BDA: ಬಿಡಿಎ ಎಂದರೆ ವ್ಯಾಪಾರ, ಬ್ರೋಕರೇಜ್ ಎಂಬ ಕಳಂಕ ತೆಗೆದುಹಾಕಿ: ಡಿ ಕೆ ಶಿವಕುಮಾರ್ ಖಡಕ್ ಸೂಚನೆ
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಕ್ಕೆ ಐವತ್ತು ವರ್ಷ ತುಂಬಿದ್ದು, ಈ ವರ್ಷದಿಂದಲಾದರೂ ಬಿಡಿಎ ಘನತೆ ಬದಲಾಯಿಸಿ. ಬಿಡಿಎ ಎಂದರೆ ವ್ಯಾಪಾರ, ಬ್ರೋಕರೇಜ್ ಎಂಬ ಕಳಂಕವನ್ನು ತೆಗೆದುಹಾಕಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಲಹೆ ನೀಡಿದರು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಡಳಿತ ಸುಧಾರಣೆಗಳು, ಸಾರ್ವಜನಿಕ ಅಹವಾಲು ನಿರ್ವಹಣೆ ಕುರಿತು ಬಿಡಿಎ ನೌಕರರಿಗೆ ತರಬೇತಿ ಕಾರ್ಯಗಾರವನ್ನು ಶಿವಕುಮಾರ್ ಅವರು ಮಂಗಳವಾರ ಉದ್ಘಾಟಿಸಿ ಮಾತನಾಡಿ, ನಮಗೆ ಏನು ತರಬೇತಿ ನೀಡುತ್ತಾರೆ ಎಂದು ನೀವು ಅಚ್ಚರಿಯಾಗಬಹುದು. ನಾವು ಎಷ್ಟೇ ಬುದ್ಧಿವಂತರಾದರೂ ಜ್ಞಾನ, ಅನುಭವದ ಮೂಲಕ ಸಾಯುವವರೆಗೂ ಕಲಿಯುವ ಅಗತ್ಯವಿರುತ್ತದೆ. ಹೊಸ ತಲೆಮಾರು, ಹೊಸ ವ್ಯವಸ್ಥೆ ಬರುತ್ತದೆ. ನಾವು ಅಂಕಿಗಳನ್ನು ಗುಣಿತ ಮಾಡುತ್ತಿದ್ದೆವು, ನಂತರ ಕ್ಯಾಲ್ಕುಲೇಟರ್ ಬಂದಿತು. ನಂತರ ಕಂಪ್ಯೂಟರ್, ಈಗ ಕೃತಕ ಬುದ್ಧಿಮತ್ತೆ ಕಾಲ ಬಂದಿದೆ. ಈಗ ಭೂ ಮಾಪನವನ್ನು ಟೇಪ್ ಹಿಡಿದು ಮಾಡುವ ಅಗತ್ಯವಿಲ್ಲ, ಡ್ರೋನ್ ಮೂಲಕವೇ ಅಳತೆ ಮಾಡಬಹುದಾಗಿದೆ ಎಂದು ತಿಳಿಸಿದರು.

ನಾನು ನನ್ನದೇ ಆದ ರೀತಿಯ ಇಂಟಿಲಿಜೆನ್ಸ್ ಮೂಲಕ ನಿಮ್ಮಲ್ಲಿ ನಡೆಯುತ್ತಿರುವ ಸಂತೆ, ದಂಧೆ, ಏಜೆಂಟ್ ಗಳ ಪಟ್ಟಿ ಪಡೆಯಲು ನನಗೆ ಆರು ತಿಂಗಳು ಬೇಕಾಯಿತು. ಪ್ರತಿ ಹಂತದಲ್ಲಿ ಎಷ್ಟು ಕೊಳಕಿದೆ, ಎಷ್ಟು ಒಳ್ಳೆಯದಿದೆ ಎಂಬುದನ್ನು ಅರಿತಿದ್ದೇನೆ. ಹೀಗಾಗಿ ನಾನು ಎಲ್ಲಾ ದಾಖಲೆಗಳನ್ನು ಡಿಜಿಟಲ್ ಸ್ಕ್ಯಾನ್ ಮಾಡಲು ತೀರ್ಮಾನಿಸಿದ್ದೇನೆ. ಕೆಲವರಿಗೆ ಇದರಿಂದ ಸಮಾಧಾನವಾಗದಿರಬಹುದು. ನಿಮ್ಮಲ್ಲಿ ಈ ರೀತಿ ಕೇವಲ 10% ಮಾತ್ರ ಇರಬಹುದು. ಅವರಿಂದ ಇಡೀ ಬಿಡಿಎಗೆ ಕೆಟ್ಟ ಹೆಸರು ಬರುತ್ತಿದೆ. ನಮ್ಮ ಆತ್ಮಸಾಕ್ಷಿಗೆ ಒಪ್ಪುವಂತೆಯಾದರೂ ನಾವು ಬಿಡಿಎ ಘನತೆಯನ್ನು ಬದಲಿಸಿಕೊಂಡು ಹೋಗಬೇಕು. ಈ ಬಗ್ಗೆ ನಿಮಗೆ ಮಾರ್ಗದರ್ಶನ ನೀಡಲು ತರಬೇತಿ ನೀಡುತ್ತಿದ್ದೇವೆ ಎಂದು ತಿಳಿಸಿದರು.
ಬಿಡಿಎ ಹಾಗೂ ಜಿಬಿಎ ಬೆಂಗಳೂರಿನ ಮುಖವಾಣಿ. ಅಂತಾರಾಷ್ಟ್ರೀಯ ಮಟ್ಟದಲ್ಲಿರುವ ಬೆಂಗಳೂರಿಗೆ ನಿಮ್ಮ ಶಿಸ್ತು ಹಾಗೂ ಪ್ರಾಮಾಣಿಕತೆ ಅಗತ್ಯವಿದೆ. ಇವು ಇಲ್ಲವಾದರೆ ಯಾರು ಏನು ಮಾಡಲು ಸಾಧ್ಯವಿಲ್ಲ. ನೀವು ಪ್ರತಿ ಫೈಲ್ ಗಳನ್ನು ಕೊಕ್ಕೆ ಹಾಕಿ ಓಡಾಡಿಸುವ ಬದಲು ಸಕಾರಾತ್ಮಕ ಮನೋಭಾವದಲ್ಲಿ ಪರಿಹಾರ ಹುಡುಕಿ. ತಪ್ಪು ಮಾಡಿ ನನ್ನ ಕಣ್ಣಿಗೆ ಬೀಳಬೇಡಿ. ಬಿದ್ದರೆ ಬಡಿದು ಬಿಸಾಕುತ್ತೇನೆ. ಕೇಸು ದಾಖಲಿಸಿದ ಬಳಿಕ, ಯಾರಿಂದ ಶಿಫಾರಸ್ಸು ತಂದರೂ ನಾನು ಬಗ್ಗುವುದಿಲ್ಲ.
ಬೆಂಗಳೂರು ಕಟ್ಟುವಲ್ಲಿ ನಿಮ್ಮ ಕೊಡುಗೆಯೂ ಇರಲಿ. ಬಿಡಿಎ ಹಾಗೂ ಬಿಎಂಆರ್ ಡಿಎ ವ್ಯಾಪ್ತಿಯಲ್ಲಿ ಬೆಂಗಳೂರಿನಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಇದೇ ತಿಂಗಳು 17ಕ್ಕೆ ಬಿಡಿಎ ರಚನೆಯಾಗಿ 50 ವರ್ಷ ಪೂರ್ಣಗೊಳ್ಳಲಿದೆ. ಈ ಸಂಭ್ರಮಾಚರಣೆ ವೇಳೆ ಹೆಗ್ಗುರುತು ಬಿಟ್ಟು ಹೋಗಲು ನನ್ನ ಹಾಗೂ ಬಿಡಿಎ ಅಧ್ಯಕ್ಷರಾದ ಹ್ಯಾರೀಸ್ ಅವರ ತಂಡದ ಅಭಿಲಾಶೆಯಾಗಿದೆ. ಇದಕ್ಕೆ ಬಿಡಿಎನಲ್ಲಿ ಪಾರದರ್ಶಕತೆ ತರಬೇಕು. ನೊಂದ ಜನರು ಬಿಡಿಎ ಬಳಿ ಬರುತ್ತಾರೆ. ಜನ ನಿಮ್ಮ ಬಳಿಗೆ ಬಹಳ ಗೌರವಯುತವಾಗಿ ಬರುವಂತಾಗಬೇಕು ಎಂದು ಮಾರ್ಗದರ್ಶನ ನೀಡಿದರು.
ಕೆಲವರು ಶಿವಕುಮಾರ್ ಅವರಂತಹವರು ಈ ರೀತಿ ಮಾತನಾಡುತ್ತಾರಾ ಎಂದು ಭಾವಿಸಬಹುದು. ಅವರಿಗೆ ನಮ್ಮ ಬದುಕಿನಲ್ಲಿರುವ ಶಿಸ್ತಿನ ಬಗ್ಗೆ ಗೊತ್ತಿರುವುದಿಲ್ಲ. ನಮ್ಮ ಶ್ರಮ ಇಲ್ಲದೆ ನಾವು ಈ ಹಂತ ತಲುಪಲು ಸಾಧ್ಯವೇ? ನಾನು ಯಾರಿಗೂ ಮೆಚ್ಚಿಸುವ ಅಗತ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿ ಒಪ್ಪಿಸಿದರೆ ಸಾಕು. ನಾವು ಹೋಗುವಾಗ ಎಲ್ಲವನ್ನು ಹೊತ್ತುಕೊಂಡು ಹೋಗುವುದಿಲ್ಲ. ಸಮಾಜಕ್ಕೆ ಪ್ರತಿಯಾಗಿ ಕೊಡುಗೆ ನೀಡಬೇಕು. ಸರ್ಕಾರಿ ಕೆಲಸ ದೇವರ ಕೆಲಸ ಎಂದು ಕೇಂಗಲ್ ಹನುಮಂತಯ್ಯ ಅವರು ವಿಧಾನಸೌಧದ ದ್ವಾರದಲ್ಲೇ ಬರೆಸಿದ್ದಾರೆ.
ನಿಮ್ಮ ಬಳಿಗೆ ನಾಗರಿಕರು ಬಂದಾಗ ಆದಷ್ಟು ಸಕಾರಾತ್ಮಕವಾಗಿ ಆಲೋಚಿಸಬೇಕು. ಎಲ್ಲದರಲ್ಲೂ ತಪ್ಪು ಕಂಡು ಹಿಡಿಯುತ್ತಾ ಹೋದರೆ, ಆಗುವುದಿಲ್ಲ. ಸಮಸ್ಯೆಗಳಿಗೆ ನೀವು ದಾರಿ ಹುಡುಕಬೇಕು. ಉದಾರ ಮನಸ್ಸಿನಿಂದ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ. ಕಾನೂನು ಬಿಟ್ಟು ಯಾವುದೇ ಕೆಲಸ ಮಾಡಬೇಡಿ ಎಂದು ಹೇಳಿದ್ದೇನೆ. ನಿಮ್ಮಲ್ಲಿ ಅಧಿಕಾರ ಇದ್ದಾಗ ನೀವು ಬೇರೆಯವರಿಗೆ ಸಹಾಯ ಮಾಡಿ, ತೊಂದರೆ ಮಾಡಬೇಡಿ ಎಂದು ಬುದ್ಧಿಮಾತು ಹೇಳಿದರು.
ಇನ್ನು ಟೌನ್ ಪ್ಲಾನಿಂಗ್ ಗೆ ಸಿವಿಲ್ ಹಾಗೂ ಆರ್ಕಿಟೆಕ್ಛರ್ ಇಂಜಿನಿಯರ್ ಹೊರತಾಗಿ ಬೇರೆ ಇಂಜಿನಿಯರ್ ಗಳು ಬರುತ್ತಿದ್ದಾರೆ. ಹೀಗಾಗಿ ಕೆಂಪೇಗೌಡ ಪ್ರಾಧಿಕಾರದ ಜಾಗದಲ್ಲಿ ವಿಟಿಯು ಮೂಲಕ ಬೆಂಗಳೂರಿನಲ್ಲಿ ಟೌನ್ ಪ್ಲಾನಿಂಗ್ ಕಾಲೇಜು ಆರಂಭಿಸಲು ಮುಂದಾಗಿದ್ದೇನೆ. ಮುಂದಿನ ಎಲ್ಲಾ ನಗರಗಳಲ್ಲಿ ಯೋಜನೆ ರೂಪಿಸಬೇಕು. ಕೇವಲ ಬೆಂಗಳೂರು ನಗರದ ಅಕ್ಕಪಕ್ಕ ಮಾತ್ರವಲ್ಲ ಎಲ್ಲೆಡೆ ಸಂಚಾರಕ್ಕೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು. ಈ ದೇಶದಲ್ಲಿ ವಿದ್ಯಾವಂತರು, ಬುದ್ದಿವಂತರಿಲ್ಲದಿದ್ದರೂ ಪ್ರಜ್ಞಾವಂತರು ಇರಬೇಕು.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications