ದೆಹಲಿಯಲ್ಲಿ ಲಡ್ಡು ಹಂಚಿದ ಡಿ.ಕೆ.ಶಿವಕುಮಾರ್ ಅಭಿಮಾನಿಗಳು

Recommended Video

      DK Shivakumar : ದೆಹಲಿಯಲ್ಲಿ ಲಡ್ಡು ಹಂಚಿದ ಡಿ.ಕೆ.ಶಿ ಅಭಿಮಾನಿಗಳು | Oneindia Kannada

      ಬೆಂಗಳೂರು, ಸೆಪ್ಟೆಂಬರ್ 13 : "ನಮ್ಮ ನಾಯಕನಿಗೆ ಇಂದು ಜಾಮೀನು ಸಿಗುತ್ತದೆ. ನಾವು ತಿರುಪತಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಂದಿದ್ದೇವೆ. ಈ ಪ್ರಸಾದವನ್ನು ಅವರಿಗೆ ತಲುಪಿಸಿ" ಎಂದು ಡಿ. ಕೆ. ಶಿವಕುಮಾರ್ ಅಭಿಮಾನಿಗಳು ಪೊಲೀಸರನ್ನು ಒತ್ತಾಯಿಸಿದರು.

      ಬೆಂಗಳೂರು ಹೊರವಲಯದ ಜಿಗಣಿಯಿಂದ ದೆಹಲಿಗೆ ಹೋಗಿರುವ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅಭಿಮಾನಿಗಳು ತುಘಲಕ್ ರೋಡ್ ಪೊಲೀಸ್ ಠಾಣೆ ಮುಂದೆ ತಿರುಪತಿ ಲಾಡು ಹಂಚಿಕೆ ಮಾಡಿದರು. ಲಾಡನ್ನು ನೆಚ್ಚಿನ ನಾಯಕನಿಗೆ ತಲುಪಿಸಿ ಎಂದು ಪೊಲೀಸರಿಗೆ ಮನವಿ ಮಾಡಿದರು.

      DK Shivakumar Fans Distributes Tirupati Laddu

      ಇಡಿ ಅಧಿಕಾರಿಗಳು ತುಘಲಕ್ ರೋಡ್ ಪೊಲೀಸ್ ಠಾಣೆಯಿಂದ ಡಿ. ಕೆ. ಶಿವಕುಮಾರ್‌ರನ್ನು ಇಡಿ ಕಚೇರಿಗೆ ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ. ವಿಚಾರಣೆ ಬಳಿಕ ಮಧ್ಯಾಹ್ನ ಅವರನ್ನು ಇಡಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.

      ಡಿ. ಕೆ. ಶಿವಕುಮಾರ್‌ಗೆ ಇಂದು ಜಾಮೀನು ಸಿಗಲಿ ಎಂದು ಅಭಿಮಾನಿಗಳು ತಿರುಪತಿಯಲ್ಲಿ ವಿಶೇಷ ಪೂಜೆ ಮಾಡಿಸಿದ್ದಾರೆ. ಅಲ್ಲಿಂದ ಲಾಡುವನ್ನು ತೆಗೆದುಕೊಂಡು ದೆಹಲಿಗೆ ಹೋಗಿದ್ದು, ಅದನ್ನು ಡಿ. ಕೆ. ಶಿವಕುಮಾರ್‌ಗೆ ನೀಡಿ ಎಂದು ಪೊಲೀಸರನ್ನು ಒತ್ತಾಯಿಸಿದರು.

      ಸೆಪ್ಟೆಂಬರ್ 3ರಂದು ಇಡಿ ವಿಶೇಷ ನ್ಯಾಯಾಲಯ ಡಿ. ಕೆ. ಶಿವಕುಮಾರ್‌ರನ್ನು ಇಡಿ ವಶಕ್ಕೆ ನೀಡಿತ್ತು. ಇಂದು ಕಸ್ಟಡಿ ಅಂತ್ಯಗೊಳ್ಳಲಿದ್ದು, ಡಿ. ಕೆ. ಶಿವಕುಮಾರ್ ಪರ ವಕೀಲರು ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಲಿದ್ದಾರೆ.

      ಇಡಿ ಹೆಚ್ಚಿನ ವಿಚಾರಣೆಗಾಗಿ ಇನ್ನೂ ನಾಲ್ಕು ದಿನ ಕಸ್ಟಡಿಗೆ ಕೊಡುವಂತೆ ಬೇಡಿಕೆ ಇಡುವ ಸಾಧ್ಯತೆ ಇದೆ. ಡಿ. ಕೆ. ಶಿವಕುಮಾರ್ 10 ದಿನದ ವಿಚಾರಣೆ ಎದುರಿಸಿರುವುದರಿಂದ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆಯೂ ಇದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+