Cabinet Reshuffle: ಸಚಿವ ಸಂಪುಟ ಪುನಾರಚನೆ: ಅಪ್ಡೇಟ್ ಕೊಟ್ಟ ಡಿ.ಕೆ. ಶಿವಕುಮಾರ್
ಬೆಂಗಳೂರು, ಅಕ್ಟೋಬರ್ 09: ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಈ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ. ನನ್ನ ಜೊತೆ ಈ ವಿಚಾರ ಚರ್ಚೆ ಮಾಡಿದರೆ ನಾನು ನನ್ನ ಸಲಹೆ ನೀಡುತ್ತೇನೆ. ಈ ವಿಚಾರವಾಗಿ ಅನಗತ್ಯ ಚರ್ಚೆ ಮಾಡಿ ಗೊಂದಲ ಸೃಷ್ಟಿಸಬೇಡಿ ಎಂದು ನಿಮ್ಮಲ್ಲಿ (ಮಾಧ್ಯಮ) ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ಔತಣಕೂಟ ಆಯೋಜಿಸಿರುವ ಕುರಿತು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಾತನಾಡಿ, ಇದರಲ್ಲಿ ತಪ್ಪೇನಿದೆ? ಒಟ್ಟಿಗೆ ಸೇರಿ ಊಟ ಮಾಡಿ, ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡುವುದು ಸಹಜ ಎಂದು ತಿಳಿಸಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಸಂಪನ್ಮೂಲ ಕ್ರೂಢೀಕರಣ ಹೇಗೆ ಎಂಬ ಬಗ್ಗೆ ಮಾತನಾಡಿ, ಕೆಲವು ಪ್ರದೇಶಗಳಲ್ಲಿ ನಾವು ಬೂಟ್ ಮಾದರಿ (ಬಿಲ್ಡ್ ಆಪರೇಟ್ ಟ್ರಾನ್ಸ್ಪೋರ್ಟ್) ಅಳವಡಿಸಿಕೊಂಡಿದ್ದೇವೆ. ಬೆಂಗಳೂರಿನಲ್ಲಿ ನಾವು 1.25 ಲಕ್ಷ ಕೋಟಿ ಮೊತ್ತದ ಯೋಜನೆಗಳಿಗೆ ಮುಂದಾಗಿದ್ದೇವೆ. ಟನಲ್ ರಸ್ತೆಗೆ 35-40 ಸಾವಿರ ಕೋಟಿ, ಮೇಲ್ಸೇತುವೆಗೆ ಸುಮಾರು 14 ಸಾವಿರ ಕೋಟಿ, ಡಬಲ್ ಡೆಕ್ಕರ್ ರಸ್ತೆಗೆ 10 ಸಾವಿರ ಕೋಟಿ, 16,100 ಕೋಟಿ, ಬಫರ್ ಜೋನ್ ರಸ್ತೆಗೆ 4 ಸಾವಿರ ಕೋಟಿ ಅನುದಾನದ ಅಗತ್ಯವಿದೆ ಎಂದು ವಿವರಿಸಿದರು.
ಬಿಗ್ ಬಾಸ್ ವಿಚಾರವಾಗಿ ಮಾತನಾಡಿದ ಡಿ ಕೆ ಶಿವಕುಮಾರ್ ಅವರು, ಬುಧವಾರ ರಾತ್ರಿ ಡಿಸಿಗೆ ಕರೆ ಮಾಡಿ ಜಾಲಿವುಡ್ ಸ್ಟುಡಿಯೋದವರು ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಒಂದು ಅವಕಾಶ ಕಲ್ಪಿಸಿ ಎಂದು ಸೂಚಿಸಿದ್ದೇನೆ. ನಮ್ಮ ಉದ್ಯಮ ಬೆಳೆಯಬೇಕು. ಇದು ಹೆಚ್ಚಿನ ಮಾಲಿನ್ಯ ಉಂಟು ಮಾಡಲು ದೊಡ್ಡ ಕಾರ್ಖಾನೆಯಲ್ಲ. ಸಣ್ಣಪುಟ್ಟ ನಿಯಮ ಉಲ್ಲಂಘನೆಯಾಗಿದ್ದರೆ ಸರಿಪಡಿಸಿಕೊಳ್ಳಿ, ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಾವಳಿಯನ್ನು ಪಾಲನೆ ಮಾಡಿ ಎಂದು ಸ್ಟುಡಿಯೋದವರಿಗೂ ಹೇಳಿ ಕಳುಹಿಸಿದ್ದೇನೆ" ಎಂದು ತಿಳಿಸಿದರು.
ಬೆಂಗಳೂರಿನಲ್ಲಿ 104 ಕಿ.ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ ರಸ್ತೆ ಯೋಜನೆ ರೂಪಿಸಲಾಗಿದೆ. 40 ಕಿ.ಮೀ ಉದ್ದದ ಟನಲ್ ರಸ್ತೆ ನಿರ್ಮಿಸಲು ಮುಂದಾಗಿದ್ದೇವೆ. ಅನೇಕ ಟೀಕೆಗಳು ವ್ಯಕ್ತವಾಗುತ್ತಿವೆ. ಇದು ಸೂಕ್ತ ಪರಿಹಾರವಲ್ಲದಿದ್ದರೆ ಮುಂಬೈನಲ್ಲಿ ಈ ಯೋಜನೆ ಯಾಕೆ ಮಾಡುತ್ತಿದ್ದಾರೆ? ಜಪಾನ್, ಲಂಡನ್ ನಲ್ಲಿ ಯಾಕೆ ಮಾಡುತ್ತಿದ್ದಾರೆ. ನೀವು ಹೆಬ್ಬಾಳ, ಕೆ.ಆರ್ ಪುರಂ ಜಕ್ಷನ್ ಸೇರಿದಂತೆ ಎಲ್ಲಿ ನೋಡಿದರೂ ಟ್ರಾಫಿಕ್ ಹೆಚ್ಚಾಗಿದೆ. ನಮ್ಮ ಸರ್ಕಾರಕ್ಕೂ ಮುನ್ನ ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ನಾಲ್ಕು ವರ್ಷಗಳ ಅಧಿಕಾರ ಮಾಡಿತ್ತು.
ಈ ಸಮಯದಲ್ಲಿ ಅವರು ಬೆಂಗಳೂರಿನ ಸಮಸ್ಯೆ ಬಗೆಹರಿಸಲು ಒಂದು ಫ್ಲೈಓವರ್, ರಸ್ತೆ ಸೇರಿದಂತೆ ಒಂದೇ ಒಂದು ಕೆಲಸ ಮಾಡಿದ್ದರೆ ಹೇಳಿ, ನಾನು ಇಲ್ಲೇ ನನ್ನ ಹೆಸರು ಬದಲಾಯಿಸಿಕೊಂಡು ಹೋಗುತ್ತೇನೆ. ಟನಲ್ ಹೊರತಾಗಿ ಉಳಿದ ಎಲ್ಲಾ ಯೋಜನೆಗಳು ಮೂರ್ನಾಲ್ಕು ವರ್ಷಗಳಲ್ಲಿ ಮುಕ್ತಾಯವಾಗಲಿದ್ದು, ಟನಲ್ ರಸ್ತೆಗೆ ನಾಲ್ಕು ವರ್ಷಕ್ಕಿಂತ ಹೆಚ್ಚಿನ ಕಾಲಾವಕಾಶ ಬೇಕಾಗಿದೆ. ಈ ಯೋಜನೆಗೆ ಟನರ್ ಕೊರೆಯುವ ಯಂತ್ರ ಬರಲು ಒಂದೂವರೆ ವರ್ಷಬೇಕಾಗುತ್ತದೆ. ಟನಲ್ ರಸ್ತೆಯಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಆಗುವುದಿಲ್ಲ. ಟೀಕೆ ಮಾಡುವವರು ಮಾಡುತ್ತಿರುತ್ತಾರೆ ಎಂದು ತಿಳಿಸಿದರು.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ












Click it and Unblock the Notifications