ ಜಿಲ್ಲಾಧ್ಯಕ್ಷರು, ಹಾಲಿ ಶಾಸಕರು, ಮಾಜಿ ಸಚಿವರು, ಸಂಸದರು, ಶಾಸಕರು, ಕೆಪಿಸಿಸಿ ಮಾಜಿ ಪದಾದಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಇಡೀ ದಿನ ನಡೆಯುವ ಸಭೆಯಲ್ಲಿ ಜಿಲ್ಲಾ ಮುಖಂಡರು ತಮ್ಮ ಜಿಲ್ಲೆೆಯಲ್ಲಿನ ಸಮಸ್ಯೆೆ ಹಾಗೂ ಪಕ್ಷ ಸಂಘಟನೆಗೆ ಆಗುತ್ತಿರುವ ಸಮಸ್ಯೆೆಯ ಬಗ್ಗೆೆ ಮುಕ್ತವಾಗಿ ಮಾತನಾಡಲು ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಜನವರಿ 8 ಬೆಂಗಳೂರು ವಿಭಾಗದ ಸಭೆಯನ್ನು ರಾಮನಗರದ ಬಿಡದಿಯಲ್ಲಿ, ಜ. 11 ರಂದು ಬೆಳಗಾವಿ ವಿಭಾಗದ ಸಭೆಯನ್ನು ಹುಬ್ಬಳ್ಳಿ ಹಾಗೂ ಜ. 15 ರಂದು ಕಲಬುರ್ಗಿಯಲ್ಲಿ ವಿಭಾಗ ಮಟ್ಟದ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಪಂಚಾಯತಿ ಸಮಿತಿ ರಚನೆ: ಎಲ್ಲ ಜಿಲ್ಲಾ ಮತ್ತು ಬ್ಲಾಕ್ ಅಧ್ಯಕ್ಷರು ಜನವರಿ 25 ರೊಳಗೆ ಪಕ್ಷದ ವತಿಯಿಂದ ಪಂಚಾಯತಿ ಸಮಿತಿಗಳ ಮತ್ತು ನಗರ ಪ್ರದೇಶದಲ್ಲಿ ವಾರ್ಡ್ ಸಮಿತಿಗಳ ರಚನೆ ಮಾಡುವಂತೆ ಸೂಚನೆ ನೀಡಿದ್ದಾಾರೆ. ನಂತರ ಬೂತ್ ಸಮಿತಿ ರಚನೆಗೂ ಸೂಚನೆ ನೀಡಲಾಗಿದೆ.
ಪ್ರತಿ ಪಂಚಾಯತಿ ಸಮಿತಿಯಲ್ಲಿ 5 ಜನ ಪದಾಧಿಕಾರಿಗಳು ಹಾಗೂ ಕನಿಷ್ಠ 25 ಜನ ಸದಸ್ಯರಿರುವಂತೆ ಇರುವಂತೆ ನೋಡಿಕೊಳ್ಳಬೇಕು. ಪ್ರತಿ ಬೂತ್ನವರು ಸಮಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ನಗರ ಪ್ರದೇಶದಲ್ಲಿಯೂ ವಾರ್ಡ್ ಮಟ್ಟದಲ್ಲಿ ಸಮಿತಿ ರಚನೆಗೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ವಿಭಾಗವಾರು ಸಭೆಗಳ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಂಸದ ಧ್ರುವ ನಾರಾಯಣ, ವಿಧಾನ ಪರಿಷತ್ ಸದಸ್ಯ ಎಸ್.ರವಿ ಹಾಗೂ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಶಫಿ ಉಲ್ಲಾ ಹಾಜರಿದ್ದರು.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್








Click it and Unblock the Notifications