DK Shivakumar ED Investigation LIVE Updates: ಭಾವುಕರಾದ ಡಿ.ಕೆ.ಶಿವಕುಮಾರ್, ಅಪ್ಪನ ನೆನೆದು ಗದ್ಗದಿತ
Recommended Video
ಬೆಂಗಳೂರು, ಆಗಸ್ಟ್ 30: ಡಿಕೆ ಶಿವಕುಮಾರ್ ಅವರಿಗೆ ಇಡಿ ಸಂಕಷ್ಟ ಶುರುವಾಗಿದ್ದು, ಇಡಿ ಸಮನ್ಸ್ ರದ್ದು ಮಾಡುವಂತೆ ಕೋರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನಿನ್ನೆ ಹೈಕೋರ್ಟ್ ತಳ್ಳಿ ಹಾಕಿದೆ.
ಹೈಕೋರ್ಟ್, ಡಿಕೆಶಿ ಅರ್ಜಿಯನ್ನು ತಳ್ಳಿ ಹಾಕಿದ ಕೂಡಲೇ ಇಡಿ ಡಿ.ಕೆ.ಶಿವಕುಮಾರ್ ಅವರಿಗೆ ಹೊಸ ಸಮನ್ಸ್ ಕಳುಹಿಸಿದ್ದು, ಇಂದು ಮಧ್ಯಾಹ್ನ 1 ಗಂಟೆಗೆ ದೆಹಲಿಗೆ ಬಂದು ವಿಚಾರಣೆಗೆ ಹಾಜರಾಗುವಂತೆ ಕೋರಿದೆ.
ಬಂಧನದಿಂದ ರಕ್ಷಣೆ: ಮಧ್ಯಾಹ್ನ ಡಿಕೆ ಶಿವಕುಮಾರ್ ಭವಿಷ್ಯ ನಿರ್ಧಾರ
ಡಿ.ಕೆ.ಶಿವಕುಮಾರ್ಗೆ ಅವರ ದೆಹಲಿ ನಿವಾಸದಲ್ಲಿ ದೊರೆತಿದ್ದ ಎಂಟು ಕೋಟಿ ರೂಪಾಯಿ ಅಕ್ರಮ ಹಣದ ಬಗ್ಗೆ ತನಿಖೆಗೆ ಈ ಸಮನ್ಸ್ ಅನ್ನು ಇಡಿ ನೀಡಿದೆ. ಇಂದಿನ ವಿಚಾರಣೆಗೆ ಡಿ.ಕೆ.ಶಿವಕುಮಾರ್ಗೆ ಸಂಕಷ್ಟ ತರುವ ಸಾಧ್ಯತೆ ಇದೆ.
ಇಂದಿನ ಡಿ.ಕೆ.ಶಿವಕುಮಾರ್ ಅವರ ಉತ್ತರಗಳು ಇಡಿಗೆ ತೃಪ್ತಿ ತರದ ಪಕ್ಷದಲ್ಲಿ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆಯೂ ಇದೆ. ಪ್ರಸ್ತುತ ಕುಟುಂಬ ಸಮೇತ ದೇವಾಲಯಕ್ಕೆ ತೆರಳಿರುವ ಡಿ.ಕೆ.ಶಿವಕುಮಾರ್ ಅವರು ಕೆಲವೇ ಸಮಯದಲ್ಲಿ ಸುದ್ದಿಗೋಷ್ಠಿಯಲ್ಲಿ ನಡೆಸಿ ಮಹತ್ವದ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ.
ಕೇಂದ್ರ ಸರ್ಕಾರ ಸಿಬಿಐ,ಇಡಿ ಮೊದಲಾದ ಸ್ವಾಯತ್ತ ತನಿಖಾ ಸಂಸ್ಥೆಗಳನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ದುರುಪಯೋಗ ಮಾಡುತ್ತಿರುವುದು ಖಂಡನೀಯ.
— Siddaramaiah (@siddaramaiah) August 30, 2019
ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿಯೇ ಎದುರಿಸಬೇಕೇ ಹೊರತು ಹೀಗೆ ಅಧಿಕಾರ ದುರ್ಬಳಕೆ ಮೂಲಕ ಅಲ್ಲ.@INCKarnataka